ಮೌಲ್ಯಾಧಾರಿತ ಶಿಕ್ಷಣ ಇಂದಿನ ಮಹತ್ವ – ಮಳಲಿ ಶ್ರೀಗಳು
ರಿಪ್ಪನ್ಪೇಟೆ;-ಮೌಲ್ಯಗಳ ಪುನರುತ್ಥಾನಕ್ಕೆ ಮೌಲ್ಯಾಧಾರಿತ ಶಿಕ್ಷಣಕ್ಕೆ ಮಹತ್ವ ನೀಡುವುದು ಇಂದಿನ ಅಗತ್ಯವಾಗಿದೆ ಎಂದು ಮಳಲಿಮಠದ ಡಾ.ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಜಿ ಹೇಳಿದರು.
ಸಮೀಪದ ಹೆದ್ದಾರಿಪುರ ಶ್ರೀರಾಮಕೃಷ್ಣ ಇನ್ಸ್ಟಿಟ್ಯೂಟ್ ಫಾರ್ ಸೋಷಿಯಲ್ ಅವೇರ್ನೆಸ್ ಶ್ರೀ ಶಿವರಾಮಕೃಷ್ಣ ಇಂಟರ್ನ್ಯಾಷನಲ್ ಸ್ಕೂಲ್ ಪೂರ್ವ ಪ್ರಾಥಮಿಕ ಹಿರಿಯ ಪ್ರಾಥಮಿಕ ಅಂಗ್ಲ ಮಾಧ್ಯಮ ಶಾಲೆಯ ಪ್ರತಿಭಾ ಪ್ರದರ್ಶನ ಸಮಾರಂಭದ ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿ ಶಿಕ್ಷಣಕ್ಕೆ ಜಗತ್ತನ್ನು ಬದಲಾಯಿಸುವ ಶಕ್ತಿಯಿದ್ದು ಆರ್ಥಿಕ ಬೆಳವಣಿಗೆ ಸಾಮಾಜಿಕ. ಸಾಮರಸ್ಯ. ಜ್ಞಾನ.ಹೀಗೆ ಗುಣಮಟ್ಟದ.ಮೌಲ್ಯಾಧಾರಿತ ಶಿಕ್ಷಣಕ್ಕೆ ಪೋಷಕ ವರ್ಗ ಮತ್ತು ಶಿಕ್ಷಕ ಸಮೂಹ ಹೆಚ್ಚಿನ ಆಸಕ್ತಿ ವಹಿಸುವಂತಾಗ ಬೇಕು.ವಿದ್ಯಾರ್ಥಿಗಳಲ್ಲಿ ಶಿಸ್ತು.ವ್ಯಕ್ತಿತ್ವ ಸಮಯ ಪ್ರಜ್ಞೆ ಮತ್ತು ನಾಯಕತ್ವ ಗುಣ ಬೆಳಸುವ ಅಗತ್ಯವಿದೆ ಎಂದರು.
ಸಮಾರಂಭದ ಅಧ್ಯಕ್ಷತೆಯನ್ನು ಶ್ರೀರಾಮಕೃಷ್ಣ ಇನ್ಸ್ಟಿಟ್ಯೂಟ್ ಫಾರ್ ಸೋಷಿಯಲ್ ಅವೇರ್ನೆಸ್ ವ್ಯವಸ್ಥಾಪಕ ಸಿಕೆ.ಶಿವರಾಮ ವಹಿಸಿದ್ದರು.
ಕ್ಷೇತ್ರ ಶಾಸಕ ಮಾಜಿ ಸಚಿವ ಆರಗ ಜ್ಞಾನೇಂದ್ರ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿ ವಿದ್ಯಾರ್ಥಿದಸೆಯಲ್ಲಿಯೇ ನಮ್ಮ ಮಕ್ಕಳಿಗೆ ರಾಷ್ಟನಾಯಕ ಮತ್ತು ಕವಿಗಳ ಪರಿಚಯ ಮಾಡಿಸುವ ಮೂಲಕ ಭಾರತೀಯ ಸಂಸ್ಕೃತಿ ಸನಾತನ ಧರ್ಮದ ಕುರಿತು ಜಾಗೃತಿ ಮೂಡಿಸುವುದರೊಂದಿಗೆ ಸುಸಂಸ್ಕೃತರನ್ನಾಗಿ ಬೆಳಸಬೇಕು ಎಂದರು.
ಉಜರೆ ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜ್ನ ದೈಹಿಕ ಶಿಕ್ಷಣ ವಿಭಾಗದ ಮುಖ್ಯಸ್ಥ ಹೆಚ್.ರಮೇಶ್ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ ಕಲಿಕೆ ಸಂದರ್ಭದಲ್ಲಿ ಮಕ್ಕಳು ವಿಸ್ತಾರವಾಗಿ ಆಲೋಚಿಸುವ ಮತ್ತು ತಮಗೆ ಲಭ್ಯವಾಗುವ ಹಲವು ಗ್ರಂಥಗಳ ಮತ್ತು ನೀತಿ ಕಥೆ ಸೇರಿದಂತೆ ಪತ್ರಿಕೆಗಳಲ್ಲಿ ಪ್ರಕಟವಾಗುವ ಕಥೆಗಳನ್ನು ಓದಿ ಮನನ ಮಾಡಿಕೊಂಡು ಬದುಕಿನಲ್ಲಿ ಆಳವಡಿಸಿಕೊಳ್ಳಬೇಕು. ಓದಿನೊಂದಿಗೆ ಕ್ರೀಡಾ ಚಟುವಟಿಕೆಯಲ್ಲಿ ಭಾಗವಹಿಸಿ ಮಾನಸಿಕವಾಗಿ ಮತ್ತು ದೈಹಿಕವಾಗಿ ಸದೃಡರಾಗುವಂತೆ ಕರೆ ನೀಡಿದರು.
ಜಿಲ್ಲಾ ಪಂಚಾಯಿತ್ ಮಾಜಿ ಸದಸ್ಯ ಬಂಡಿ ರಾಮಚಂದ್ರ,ತಾಲ್ಲೂಕ್ ಪಂಚಾಯ್ತಿ ಮಾಜಿ ಆಧ್ಯಕ್ಷ ವಾಸಪ್ಪಗೌಡರು,ಹೆದ್ದಾರಿಪುರ ಗ್ರಾಮ ಪಂಚಾಯಿತ್ ಅಧ್ಯಕ್ಷೆ ವಿನಂತಿ,ಕ್ಷೇತ್ರಶಿಕ್ಷಣಾಧಿಕಾರಿ ಹೆಚ್.ಆರ್.ಕೃಷ್ಣಮೂರ್ತಿ, ಎಪಿಎಂಸಿ ಮಾಜಿ ಅಧ್ಯಕ್ಷ ಹೆಚ್.ವಿ.ಈಶ್ವರಪ್ಪಗೌಡರು ಹಾರೋಹಿತ್ತಲು,ಗ್ರಾಮ ಪಂಚಾಯಿತ್ ಮಾಜಿ ಆಧ್ಯಕ್ಷ ಹೆಚ್.ಕೆ.ನಾಗರಾಜ,ಬಟ್ಟೆಮಲ್ಲಪ್ಪ ವ್ಯಾಸಮಹರ್ಷಿ ಗುರುಕುಲ ಸಂಸ್ಥಾಪಕ ಮಂಜುನಾಥ ಬ್ಯಾಣದ್,ಅಮೃತ ಗ್ರಾಮ ಪಂಚಾಯಿತ್ ಅಧ್ಯಕ್ಷ ಸಚಿನ್ಗೌಡ,ಎಂ.ಜಿ.ಅಪೂರ್ವ,ವಿನುತ ಮುಖ್ಯಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು.
ಶಿಕ್ಷಕಿ ಜಿ.ವೈ.ರಶ್ಮಿ ಸ್ವಾಗತಿಸಿದರು.ವಿದ್ಯಾ ವಾರ್ಷಿಕ ವರದಿ ಓದಿದರು.ಅನುಶ್ರೀ ನಿರೂಪಿಸಿದರು,ಎಸ್.ಎನ್.ರಶ್ಮಿ ವಂದಿಸಿದರು.ನಂತರ ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಮನೋರಂಜನಾ ನೃತ್ಯ ರೂಪಕ ಜರುಗಿತು.
ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…
ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…
ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್ಪೇಟೆಯ ನಿಯಾಜ್ ನಾಸಿರ್ಗೆ ಚಿನ್ನದ ಗೆಲುವು Ripponpete’s Niyaz Nasir wins first place in…
ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…
ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…
ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…