ವಿದ್ಯುತ್ ಅವಘಡದಲ್ಲಿ ಯುವಕ ಮೃತ್ಯು ಪ್ರಕರಣ – ತಪ್ಪಿತಸ್ಥರ ವಿರುದ್ದ ಸೂಕ್ತ ಕ್ರಮಕ್ಕೆ ಶಾಸಕ ಬೇಳೂರು ಸೂಚನೆ
ರಿಪ್ಪನ್ಪೇಟೆ : ವಿದ್ಯುತ್ ದುರಸ್ತಿ ಕಾಮಗಾರಿ ವೇಳೆಯಲ್ಲಿ ನಡೆದ ಅಚಾತುರ್ಯದಿಂದ ಮಂಗಳವಾರ ಸಂಜೆ ಬಿಳಿಕಿ ಗ್ರಾಮದಲ್ಲಿ ಮೃತಪಟ್ಟ ಗಾಜಿನಗೋಡು ಗ್ರಾಮದ ಯುವಕ ಕೇಶವ್ ಸಾವಿಗೆ ಸಂಬಂಧಿಸಿದವರ ವಿರುದ್ದ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಶಾಸಕ ಬೇಳೂರು ಗೋಪಾಲಕೃಷ್ಣ ಖಡಕ್ ಸೂಚನೆ ನೀಡಿದರು.
ಮಂಗಳವಾರ ರಾತ್ರಿ ಪಟ್ಟಣದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಮೃತ ಯುವಕನ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದ ಅವರು ಘಟನೆಗೆ ಸಂಬಂಧಿಸಿದ ಮಾಹಿತಿ ಪಡೆದು ಈ ಅವಘಡ ಸಂಭವಿಸಲು ಕಾರಣರಾದವರ ವಿರುದ್ದ ಯಾವುದೇ ಮುಲಾಜಿಲ್ಲದೇ ಕಾನೂನು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂಧರ್ಭದಲ್ಲಿ ಪಿಎಸ್ಐ ಪ್ರವೀಣ್ ಎಸ್ ಪಿ , ಮೆಸ್ಕಾಂ ಇಲಾಖೆಯ ಅಧಿಕಾರಿಗಳು , ಪಕ್ಷದ ಮುಖಂಡರು ಹಾಗೂ ಇನ್ನಿತರರಿದ್ದರು.
ಕೆಲಸಕ್ಕೆಂದು ಮನೆಯಿಂದ ತೆರಳಿದ್ದ ಕೆದಲಗುಡ್ಡೆಯ ಲಕ್ಷ್ಮಣ ನಾಪತ್ತೆ: ಪತ್ತೆಗೆ ಸಹಕರಿಸುವಂತೆ ಪೊಲೀಸರ ಮನವಿ 30-year-old Lakshman from Kedalagudde, Kenchanala,…
ಸಾಗರದ ಇಂದಿರಗಾಂಧಿ ಕಾಲೇಜಿನ ಸೀಮಾ ಕೌಸರ್ ಗೆ ಪಿಎಚ್.ಡಿ ಪದವಿ Seema Kausar, Head and Associate Professor of…
ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಪಿಯು ಕಾಲೇಜು ಪ್ರಾಂಶುಪಾಲರ ವಿರುದ್ಧ ಪೋಕ್ಸೋ, ಅಟ್ರಾಸಿಟಿ ಪ್ರಕರಣ Shivamogga police have registered…
ಕಾರ್ಮಿಕರ ಕಾರ್ಡ್ ಹೆಸರಿನಲ್ಲಿ ವಂಚನೆ ಆರೋಪ: ರಿಪ್ಪನ್ಪೇಟೆಯಲ್ಲಿ ಕಾರ್ಮಿಕರ ಆಕ್ರೋಶ Workers in Ripponpete allege money was collected…
ಹುಂಚದ ಶವಾಗಾರಕ್ಕೆ 6 ವರ್ಷವಾದರೂ ಉದ್ಘಾಟನೆ ಭಾಗ್ಯ ಇಲ್ಲ – ಮುಹೂರ್ತ ಸಿಕ್ಕಿಲ್ಲವೋ, ಅಥವಾ ಸತ್ತವರೇ ಎದ್ದು ಬಂದು ರಿಬ್ಬನ್…
ಈದ್ ಮಿಲಾದ್ ಹಬ್ಬ: ಸೌಹಾರ್ದತೆ ಕಾಪಾಡಲು ಪಿಎಸ್ಐ ರಾಜುರೆಡ್ಡಿ ಕರೆ Ripponpete PSI Rajureddy appeals for peaceful and…