ಜನಪದ ವೈದ್ಯರತ್ನ ಮಂಗಳದ ನಾಟಿ ವೈದ್ಯ ಎಂ ಬಿ ಶಿವಣ್ಣಗೌಡ ಇನ್ನಿಲ್ಲ…

ಜನಪದ ವೈದ್ಯರತ್ನ ಮಂಗಳದ ನಾಟಿ ವೈದ್ಯ ಎಂ ಬಿ ಶಿವಣ್ಣಗೌಡ ಇನ್ನಿಲ್ಲ…

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಕೋಣಂದೂರು ಸಮೀಪದ ಮಂಗಳ ಗ್ರಾಮದ ಜನಪದ ವೈದ್ಯ ರತ್ನ ನಾಟಿ ವೈದ್ಯ ಎಂ ಬಿ ಶಿವಣ್ಣಗೌಡ ಇಂದು ಬೆಳಿಗ್ಗೆ ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ.

ನಾಲ್ಕೈದು ದಶಕಗಳಿಂದ ಪಾರಂಪರಿಕ ನಾಟಿ ವೈದ್ಯ ವೃತ್ತಿ ಯಲ್ಲಿ ಪ್ರಚಾರ ವಿಲ್ಲದೇ ಯಶಸ್ಸು ಕಂಡ ಮಂಗಳದ ಶಿವಣ್ಣ ಗೌಡರು ವಯೋಸಹಜ ಖಾಯಿಲೆಯಿಂದ ಇಂದು ಮುಂಜಾನೆ 4.45 ಕ್ಕೆ ದೈವಾಧೀನರಾಗಿದ್ದಾರೆ.

ಮಲೆನಾಡಿನ ತೀರ್ಥಹಳ್ಳಿ ತಾಲೂಕಿನ ಕೋಣಂದೂರಿನ ಸಮೀಪದ ರಾಮನಸರ ಮಂಗಳ ಇಂದು ರಾಜ್ಯ ದಲ್ಲೇ ಹೆಸರು ಪಡೆದುಕೊಂಡಿದೆ. ಪಾರಂಪರಿ ನಾಟಿ ಔಷಧಿ ನೀಡುತ್ತಾ
ಸಾವಿರಾರು ಜನರ ಬದುಕಿಗೆ ಆಶಾಕಿರಣರಾಗಿದ್ದ ಮಂಗಳದ ಶಿವಣ್ಣ ಗೌಡರು. ತಮ್ಮ ಇಳಿವಯಸ್ಸಿನಲ್ಲು ಹುಮ್ಮಸ್ಸಿನಿಂದ ಸೇವೆ
ಮಾಡುತ್ತ.ಕೈಕಾಲು ಮುರಿತ ಬೆನ್ನುನೋವು ಮೂಳೆ
ನೋವುಗಳಿಗೆ ಇವರು ಔಷಧಿ ಗಳನ್ನು ನೀಡಿ ಸೈ
ಎನಿಸಿಕೊಂಡಿದ್ದಾರೆ.  ರಾಜ್ಯದ ನಾನಾ ಭಾಗಗಳಿಂದ ಜನರು ಇವರ ಚಿಕಿತ್ಸೆಗೆ ಮಾರುಹೋಗಿದ್ದರು.

ಇವರ ಮಗ ಶ್ರೀಕಾಂತ್ ಕೂಡ ನಾಟಿ ವೈದ್ಯರಾಗಿದ್ದು ಇವರ ಜೊತೆ ಸೇವೆಯಲ್ಲಿ ನೆರವಾಗುತಿದ್ದರು.

ಸಮಾಜದ ಅನೇಕ ಪ್ರತಿಷ್ಠಿತ ರು ಇವರ ಸೇವೆ ಪಡೆದುಕೊಂಡಿದ್ದಾರೆ.ಮಾಜಿ ಸಚಿವೆ ಮನೋರಮ ಮದ್ವರಾಜ್ ಪತ್ರಕರ್ತೆ ಗೌರಿ ಲಂಕೇಶ್ ಸಾಹಿತಿಗಳಾದ ಚಂದ್ರಶೇಖರ್ ಕಂಬಾರ್ ಸಚಿವರಾದ ಈಶ್ವರಪ್ಪನವರು ಹಾಗೂ ಹೊರ ರಾಜ್ಯಗಳ ಹಾಗೂ ಹೊರರಾಷ್ಟ್ರದ ಜನರು
ಪ್ರಯೋಜನವನ್ನು ಪಡೆದುಕೊಂಡಿದ್ದಾರೆ.
ಮಾಜಿ ಪ್ರದಾನಿ ಹೆಚ್ ಡಿ ದೇವೆಗೌಡರು, ಮಾಜಿ ಮುಖ್ಯ ಮಂತ್ರಿ ಮತ್ತು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ರವರು ಇವರ ಸೇವೆಯನ್ನು ಮೆಚ್ಚಿದ್ದರು.

ಕರ್ನಾಟಕ ಪಾರಂಪರಿಕ ವೈದ್ಯ ಪರಿಷತ್ ನಿಂದ ಜಾನಪದ ವೈದ್ಯರತ್ನ ಪ್ರಶಸ್ತಿ, ಹಿರೇಕೆರೂರು ಸ್ವಾಮಿಗಳಿಂದ ಸನ್ಮಾನ ಬಹಳಷ್ಟು ಸಂಘ ಸಂಸ್ಥೆ ಗಳ ಸನ್ಮಾನ ಪ್ರಶಸ್ತಿ ಪುರಸ್ಕಾರ ಗಳು ಇವರನ್ನು
ಹುಡುಕಿಕೊಂಡು ಬಂದಿದೆ…

ಜನಪದ ವೈದ್ಯ ಲೋಕಕ್ಕೆ ಅವಿಸ್ಮರಣೀಯ ಸೇವೆ ನೀಡಿದ್ದ ನಾಟಿ ವೈದ್ಯ ಶಿವಣ್ಣಗೌಡರು ಇನ್ನೂ ನೆನಪು ಮಾತ್ರ…

– ರಫ಼ಿ ರಿಪ್ಪನ್‌ಪೇಟೆ

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಹೊಸನಗರ ತಾಲೂಕಿನ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಉತ್ತಮ ಶಿಕ್ಷಕಿ ಪ್ರಶಸ್ತಿ | ಶಿಕ್ಷಣ ಸಚಿವರಿಂದ ಅಭಿನಂದನೆ

ಹೊಸನಗರ ತಾಲೂಕಿನ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಉತ್ತಮ ಶಿಕ್ಷಕಿ ಪ್ರಶಸ್ತಿ | ಶಿಕ್ಷಣ ಸಚಿವರಿಂದ ಅಭಿನಂದನೆ Rural teacher Ratnakumari…

7 hours ago

ಬೇಟೆಗೆ ಹೊರಟಿದ್ದ ನಾಲ್ವರ ಬಂಧನ; ಎರಡು ನಾಡ ಬಂದೂಕು ಸೇರಿ ಹಲವು ವಸ್ತು ವಶ

ಬೇಟೆಗೆ ಹೊರಟಿದ್ದ ನಾಲ್ವರ ಬಂಧನ; ಎರಡು ನಾಡ ಬಂದೂಕು ಸೇರಿ ಹಲವು ವಸ್ತು ವಶಕ್ಕೆ ! Four people were…

20 hours ago

ಪ್ರವಾಸಿ ಬಸ್ ಪಲ್ಟಿ: ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಸಾವು, 20 ಮಂದಿಗೆ ಗಾಯ

ಪ್ರವಾಸಿ ಬಸ್ ಪಲ್ಟಿ: ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಸಾವು, 20 ಮಂದಿಗೆ ಗಾಯ nursing students died and 20…

21 hours ago

ಬೆಂಗಳೂರು ಮೂಲದ ಸಿವಿಲ್ ಕಂಟ್ರಾಕ್ಟರ್ ತೀರ್ಥಹಳ್ಳಿಯಲ್ಲಿ ನಾಪತ್ತೆ: ಮಾಹಿತಿ ನೀಡಲು ಪೊಲೀಸರ ಮನವಿ

ಬೆಂಗಳೂರು ಮೂಲದ ಸಿವಿಲ್ ಕಂಟ್ರಾಕ್ಟರ್ ತೀರ್ಥಹಳ್ಳಿಯಲ್ಲಿ ನಾಪತ್ತೆ: ಮಾಹಿತಿ ನೀಡಲು ಪೊಲೀಸರ ಮನವಿ 55-year-old Bengaluru-based civil contractor Anil…

1 day ago

ಕರ್ತವ್ಯ ನಿರತ ಅರಣ್ಯ ವಾಚರ್ ಮೇಲೆ ಕರಡಿ ದಾಳಿ: ಆಸ್ಪತ್ರೆಗೆ ಭೇಟಿ ನೀಡಿ ಧೈರ್ಯ ತುಂಬಿದ ಅರಣ್ಯಾಧಿಕಾರಿಗಳು

ಕರ್ತವ್ಯ ನಿರತ ಅರಣ್ಯ ವಾಚರ್ ಮೇಲೆ ಕರಡಿ ದಾಳಿ: ಆಸ್ಪತ್ರೆಗೆ ಭೇಟಿ ನೀಡಿ ಧೈರ್ಯ ತುಂಬಿದ ಅರಣ್ಯಾಧಿಕಾರಿಗಳು Forest department…

1 day ago

ರಾತ್ರಿ ವೇಳೆ ರೈತನಿಗೆ ಚಾಕು ತೋರಿಸಿ ದರೋಡೆ ಮಾಡಿದ್ದ ಇಬ್ಬರು ಪೊಲೀಸರ ವಶಕ್ಕೆ

ರಾತ್ರಿ ವೇಳೆ ರೈತನಿಗೆ ಚಾಕು ತೋರಿಸಿ ದರೋಡೆ ಮಾಡಿದ್ದ ಇಬ್ಬರು ಪೊಲೀಸರ ವಶಕ್ಕೆ Shivamogga rural police arrested two…

1 day ago