HUMCHA | ಅಕ್ರಮ ಮರ ಕಡಿತಲೆ – ಪ್ರಕರಣ ದಾಖಲು
ಹೊಸನಗರ ತಾಲೂಕಿನ ಹುಂಚ ಗ್ರಾ ಪಂ ವ್ಯಾಪ್ತಿಯ ಹುತ್ತಳ್ಳಿ ಗ್ರಾಮದ ಸರ್ವೇ ನಂಬರ್ 31 ರ ಅರಸಾಳು ವಲಯ ಅರಣ್ಯ ವ್ಯಾಪ್ತಿಯಲ್ಲಿ ನೂರಾರು ಮರ ಗಿಡಗಳನ್ನು ಅಕ್ರಮವಾಗಿ ಕಡಿದಿರುವ ಘಟನೆಗೆ ಸಂಬಂಧಿಸಿ ಭಾನುವಾರ ಪ್ರಕರಣ ದಾಖಲಾಗಿದೆ.
ಹುತ್ತಳ್ಳಿ ಗ್ರಾಮದ ಸರ್ವೆ ನಂ. 31 ರಲ್ಲಿದ್ದ ನೈಸರ್ಗಿಕ ಅರಣ್ಯವನ್ನು ಕಡಿದು ನಾಶಪಡಿಸಿರುವ ಹಿನ್ನೆಲೆಯಲ್ಲಿ ಗ್ರಾಮದ ದೇವರಾಜ್ ಎಂಬುವರ ವಿರುದ್ಧ ಅರಣ್ಯ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಸುಮಾರು 4 ಎಕರೆ ಪ್ರದೇಶದಲ್ಲಿದ್ದ ಬೆಲೆಬಾಳುವ ಮತ್ತಿ, ಹೊನ್ನೆ, ಹುಣಾಲು, ಜಂಬೆ ಹಾಗೂ ಇನ್ನಿತರ ಕಾಡುಜಾತಿ ಮರಗಳನ್ನು ಕಡಿಯಲಾಗಿತ್ತು.
ಮರದ ಬುಡಗಳಿಗೆ ಬೆಂಕಿಯಿಟ್ಟು ಸುಡಲಾದ ಮಾಹಿತಿ ಮೇರೆಗೆ ಸ್ಥಳಕ್ಕೆ ಪರಿಸರವಾದಿ ಗಿರೀಶ್ ಆಚಾರ್ ಹಾಗೂ ತಂಡ ಅರಣ್ಯ ಇಲಾಖೆಯ ಗಮನಕ್ಕೆ ತಂದರು ನಂತರ ಅರಣ್ಯ ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಆರ್ಎಫ್ಓ ಶರಣಪ್ಪ, ಡಿಆರ್ಎಫ್ಓ ಮಂಜುನಾಥ, ಅರಣ್ಯ ರಕ್ಷಕ ಸಂತೋಷ್ ಇನ್ನಿತರರಿದ್ದರು.
ಹೊಸನಗರ ತಾಲೂಕಿನ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಉತ್ತಮ ಶಿಕ್ಷಕಿ ಪ್ರಶಸ್ತಿ | ಶಿಕ್ಷಣ ಸಚಿವರಿಂದ ಅಭಿನಂದನೆ Rural teacher Ratnakumari…
ಬೇಟೆಗೆ ಹೊರಟಿದ್ದ ನಾಲ್ವರ ಬಂಧನ; ಎರಡು ನಾಡ ಬಂದೂಕು ಸೇರಿ ಹಲವು ವಸ್ತು ವಶಕ್ಕೆ ! Four people were…
ಪ್ರವಾಸಿ ಬಸ್ ಪಲ್ಟಿ: ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಸಾವು, 20 ಮಂದಿಗೆ ಗಾಯ nursing students died and 20…
ಬೆಂಗಳೂರು ಮೂಲದ ಸಿವಿಲ್ ಕಂಟ್ರಾಕ್ಟರ್ ತೀರ್ಥಹಳ್ಳಿಯಲ್ಲಿ ನಾಪತ್ತೆ: ಮಾಹಿತಿ ನೀಡಲು ಪೊಲೀಸರ ಮನವಿ 55-year-old Bengaluru-based civil contractor Anil…
ಕರ್ತವ್ಯ ನಿರತ ಅರಣ್ಯ ವಾಚರ್ ಮೇಲೆ ಕರಡಿ ದಾಳಿ: ಆಸ್ಪತ್ರೆಗೆ ಭೇಟಿ ನೀಡಿ ಧೈರ್ಯ ತುಂಬಿದ ಅರಣ್ಯಾಧಿಕಾರಿಗಳು Forest department…
ರಾತ್ರಿ ವೇಳೆ ರೈತನಿಗೆ ಚಾಕು ತೋರಿಸಿ ದರೋಡೆ ಮಾಡಿದ್ದ ಇಬ್ಬರು ಪೊಲೀಸರ ವಶಕ್ಕೆ Shivamogga rural police arrested two…