ಗಾಂಜಾ ಮಾರಾಟ ಮಾಡಲು ಬೈಕ್ ಕಳ್ಳತನಗೈದಿದ್ದ ಮೂವರು ಆರೋಪಿಗಳ ಹೆಡೆಮುರಿ ಕಟ್ಟಿದ ಬಂಕಾಪುರ ಪೊಲೀಸರು

ಗಾಂಜಾ ಮಾರಾಟ ಮಾಡಲು ಬೈಕ್ ಕಳ್ಳತನಗೈದಿದ್ದ ಮೂವರು ಆರೋಪಿಗಳ ಹೆಡೆಮುರಿ ಕಟ್ಟಿದ ಬಂಕಾಪುರ ಪೊಲೀಸರು

ಬಂಕಾಪುರ : ಮನೆ ಮುಂಭಾಗ ನಿಲ್ಲಿಸಿದ್ದ ಬೈಕ್ ನ್ನು ಕಳ್ಳತನಗೈದು ಗಾಂಜಾ ಮಾರಾಟ ಮಾಡುತಿದ್ದ ಮೂವರು ಆರೋಪಿಗಳನ್ನು ಒಂದೇ ದಿನದಲ್ಲಿ ಹೆಡೆಮುರಿ ಕಟ್ಟುವಲ್ಲಿ ಬಂಕಾಪುರ ಪಿಎಸ್‌ಐ ನಿಂಗರಾಜ್ ಕೆ ವೈ ನೇತೃತ್ವದ ಪೊಲೀಸರು ಯಶಸ್ವಿಯಾಗಿದ್ದಾರೆ.

ಬಂಕಾಪೂರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಿನಾಂಕ: 15-02-2025 ರಂದು ಮೊಹ್ಮದ್ ಅಕ್ಬರ್ ಎಂಬುವವರು ತಮ್ಮ ಮನೆಯ ಮುಂದೆ ನಿಲ್ಲಿಸಿದ ಬಜಾಜ್ ಪ್ಲಾಟಿನಾ ಬೈಕ್ ನ್ನು ಯಾರೋ ಕಳ್ಳರು ಕಳ್ಳತನ ಮಾಡಿಕೊಂಡು ಹೋಗಿರುವ ಬಗ್ಗೆ ದೂರು ದಾಖಲಾಗಿತ್ತು.

ಕಳ್ಳತನ ಮಾಡಿಕೊಂಡು ಹೋದ ಆರೋಪಿಗಳ ಪತ್ತೆ ಮಾಡಲು ಎಸ್ ಪಿ ಡಾ: ಅಂಶುಕುಮಾರ ಐ.ಪಿ.ಎಸ್ ಮಾರ್ಗದರ್ಶನದಲ್ಲಿ  ನಿಂಗರಾಜ ಕರಕಣ್ಣನವರ, ಎಸ್ ಎಮ್ ವನಹಳ್ಳಿ ಪಿಐಎಸ್‌ಗಳ ನೇತೃತ್ವದಲ್ಲಿ ತಂಡವು ಮೊಟರ್ ಸೈಕಲ್ ಕಳ್ಳತನ ಮಾಡಿದ ಆರೋಪಿತರ ಪತ್ತೆಗಾಗಿ ತನಿಖೆ ಕೈಗೊಳ್ಳಲಾಗಿತ್ತು.

ದಿನಾಂಕ:16-02-2025 ರಂದು ಪ್ರಕರಣದ ತನಿಖೆ ಕೈಕೊಂಡು ಬಂಕಾಪೂರ ಟೋಲ್ ಗೇಟ್ ಹತ್ತಿರ ಹಾವೇರಿ ಕಡೆಯಿಂದ ಟಾಟಾ ಏಸ್ ವಾಹನದಲ್ಲಿ ಬೈಕ್ ಒಂದನ್ನು ಹೇರಿಕೊಂಡು ಹೊರಟಿದ್ದನ್ನು ತನಿಖೆ ಒಳಪಡಿಸಿದಾಗ ಬೈಕ್ ಕಳ್ಳತನ ಮಾಡಿದ ಬಗ್ಗೆ ಒಪ್ಪಿಕೊಂಡ ಆರೋಪಿಗಳಾದ ಸಿದ್ದೇಶ್ ,  ಪವನಕುಮಾರ , ವಿರೇಶ್ , ಬಸಪ್ಪ ರವರನ್ನು ದಸ್ತಗೀರ ಮಾಡಿ ವಿಚಾರಣೆ ಮಾಡುವಾಗ ಕಳ್ಳತನ ಮಾಡಿದ ಮೋಟಾರ್ ಸೈಕಲ್‌ ನ್ನು ಅಕ್ರಮ ಗಾಂಜಾ ಮಾರಾಟ ಮಾಡಲು ತೆಗೆದುಕೊಂಡು ಹೊರಟ ಬಗ್ಗೆ ಬಾಯಿ ಬಿಟ್ಟಿದ್ದಾರೆ.

ಆರೋಪಿತರು ಕಳ್ಳತನಕ್ಕೆ ಉಪಯೋಗಿಸಿದ ಒಂದು ಟಾಟಾ ಏಸ್ ವಾಹನ ಕೆಎ27 ಸಿ 7439 , ಕಳ್ಳತನ ಮಾಡಿದ ಮೋಟರ್ ಸೈಕಲ್ , 02 ಮೊಬೈಲ್ ಪೋನಗಳು ,ನಗದು 1000/- ರೂಗಳು , ಒಟ್ಟು 353 ಗ್ರಾಂ ಅಕ್ರಮ ಗಾಂಜಾ ಒಟ್ಟು 446500/- ರೂಗಳ ವಸ್ತುಗಳನ್ನು ಜಪ್ತಿ ಮಾಡಿ ವಶಕ್ಕೆ ಪಡೆದುಕೊಂಡು ಆರೋಪಿತರಿಗೆ ನ್ಯಾಯಾಂಗದ ಬಂಧನಕ್ಕೆ ಹಾಜರು ಪಡಿಸಲಾಗಿದೆ.

ಈ ಪ್ರಕರಣದಲ್ಲಿ ವಿಶೇಷ ಕಾರ್ಯಾಚರಣೆ ಕೈಕೊಂಡ ಪತ್ತೆ ಮಾಡಿ ಒಂದೇ ದಿನದಲ್ಲಿ ಆರೋಪಿಗಳನ್ನು ಬಂಧಿಸಿದ ಪಿಎಸ್‌ಐ ನಿಂಗರಾಜ್ ಕೆ ವೈ ಪಿಎಸ್‌ಐ2 ಎಸ್ ಎಮ್ ವನಹಳ್ಳಿ ಹಾಗೂ ಪತ್ತೆ ಕಾರ್ಯದಲ್ಲಿ ತೊಡಗಿದ ತಂಡದ ರಜನಿ ಮಎಎಸ್‌ಐ, 2]  ಎ ಕೆ ನದಾಪ, ಹೆಡ್ ಕಾನಸ್ಟೆಬಲ್, ಹಾಗೂ ಕಾನಸ್ಟೆಬಲ್‌ಗಳಾದ ವೆಂಕಟೇಶ ಲಮಾಣಿ, ಗೊವಿಂದ ಲಮಾಣಿ, ಕರಬಸಪ್ಪ ಹಾವಣಗಿ , ಜಬೀವುಲಾ ದೊಡ್ಡಮನಿ, ನೇದವರಿಗೆ ಮಾನ್ಯ ಪೊಲೀಸ ಅಧೀಕ್ಷಕರು ಹಾವೇರಿ ಜಿಲ್ಲೆ ರವರು ಪ್ರಕರಣದಲ್ಲಿ ಪತ್ತೆ ಮಾಡಿದ ಅಧಿಕಾರಿ ಮತ್ತು ಸಿಬ್ಬಂದಿಯವರ ಕಾರ್ಯಕ್ಕೆ ಪ್ರಶಂಸೆ ವ್ಯಕ್ತಪಡಿಸಿರುತ್ತಾರೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ನೀರಿನಲ್ಲಿ ಅಡಗಿ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಲು ಯತ್ನ ; ಸಿನಿಮೀಯ ರೀತಿಯಲ್ಲಿ ರೌಡಿಶೀಟರ್‌ನನ್ನು ಬಂಧಿಸಿದ ಪೊಲೀಸರು

ನೀರಿನಲ್ಲಿ ಅಡಗಿ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಲು ಯತ್ನ ; ಸಿನಿಮೀಯ ರೀತಿಯಲ್ಲಿ ರೌಡಿಶೀಟರ್‌ನನ್ನು ಬಂಧಿಸಿದ ಪೊಲೀಸರು Bhadravathi police dramatically…

4 hours ago

ಅಜಾಗರೂಕ ಚಾಲನೆಯಿಂದ ಕೆರೆಗೆ ನುಗ್ಗಿದ ಲಾರಿ! ತಪ್ಪಿದ ಭಾರಿ ದುರಂತ

ಅಜಾಗರೂಕ ಚಾಲನೆಯಿಂದ ಕೆರೆಗೆ ನುಗ್ಗಿದ ಲಾರಿ! ತಪ್ಪಿದ ಭಾರಿ ದುರಂತ A container lorry allegedly driven recklessly under…

4 hours ago

ರಿಪ್ಪನ್‌ಪೇಟೆ ಶಾಲಾ ಮಕ್ಕಳ ಕ್ರೀಡಾಕೂಟದಲ್ಲಿ ಅನಾಹುತ; ಡಿಸ್ಕಸ್ ತಲೆಗೆ ಬಿದ್ದು ಶಿಕ್ಷಕ ಗಂಭೀರ ಗಾಯ

ರಿಪ್ಪನ್‌ಪೇಟೆ ಶಾಲಾ ಮಕ್ಕಳ ಕ್ರೀಡಾಕೂಟದಲ್ಲಿ ಅನಾಹುತ; ಡಿಸ್ಕಸ್ ತಲೆಗೆ ಬಿದ್ದು ಶಿಕ್ಷಕ ಗಂಭೀರ ಗಾಯ A physical education teacher…

10 hours ago

ನೆಲ್ಲಿಬೀಡು ಟಿಪ್ಪರ್ – ಬೈಕ್ ಅಪಘಾತ: ಮಗಳ ಸಾವಿನ ಬಳಿಕ ಚಿಕಿತ್ಸೆ ಫಲಿಸದೆ ತಂದೆಯೂ ಮೃತ್ಯು

ನೆಲ್ಲಿಬೀಡು ಟಿಪ್ಪರ್ – ಬೈಕ್ ಅಪಘಾತ: ಮಗಳ ಸಾವಿನ ಬಳಿಕ ಚಿಕಿತ್ಸೆ ಫಲಿಸದೆ ತಂದೆಯೂ ಮೃತ್ಯು A tragic tipper-bike…

12 hours ago

ಬಾಲಕ ಓಡಿಸಿದ ಬೊಲೆರೊ, ದಂಡ ಕಟ್ಟಿದ ತಂದೆ! ₹26,500 ಫೈನ್

ಬಾಲಕ ಓಡಿಸಿದ ಬೊಲೆರೊ, ದಂಡ ಕಟ್ಟಿದ ತಂದೆ! ₹26,500 ಫೈನ್ A Shivamogga court fined a father ₹26,500…

12 hours ago

ಸಾಗರ ಗ್ರಾಮಾಂತರ ಠಾಣೆಯ ನೂತನ ಪಿಎಸ್‌ಐ ಆಗಿ ಶಂಕರ್ ಗೌಡ ಪಾಟೀಲ್ ನೇಮಕ

ಸಾಗರ ಗ್ರಾಮಾಂತರ ಠಾಣೆಯ ನೂತನ ಪಿಎಸ್‌ಐ ಆಗಿ ಶಂಕರ್ ಗೌಡ ಪಾಟೀಲ್ ನೇಮಕ PSI Shankar Gowda Patil has…

1 day ago