HUMCHA | ಅಕ್ರಮ ಮರ ಕಡಿತಲೆ – ಪ್ರಕರಣ ದಾಖಲು
ಹೊಸನಗರ ತಾಲೂಕಿನ ಹುಂಚ ಗ್ರಾ ಪಂ ವ್ಯಾಪ್ತಿಯ ಹುತ್ತಳ್ಳಿ ಗ್ರಾಮದ ಸರ್ವೇ ನಂಬರ್ 31 ರ ಅರಸಾಳು ವಲಯ ಅರಣ್ಯ ವ್ಯಾಪ್ತಿಯಲ್ಲಿ ನೂರಾರು ಮರ ಗಿಡಗಳನ್ನು ಅಕ್ರಮವಾಗಿ ಕಡಿದಿರುವ ಘಟನೆಗೆ ಸಂಬಂಧಿಸಿ ಭಾನುವಾರ ಪ್ರಕರಣ ದಾಖಲಾಗಿದೆ.
ಹುತ್ತಳ್ಳಿ ಗ್ರಾಮದ ಸರ್ವೆ ನಂ. 31 ರಲ್ಲಿದ್ದ ನೈಸರ್ಗಿಕ ಅರಣ್ಯವನ್ನು ಕಡಿದು ನಾಶಪಡಿಸಿರುವ ಹಿನ್ನೆಲೆಯಲ್ಲಿ ಗ್ರಾಮದ ದೇವರಾಜ್ ಎಂಬುವರ ವಿರುದ್ಧ ಅರಣ್ಯ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಸುಮಾರು 4 ಎಕರೆ ಪ್ರದೇಶದಲ್ಲಿದ್ದ ಬೆಲೆಬಾಳುವ ಮತ್ತಿ, ಹೊನ್ನೆ, ಹುಣಾಲು, ಜಂಬೆ ಹಾಗೂ ಇನ್ನಿತರ ಕಾಡುಜಾತಿ ಮರಗಳನ್ನು ಕಡಿಯಲಾಗಿತ್ತು.
ಮರದ ಬುಡಗಳಿಗೆ ಬೆಂಕಿಯಿಟ್ಟು ಸುಡಲಾದ ಮಾಹಿತಿ ಮೇರೆಗೆ ಸ್ಥಳಕ್ಕೆ ಪರಿಸರವಾದಿ ಗಿರೀಶ್ ಆಚಾರ್ ಹಾಗೂ ತಂಡ ಅರಣ್ಯ ಇಲಾಖೆಯ ಗಮನಕ್ಕೆ ತಂದರು ನಂತರ ಅರಣ್ಯ ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಆರ್ಎಫ್ಓ ಶರಣಪ್ಪ, ಡಿಆರ್ಎಫ್ಓ ಮಂಜುನಾಥ, ಅರಣ್ಯ ರಕ್ಷಕ ಸಂತೋಷ್ ಇನ್ನಿತರರಿದ್ದರು.
ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…
ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…
ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…
ಪೊಲೀಸರ ದಿಢೀರ್ ದಾಳಿ – ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…
ರಿಪ್ಪನ್ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…