ಮೈಕ್ರೋ ಫೈನಾನ್ಸ್ ಕಿರುಕುಳ: ಜೈಲುಶಿಕ್ಷೆ 3 ವರ್ಷದಿಂದ 10 ವರ್ಷಕ್ಕೆ ಏರಿಕೆ- ಗೃಹ ಸಚಿವ ಪರಮೇಶ್ವರ್
ಬೆಂಗಳೂರು: ಮೈಕ್ರೋ ಫೈನಾಸ್ಸ್ನವರ ಹಾವಳಿ ತಡೆಗೆ ರಾಜ್ಯ ಸರ್ಕಾರ ಸುಗ್ರೀವಾಜ್ಞೆಗೆ ಮುಂದಾಗಿದ್ದು, ಇದಕ್ಕೆ ಸಂಬಂಧಿಸಿದ ಕರಡು ಪ್ರತಿಯನ್ನು ರಾಜ್ಯಪಾಲರಿಗೆ ರವಾನಿಸಲಾಗಿದೆ.
ಈ ಕುರಿತು ಮಾತನಾಡಿರುವ ಗೃಹಸಚಿವ ಡಾ.ಜಿ. ಪರಮೇಶ್ವರ್, ರಾಜ್ಯದಲ್ಲಿ ಮೈಕ್ರೋಫೈನಾನ್ಸ್ ದೌರ್ಜನ್ಯಕ್ಕೆ ಸರಣಿ ಆತ್ಮಹತ್ಯೆ ಪ್ರಕರಣಗಳು ನಡೆಯುತ್ತಿವೆ. ಇದರ ಮಧ್ಯ ನೆನ್ನೆ ರಾಜ್ಯಪಾಲರಿಗೆ ಮೈಕ್ರೋ ಫೈನಾನ್ಸ್ ದೌರ್ಜನ್ಯ ತಡೆ ಕುರಿತು ಕರಡು ಪ್ರತಿಯನ್ನು ಕಳುಹಿಸಲಾಗಿದ್ದು, ಇಂದು ರಾಜ್ಯಪಾಲರು ಕರಡು ಪ್ರತಿಯನ್ನು ಪರಿಶೀಲಿಸಿ ಅಂಕಿತ ಹಾಕುವ ಸಾಧ್ಯತೆ ಇದೆ. ಮೈಕ್ರೋ ಫೈನಾನ್ಸ್ ಕಿರುಕುಳ ತಪ್ಪಿಸಲು ಸುಗ್ರೀವಾಜ್ಞೆಯಲ್ಲಿ ಈ ಹಿಂದೆ ಶಿಕ್ಷೆಯನ್ನು ಮೂರು ವರ್ಷ ಬದಲು 10 ವರ್ಷಕ್ಕೆ ಏರಿಕೆ ಮಾಡಿದ್ದೇವೆ. ದಂಡದ ಮತವನ್ನು 5 ಲಕ್ಷ ರೂಪಾಯಿಗೆ ಹೆಚ್ಚಿಸಿದ್ದೇವೆ. ಬಿಲ್ ಅನ್ನು ರಾಜ್ಯಪಾಲರಿಗೆ ಕಳುಹಿಸಿದ್ದೇವೆ. ಇವತ್ತು ಪರಿಶೀಲಿಸಿ ರಾಜಪಾಲರು ಅಂಕಿತ ಹಾಕಬಹುದು ಎಂದರು.
ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಹಿಜಾಬ್ ಬಳಕೆಗೆ ಅವಕಾಶ ನೀಡುವ ಕುರಿತು ಪ್ರತಿಕ್ರಿಯಿಸಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಹಿಜಾಬ್ ಗೆ ಅವಕಾಶ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಸುಧೀರ್ಘವಾಗಿ ಚರ್ಚೆ ಮಾಡುತ್ತೇವೆ. ಇನ್ನು ಒಂದು ತಿಂಗಳು ಸಮಯವಿದೆ ನೋಡೋಣ ಚರ್ಚೆ ಮಾಡುತ್ತೇವೆ ಎಂದರು.
ಹೊಸನಗರ ತಾಲೂಕಿನ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಉತ್ತಮ ಶಿಕ್ಷಕಿ ಪ್ರಶಸ್ತಿ | ಶಿಕ್ಷಣ ಸಚಿವರಿಂದ ಅಭಿನಂದನೆ Rural teacher Ratnakumari…
ಬೇಟೆಗೆ ಹೊರಟಿದ್ದ ನಾಲ್ವರ ಬಂಧನ; ಎರಡು ನಾಡ ಬಂದೂಕು ಸೇರಿ ಹಲವು ವಸ್ತು ವಶಕ್ಕೆ ! Four people were…
ಪ್ರವಾಸಿ ಬಸ್ ಪಲ್ಟಿ: ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಸಾವು, 20 ಮಂದಿಗೆ ಗಾಯ nursing students died and 20…
ಬೆಂಗಳೂರು ಮೂಲದ ಸಿವಿಲ್ ಕಂಟ್ರಾಕ್ಟರ್ ತೀರ್ಥಹಳ್ಳಿಯಲ್ಲಿ ನಾಪತ್ತೆ: ಮಾಹಿತಿ ನೀಡಲು ಪೊಲೀಸರ ಮನವಿ 55-year-old Bengaluru-based civil contractor Anil…
ಕರ್ತವ್ಯ ನಿರತ ಅರಣ್ಯ ವಾಚರ್ ಮೇಲೆ ಕರಡಿ ದಾಳಿ: ಆಸ್ಪತ್ರೆಗೆ ಭೇಟಿ ನೀಡಿ ಧೈರ್ಯ ತುಂಬಿದ ಅರಣ್ಯಾಧಿಕಾರಿಗಳು Forest department…
ರಾತ್ರಿ ವೇಳೆ ರೈತನಿಗೆ ಚಾಕು ತೋರಿಸಿ ದರೋಡೆ ಮಾಡಿದ್ದ ಇಬ್ಬರು ಪೊಲೀಸರ ವಶಕ್ಕೆ Shivamogga rural police arrested two…