HOSANAGARA | ಇಬ್ಬರು ಶ್ರೀಗಂಧ ಚೋರರ ಬಂಧನ
ಹೊಸನಗರ : ತಾಲ್ಲೂಕಿನ ಕೆರೆಹಳ್ಳಿ ಹೋಬಳಿ ಹೊಸಳ್ಳಿ ಗ್ರಾಮದ ಸ. ನಂ.18 ರ ಸರ್ಕಾರಿ ಅರಣ್ಯ ಪ್ರದೇಶದಲ್ಲಿ ಶ್ರೀಗಂಧ ಮರವನ್ನು ಅಕ್ರಮವಾಗಿ ಕಡಿತಲೆ ಮಾಡಿ ತುಂಡುಗಳನ್ನಾಗಿ ಪರಿವರ್ತಿಸಿ ಬೈಕಿನಲ್ಲಿ ಸಾಗಾಣಿಕೆ ಮಾಡುತ್ತಿದ್ದ ಇಬ್ಬರು ಶ್ರೀಗಂಧ ಚೋರರನ್ನು ಅರಣ್ಯಾಧಿಕಾರಿಗಳು ಬಂಧಿಸಿದ ಘಟನೆ ಶನಿವಾರ ನಡೆದಿದೆ.
ಬಂಧಿತರನ್ನು ಹೊಸಕೆಸರೆ ಗ್ರಾಮದ ಸೊಪ್ಪಿನಮಲ್ಲೆ ವಾಸಿ ದಿನೇಶ್ ಅಲಿಯಾಸ್ ವಿಜೇತ (31) ಮತ್ತು ಹಿರಿಯೋಗಿ ಗ್ರಾಮದ ಮಾವಿನಕಟ್ಟೆ ವಾಸಿ ರಾಘವೇಂದ್ರ (32) ಎಂದು ಗುರುತಿಸಲಾಗಿದೆ.
ಹೊಸಕೆಸರೆ ಗ್ರಾಮದ ನೀರೇರಿ ವಾಸಿ ಎಂ. ಭದ್ರಪ್ಪ ಅಲಿಯಾಸ್ ಕರಿಮಂಜ (32) ಎಂಬಾತ ತಪ್ಪಿಸಿಕೊಂಡಿದ್ದು, ಈತನ ಪತ್ತೆಗೆ ಬಲೆ ಬೀಸಲಾಗಿದೆ. ಈ ಕೃತ್ಯದಲ್ಲಿ ಒಟ್ಟು 18 ಕೆ.ಜಿ ಶ್ರೀಗಂಧ ಹಾಗೂ ಸಾಗಾಣಿಕೆಗೆ ಉಪಯೋಗಿಸಿದ 03 ಬಜಾಜ್ ಡಿಸ್ಕವರ್ ಕಂಪನಿಯ ಬೈಕ್ ಗಳನ್ನು ವಶಪಡಿಸಿಕೊಂಡಿದ್ದಾರೆ.
ಈ ಕಾರ್ಯಾಚರಣೆಯಲ್ಲಿ ಮೇಲಾಧಿಕಾರಿಗಳ ನಿರ್ದೇಶನದಂತೆ ಹೊಸನಗರ ವಲಯ ಅರಣ್ಯಾಧಿಕಾರಿ ಅನಿಲ್ ಕುಮಾರ್ ಎಸ್., ಹರತಾಳು ಶಾಖೆ ಉಪ ವಲಯ ಅರಣ್ಯಾಧಿಕಾರಿ ಮಂಜುನಾಥ ಕೆ ಎನ್., ಸಿಬ್ಬಂದಿಗಳಾದ ಪುಟ್ಟಸ್ವಾಮಿ ಕೆ. ವಿ, ಭರತ್ ಕುಮಾರ್, ಸುರೇಶ್ ವಿ, ರಾಜು ಎನ್, ಪ್ರಶಾಂತ ಜಿ, ವಾಹನ ಚಾಲಕ ಮಹೇಶ್ ಇನ್ನಿತರರು ಪಾಲ್ಗೊಂಡಿದ್ದರು.
ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…
ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…
ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…
ಪೊಲೀಸರ ದಿಢೀರ್ ದಾಳಿ – ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…
ರಿಪ್ಪನ್ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…