ಬಡ್ಡಿ ಕಿರುಕುಳ – ಮಹಿಳೆಯನ್ನು ವಶಕ್ಕೆ ಪಡೆದ ರಿಪ್ಪನ್ಪೇಟೆ ಪೊಲೀಸರು
ರಿಪ್ಪನ್ಪೇಟೆ : ಸಾಲಕ್ಕೆ ಬಡ್ಡಿ ಕಟ್ಟುವಂತೆ ಕಿರುಕುಳ ನೀಡುತ್ತಿದ್ದ ಹಾಗೂ ಜೀವ ಬೆದರಿಕೆ ಒಡ್ಡುತಿದ್ದ ಮಹಿಳೆಯೊಬ್ಬಳನ್ನು ರಿಪ್ಪನ್ಪೇಟೆ ಠಾಣೆ ಪಿಎಸ್ಐ ಪ್ರವೀಣ್ ಎಸ್ ಪಿ ನೇತ್ರತ್ವದ ಪೊಲೀಸರು ಬಂಧಿಸಿದ್ದಾರೆ.
ಚಿಕ್ಕಜೇನಿ ಗ್ರಾಮದ ಶ್ರುತಿ ಬಂಧಿತ ಆರೋಪಿಯಾಗಿದ್ದಾರೆ.
ಚಿಕ್ಕಜೇನಿ ನಿವಾಸಿ ಪೂಜಾಶ್ರೀ ಎಂಬುವವರು ಶ್ರುತಿ ಎಂಬುವರಿಂದ ₹50 ಸಾವಿರ ಕೈ ಸಾಲ ಮಾಡಿದ್ದರು. ಇದಕ್ಕೆ ಪ್ರತಿ ತಿಂಗಳು ಬಡ್ಡಿ ಕಟ್ಟುತ್ತಿದ್ದರು.ಹಾಗೇಯೆ ಇತ್ತೀಚೆಗೆ ಅಸಲು ಹಣವನ್ನು ಸಹ ತೀರಿಸಿದ್ದರು.ಆದರೆ ಅಷ್ಟಕ್ಕೆ ಸುಮ್ಮನಾಗದ ಮಹಿಳೆ ಯುವತಿಯ ಮನೆಗೆ ಆಗಾಗ ತೆರಳಿ ಕಿರುಕುಳ ನೀಡುತಿದ್ದರು.
15/02/2025 ರಂದು ಪೂಜಾಶ್ರೀ ರವರು ಮನೆಗೆ ತೆರಳುತಿದ್ದಾಗ ಅಡ್ಡಗಟ್ಟಿದ್ದ ಶ್ರುತಿ ಅವಾಚ್ಯವಾಗಿ ನಿಂದಿಸಿ ,ಹಲ್ಲೆ ಮಾಡಿ ಹಣ ನೀಡದೇ ಇದ್ದರೆ ಕೊಲೆ ಮಾಡಿಸುತ್ತೇನೆ ಎಂದು ಬೆದರಿಕೆ ಹಾಕಿ ಹೋಗಿರುವ ಬಗ್ಗೆ ರಿಪ್ಪನ್ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಈ ಹಿನ್ನಲೆಯಲ್ಲಿ ಇಂದು ಬೆಳ್ಳಂಬೆಳ್ಳಗೆ ದಿಡೀರ್ ದಾಳಿ ನಡೆಸಿದ ಪಿಎಸ್ಐ ಪ್ರವೀಣ್ ನೇತ್ರತ್ವದ ಸಿಬ್ಬಂದಿಗಳ ತಂಡ ಬಡ್ಡಿ ಕಿರುಕುಳ ನೀಡುತಿದ್ದ ಮಹಿಳೆಯನ್ನು ವಶಕ್ಕೆ ಪಡೆದಿದ್ದಾರೆ. ರಿಪ್ಪನ್ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾರ್ಯಾಚರಣೆಯಲ್ಲಿ ಸಿಬ್ಬಂದಿಗಳಾದ ಉಮೇಶ್ , ಸಂತೋಷ್ ಕೊರವರ , ಚೆನ್ನಪ್ಪ , ಮಹಿಳಾ ಸಿಬ್ಬಂದಿ ತ್ರಿವೇಣಿ ಮತ್ತು ಮಧುಸೂಧನ್ ಇದ್ದರು.
ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…
ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…
ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…
ಪೊಲೀಸರ ದಿಢೀರ್ ದಾಳಿ – ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…
ರಿಪ್ಪನ್ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…