ಬೈಕ್ ಅಪಘಾತ – ಯುವಕ ಸಾವು
ಬೈಕ್ ಅಪಘಾತದಲ್ಲಿ ಯುವಕನೋರ್ವ ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಕಾಸ್ಪಾಡಿ ಬಳಿ ನಡೆದಿದೆ.
ತ್ಯಾಗರ್ತಿಯ ಚಿಕ್ಕಬಿಲಗುಂಜಿ ಗ್ರಾಮದ ಪ್ರಜ್ವಲ್ (20) ಮೃತ ಯುವಕ. ತ್ಯಾಗರ್ತಿ ಮಾರಿಕಾಂಬಾ ಜಾತ್ರೆಗೆ ಮನೆಗೆ ಬಂದಿದ್ದ ಸಂಬಂಧಿಕರನ್ನು ಊರಿಗೆ ಬಿಟ್ಟು ವಾಪಾಸ್ ಆಗುವ ಸಂದರ್ಭದಲ್ಲಿ ಕಾಸ್ಪಾಡಿ ಬಳಿ ಬೈಕ್ ಅಪಘಾತಗೊಂಡ ಘಟನೆ ಬುಧವಾರ ರಾತ್ರಿ 12 ಗಂಟೆ ಸುಮಾರಿಗೆ ನಡೆದಿದೆ.
ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಯುವಕನನ್ನು ಕೂಡಲೇ ಚಿಕಿತ್ಸೆಗಾಗಿ ಶಿವಮೊಗ್ಗ ಆಸ್ಪತ್ರೆಗೆ ಸಾಗಿಸುವ ವೇಳೆ ಮಾರ್ಗ ಮಧ್ಯದಲ್ಲಿ ಸಾವನ್ನಪ್ಪಿರುವ ಬಗ್ಗೆ ತಿಳಿದುಬಂದಿದೆ.
ಮೃತನಿಗೆ ತಂದೆ, ತಾಯಿ ಮತ್ತು ಸಹೋದರ ಇದ್ದಾರೆ. ಈ ಘಟನೆ ಸಂಬಂಧ ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…
ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…
ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…
ಪೊಲೀಸರ ದಿಢೀರ್ ದಾಳಿ – ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…
ರಿಪ್ಪನ್ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…