Categories: Blog

ಪಾಕ್ ವಿರುದ್ಧ ಕೊಹ್ಲಿ “ವಿರಾಟ” ರೂಪ – ಭಾರತಕ್ಕೆ ಭರ್ಜರಿ ಜಯ !

ಪಾಕ್ ವಿರುದ್ಧ ಕೊಹ್ಲಿ “ವಿರಾಟ” ರೂಪ – ಭಾರತಕ್ಕೆ ಭರ್ಜರಿ ಜಯ !

ದುಬೈ : ಇಲ್ಲಿನ ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಚಾಂಪಿಯನ್ಸ್ ಟ್ರೋಫಿಯ ಭಾರತ-ಪಾಕಿಸ್ತಾನದ ಪಂದ್ಯದಲ್ಲಿ ಭಾರತ ತಂಡವು ಪಾಕಿಸ್ತಾನ ತಂಡವನ್ನು ಸೋಲಿಸಿ, ಭರ್ಜರಿ ಜಯ ಗಳಿಸಿದೆ.

ಪಾಕಿಸ್ತಾನ ನೀಡಿದ 242 ರನ್ ಗಳ ಬೆನ್ನಟ್ಟಿದ ಭಾರತವು ವಿರಾಟ್ ಕೊಹ್ಲಿ ಅವರ ಅದ್ಭುತ ಪ್ರದರ್ಶನದಿಂದ ಪಾಕಿಸ್ತಾನಕ್ಕೆ ‘ಹೈಬ್ರಿಡ್’ ಪ್ರದರ್ಶನ ನೀಡಿತು.

ಭಾರತಕ್ಕೆ ಜಯಗಳಿಸಲು ಎರಡು ರನ್ ಬೇಕಿದ್ದಾಗ, ಕೊಹ್ಲಿಗೆ ಶತಕ ಪೂರೈಸಲು 4 ರನ್ ಅಗತ್ಯವಿತ್ತು. ಆಗ ವಿರಾಟ್ ದರ್ಶನ ನೀಡಿದ ಕೊಹ್ಲಿ ಬಾಲ್ ಅನ್ನು ಬೌಂಡರಿ ಗೆ ಎತ್ತಿ ಶತಕ ಪೂರೈಸಿದರು. ತಂಡವನ್ನು ಗೆಲ್ಲಿಸಿ ಭರ್ಜರಿ ಮನರಂಜನೆ ನೀಡಿದರು. ತಾನು ಕಿಂಗ್ ಕೊಹ್ಲಿ ಎನ್ನುವುದನ್ನು ಸಾಬೀತು ಪಡಿಸಿದರು.

ಇಂದು ದುಬೈನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಪಾಕಿಸ್ತಾನ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತ್ತು. ಇನ್ನಿಂಗ್ಸ್ ಆರಂಭದಿಂದಲೇ ಸ್ಥಿರ ಪ್ರದರ್ಶನ ನೀಡಿದ ಪಾಕ್ ಆಟಗಾರರು ಉತ್ತಮ ಆರಂಭ ಪಡೆದುಕೊಂಡರು.ಆದ್ರೆ ನಂತರದಲ್ಲಿ ಭಾರತೀಯ ಬೌಲರ್ ಗಳು ಪಾರಮ್ಯ ಮೆರೆದಿದ್ದು 49.4 ಓವರ್ ಗಳಲ್ಲಿ 241 ರನ್ ಗಳಿಗೆ ಪಾಕಿಸ್ತಾನ ಸರ್ವ ಪತನ ಕಂಡಿತು.

ಭಾರತದ ಪರವಾಗಿ ಕುಲ್ದೀಪ್ ಯಾದವ್ 3 ವಿಕೆಟ್ ಪಡೆದರೆ, ಹಾರ್ದಿಕ್ ಪಾಂಡ್ಯ 2 ವಿಕೆಟ್, ಇನ್ನುಳಿದಂತೆ ಹರ್ಷಿತ್ ರಾಣಾ , ಅಕ್ಷರ್ ಪಟೇಲ್ ಮತ್ತು ಜಡೇಜಾ ತಲಾ ಒಂದು ವಿಕೆಟ್ ಪಡೆದಿದ್ದಾರೆ. ಪಾಕಿಸ್ತಾನದ ಪರವಾಗಿ ಸೌದ್ ಶಕೀಲ್ 62 ಮತ್ತು ಅಕ್ಸರ್ 46 ರನ್ ಬಾರಿಸಿ ತಂಡದ ಮೊತ್ತಕ್ಕೆ ಕೊಡುಗೆ ನೀಡಿದರು.

ಪಾಕಿಸ್ತಾನದ ಈ ಟಾರ್ಗೆಟ್ ಬೆನ್ನತಿದ ಭಾರತಕ್ಕೆ ನಾಯಕ ರೋಹಿತ್ ಶರ್ಮ ಮತ್ತು ಶುಭಮನ್ ಗಿಲ್ ಉತ್ತಮ ಅಡಿಪಾಯ ಹಾಕಿಕೊಟ್ಟರು.ಆದ್ರೆ 20 ರನ್ ಗಳಿಸಿ ಆಡುತ್ತಿದ್ದ ರೋಹಿತ್ ಶರ್ಮಾ, ಅಫ್ರಿದಿ ಬೌಲಿಂಗ್ ನಲ್ಲಿ ಬೋಲ್ಡ್ ಆಗುವ ಮೂಲಕ ತಮ್ಮ ವಿಕೆಟ್ ಒಪ್ಪಿಸಿದರು.ಆ ನಂತರ ಜೊತೆಯಾದ ಗಿಲ್ ಮತ್ತು ಕೊಹ್ಲಿ ಉತ್ತಮ ಇನಿಂಗ್ಸ್ ಕಟ್ಟಿಕೊಟ್ಟರು.

ಆದ್ರೆ 46 ರನ್ ಗಳಿಸಿ ಉತ್ತಮವಾಗಿ ಆಡುತ್ತಿದ್ದ ಗಿಲ್ ಅಬ್ರಾರ್ ಅಹ್ಮದ್ ಸ್ಪಿನ್ ಬಾಲ್ ಗೆ ಕ್ಲೀನ್ ಬೋಲ್ಡ್ ಆದರು. ಆ ನಂತರ ಜೊತೆಗೂಡಿದ ಕೊಹ್ಲಿ & ಶ್ರೇಯಸ್ ಅಯ್ಯರ್ ಜೋಡಿ ತಾಳ್ಮೆಯ ಆಟ ಪ್ರದರ್ಶಿಸಿದರು. ವಿರಾಟ್ ಮತ್ತು ಶ್ರೇಯಸ್ ಅಯ್ಯರ್ ಜೋಡಿ ಅಕ್ಷರಶಃ ಪಾಕ್ ಬೌಲರ್ ಗಳನ್ನು ಕಾಡಿದರು. ಈ ಜೋಡಿಯ ಜೊತೆಯಾಟ ಭಾರತವನ್ನು ಗೆಲುವಿನ ದಿಕ್ಕಿಗೆ ಕೊಂಡೊಯ್ಯಿತು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ

ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ Forest Flying Squad officials…

5 hours ago

ರಿಪ್ಪನ್‌ಪೇಟೆಯ ನಿವೃತ್ತ ಶಿಕ್ಷಕ, ಶಿಕ್ಷಣ ಪ್ರೇಮಿ ಬಿ. ಶೇಖರಪ್ಪ ಮಾಸ್ಟರ್ ನಿಧನ; ರಂಭಾಪುರಿ ಜಗದ್ಗುರುಗಳಿಂದ ಸಂತಾಪ

ರಿಪ್ಪನ್‌ಪೇಟೆಯ ನಿವೃತ್ತ ಶಿಕ್ಷಕ, ಶಿಕ್ಷಣ ಪ್ರೇಮಿ ಬಿ. ಶೇಖರಪ್ಪ ಮಾಸ್ಟರ್ ನಿಧನ; ರಂಭಾಪುರಿ ಜಗದ್ಗುರುಗಳಿಂದ ಸಂತಾಪ Retired teacher and…

18 hours ago

ಸಾಗರೋತ್ತರದಲ್ಲೂ ಹುಟ್ಟೂರಿನ ಕಳಕಳಿ | ನೊಂದವರ ಬಾಳಲ್ಲಿ ಬೆಳಕಾದ ರಿಪ್ಪನ್‌ಪೇಟೆಯ ಜಿಸಿಸಿ ಯುವಪಡೆಗೆ ಶಾಸಕರಿಂದ ವಿಶೇಷ ಸನ್ಮಾನ

ಸಾಗರೋತ್ತರದಲ್ಲೂ ಹುಟ್ಟೂರಿನ ಕಳಕಳಿ | ನೊಂದವರ ಬಾಳಲ್ಲಿ ಬೆಳಕಾದ ರಿಪ್ಪನ್‌ಪೇಟೆಯ ಜಿಸಿಸಿ ಯುವಪಡೆಗೆ ಶಾಸಕರಿಂದ ವಿಶೇಷ ಸನ್ಮಾನ ​ಮಾನವೀಯತೆಯೆಂಬುದು ಕೇವಲ…

18 hours ago

ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಒತ್ತು ನೀಡಿ – ಶಾಸಕ ಬೇಳೂರು ಗೋಪಾಲಕೃಷ್ಣ

ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಒತ್ತು ನೀಡಿ - ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆಯಲ್ಲಿ ಈದ್ ಮಿಲಾದ್ ಅಂಗವಾಗಿ ಸೌಹಾರ್ಧ…

18 hours ago

ರಿಪ್ಪನ್‌ಪೇಟೆ ಗಣೇಶೋತ್ಸವ ರಾಜ್ಯಕ್ಕೇ ಮಾದರಿಯಾಗಲಿ: ಶಾಂತಿ ಸಮಿತಿ ಸಭೆಯಲ್ಲಿ ಎಎಸ್ ಪಿ ಡಾ. ಭಾನುಪ್ರಕಾಶ್ ಕರೆ

ರಿಪ್ಪನ್‌ಪೇಟೆ ಗಣೇಶೋತ್ಸವ ರಾಜ್ಯಕ್ಕೇ ಮಾದರಿಯಾಗಲಿ: ಶಾಂತಿ ಸಮಿತಿ ಸಭೆಯಲ್ಲಿ ಎಎಸ್ ಪಿ ಡಾ.ಭಾನುಪ್ರಕಾಶ್ ಕರೆ Thirthahalli DySP Dr. Bhanuprakash…

20 hours ago

ರಿಪ್ಪನ್‌ಪೇಟೆಯ ಹೆಮ್ಮೆಯ ವಿದ್ಯಾದೇಗುಲಕ್ಕೆ 100 ವರ್ಷ; ಸೆ.10ರಂದು ಹಳೆಯ ವಿದ್ಯಾರ್ಥಿಗಳ ಮಹತ್ವದ ಸಭೆ

ರಿಪ್ಪನ್‌ಪೇಟೆಯ ಹೆಮ್ಮೆಯ ವಿದ್ಯಾದೇಗುಲಕ್ಕೆ 100 ವರ್ಷ; ಸೆ.10ರಂದು ಹಳೆಯ ವಿದ್ಯಾರ್ಥಿಗಳ ಮಹತ್ವದ ಸಭೆ ಶತಮಾನೋತ್ಸವ ಆಚರಣೆಗೆ ಭರ್ಜರಿ ಸಿದ್ಧತೆ :…

24 hours ago