ಮೈಕ್ರೋ ಫೈನಾನ್ಸ್ ಕಿರುಕುಳ: ಜೈಲುಶಿಕ್ಷೆ 3 ವರ್ಷದಿಂದ 10 ವರ್ಷಕ್ಕೆ ಏರಿಕೆ- ಗೃಹ ಸಚಿವ ಪರಮೇಶ್ವರ್

ಮೈಕ್ರೋ ಫೈನಾನ್ಸ್ ಕಿರುಕುಳ: ಜೈಲುಶಿಕ್ಷೆ 3 ವರ್ಷದಿಂದ 10 ವರ್ಷಕ್ಕೆ ಏರಿಕೆ- ಗೃಹ ಸಚಿವ ಪರಮೇಶ್ವರ್

ಬೆಂಗಳೂರು: ಮೈಕ್ರೋ ಫೈನಾಸ್ಸ್‌ನವರ ಹಾವಳಿ ತಡೆಗೆ ರಾಜ್ಯ ಸರ್ಕಾರ ಸುಗ್ರೀವಾಜ್ಞೆಗೆ ಮುಂದಾಗಿದ್ದು,  ಇದಕ್ಕೆ ಸಂಬಂಧಿಸಿದ ಕರಡು ಪ್ರತಿಯನ್ನು ರಾಜ್ಯಪಾಲರಿಗೆ ರವಾನಿಸಲಾಗಿದೆ.

ಈ ಕುರಿತು ಮಾತನಾಡಿರುವ ಗೃಹಸಚಿವ ಡಾ.ಜಿ. ಪರಮೇಶ್ವರ್,  ರಾಜ್ಯದಲ್ಲಿ ಮೈಕ್ರೋಫೈನಾನ್ಸ್ ದೌರ್ಜನ್ಯಕ್ಕೆ ಸರಣಿ ಆತ್ಮಹತ್ಯೆ ಪ್ರಕರಣಗಳು ನಡೆಯುತ್ತಿವೆ. ಇದರ ಮಧ್ಯ ನೆನ್ನೆ ರಾಜ್ಯಪಾಲರಿಗೆ ಮೈಕ್ರೋ ಫೈನಾನ್ಸ್ ದೌರ್ಜನ್ಯ ತಡೆ ಕುರಿತು ಕರಡು ಪ್ರತಿಯನ್ನು ಕಳುಹಿಸಲಾಗಿದ್ದು, ಇಂದು ರಾಜ್ಯಪಾಲರು ಕರಡು ಪ್ರತಿಯನ್ನು ಪರಿಶೀಲಿಸಿ ಅಂಕಿತ ಹಾಕುವ ಸಾಧ್ಯತೆ ಇದೆ. ಮೈಕ್ರೋ ಫೈನಾನ್ಸ್ ಕಿರುಕುಳ ತಪ್ಪಿಸಲು ಸುಗ್ರೀವಾಜ್ಞೆಯಲ್ಲಿ ಈ ಹಿಂದೆ ಶಿಕ್ಷೆಯನ್ನು ಮೂರು ವರ್ಷ ಬದಲು 10 ವರ್ಷಕ್ಕೆ ಏರಿಕೆ  ಮಾಡಿದ್ದೇವೆ. ದಂಡದ ಮತವನ್ನು 5 ಲಕ್ಷ ರೂಪಾಯಿಗೆ ಹೆಚ್ಚಿಸಿದ್ದೇವೆ. ಬಿಲ್ ಅನ್ನು ರಾಜ್ಯಪಾಲರಿಗೆ ಕಳುಹಿಸಿದ್ದೇವೆ. ಇವತ್ತು ಪರಿಶೀಲಿಸಿ ರಾಜಪಾಲರು ಅಂಕಿತ ಹಾಕಬಹುದು ಎಂದರು.

ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಹಿಜಾಬ್ ಬಳಕೆಗೆ ಅವಕಾಶ ನೀಡುವ  ಕುರಿತು ಪ್ರತಿಕ್ರಿಯಿಸಿದ  ಗೃಹ ಸಚಿವ ಡಾ.ಜಿ.ಪರಮೇಶ್ವರ್, ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಹಿಜಾಬ್ ಗೆ ಅವಕಾಶ ನೀಡುವ  ವಿಚಾರಕ್ಕೆ ಸಂಬಂಧಿಸಿದಂತೆ ಸುಧೀರ್ಘವಾಗಿ ಚರ್ಚೆ ಮಾಡುತ್ತೇವೆ. ಇನ್ನು ಒಂದು ತಿಂಗಳು ಸಮಯವಿದೆ ನೋಡೋಣ ಚರ್ಚೆ ಮಾಡುತ್ತೇವೆ ಎಂದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

40 minutes ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

44 minutes ago

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು Ripponpete’s Niyaz Nasir wins first place in…

56 minutes ago

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !?

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…

6 hours ago

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…

8 hours ago

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…

1 day ago