ಶಿವಮೊಗ್ಗಕ್ಕೆ ಲಗ್ಗೆ ಇಟ್ಟ ರ‍್ಯಾಪಿಡೋ ಬೈಕ್‌ ಟ್ಯಾಕ್ಸಿ, ಆಟೋ ಚಾಲಕರ ಆಕ್ರೋಶ

ಶಿವಮೊಗ್ಗಕ್ಕೆ ಲಗ್ಗೆ ಇಟ್ಟ ರ‍್ಯಾಪಿಡೋ ಬೈಕ್‌ ಟ್ಯಾಕ್ಸಿ, ಆಟೋ ಚಾಲಕರ ಆಕ್ರೋಶ

ಶಿವಮೊಗ್ಗ : ಬೆಂಗಳೂರಿನ ಬಳಿಕ ರ‍್ಯಾಪಿಡೋ ಬೈಕ್‌ ಟ್ಯಾಕ್ಸಿಗಳು ರಾಜ್ಯದ ವಿವಿಧ ನಗರಗಳಿಗೆ ತನ್ನ ಜಾಲ ವಿಸ್ತರಿಸಿದೆ. ಶಿವಮೊಗ್ಗ ಸಿಟಿಯಲ್ಲಿ ರ‍್ಯಾಪಿಡೋ ಬೈಕ್‌ ಟ್ಯಾಕ್ಸಿಗಳ ಸಂಚಾರ ಶುರುವಾಗಿದೆ. ಇದು ಆಟೋ ಚಾಲಕರ ಪಾಲಿಗೆ ನುಂಗಲಾರದ ತುತ್ತಾಗಿದೆ.

ಏನಿದು ರ‍್ಯಾಪಿಡೋ ಬೈಕ್‌ ಟ್ಯಾಕ್ಸಿ?

ಕಾರು ಟ್ಯಾಕ್ಸಿ ಮಾದರಿಯಲ್ಲಿಯೇ ಬೈಕ್‌ ಟ್ಯಾಕ್ಸಿ ಸೇವೆ ಒದಗಿಸುವ ಸಂಸ್ಥೆಯೇ ರ‍್ಯಾಪಿಡೋ. ಬೆಂಗಳೂರು ಮೂಲದ ಈ ಸಂಸ್ಥೆ ದೇಶದ ನಾನಾ ಭಾಗದಲ್ಲಿ ಬೈಕ್‌ ಟ್ಯಾಕ್ಸಿ ಸೇವೆ ಹೊಂದಿದೆ. ‌ಬೈಕ್‌ ಇರುವವರು ರ‍್ಯಾಪಿಡೋ ಜೊತೆ ಒಪ್ಪಂದ ಮಾಡಿಕೊಂಡು ಈ ಟ್ಯಾಕ್ಸಿ ಸೇವೆ ನೀಡಬಹುದು. ಪ್ರಯಾಣಿಕರು ಮೊಬೈಲ್‌ ಆ್ಯಪ್‌ನಲ್ಲಿ ಬೈಕ್‌ ಟ್ಯಾಕ್ಸಿ ಬುಕ್‌ ಮಾಡಬಹುದು. ಕೆಲವೇ ಹೊತ್ತಿಗೆ ಬೈಕ್‌ ಟ್ಯಾಕ್ಸಿ ಪ್ರಯಾಣಿಕ ನಿಗದಿಪಡಿಸಿದ ಸ್ಥಳಕ್ಕೆ ಬಂದು ನಿಲ್ಲುತ್ತದೆ. ನಗರ ವ್ಯಾಪ್ತಿಯಲ್ಲಿ ಯಾವುದೇ ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಬೈಕ್‌ ಟ್ಯಾಕ್ಸಿಯಲ್ಲಿ ಸುಲಭಕ್ಕೆ ತೆರಳಬಹುದಾಗಿದೆ.

ಕಿಲೋ ಮೀಟರ್‌ಗೆ ಇಂತಿಷ್ಟು ಎಂದು ನಿಗದಿಯಾದ ದರವನ್ನು ಪ್ರಯಾಣಿಕ ಪಾವತಿಸಬೇಕು. ಇದರಲ್ಲಿ ರ‍್ಯಾಪಿಡೋ ಸಂಸ್ಥೆಗು ಕಮಿಷನ್‌ ಸಲ್ಲಲಿದೆ. ಬೈಕ್‌ ಚಾಲಕನಿಗೆ ಬಾಡಿಗೆ ಹಣ ಸಿಗಲಿದೆ. ಬೆಂಗಳೂರು ಸೇರಿದಂತೆ ವಿವಿಧೆಡೆ ರ‍್ಯಾಪಿಡೋ ಆಟೋ, ಕಾರು ಟ್ಯಾಕ್ಸಿ ಸರ್ವಿಸ್‌ ಕೂಡ ನೀಡುತ್ತಿದೆ.

ಬೆಂಗಳೂರು ಸೇರಿದಂತೆ ಮಹಾನಗರಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದ ರ‍್ಯಾಪಿಡೋ ಬೈಕ್‌ ಟ್ಯಾಕ್ಸಿ, ಈಗ ಶಿವಮೊಗ್ಗದಲ್ಲಿಯು ಸರ್ವಿಸ್‌ ಶುರು ಮಾಡಿದೆ. ಈಗಾಗಲೇ ಹಲವು ಬೈಕ್‌ ಸವಾರರು ರ‍್ಯಾಪಿಡೋಗೆ ನೋಂದಣಿ ಮಾಡಿಕೊಂಡಿದ್ದಾರೆ. ಬೈಕ್‌ ಟ್ಯಾಕ್ಸಿಗಳಲ್ಲಿ ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದಾರೆ.

‘ಪ್ರಸ್ತುತ ನಾಲ್ಕು ಕಿ.ಮೀ.ವರೆಗಿನ ಪ್ರಯಾಣಕ್ಕೆ 20 ರೂ., ನಾಲ್ಕು ಕಿ.ಮೀ ನಂತರದ ಪ್ರಯಾಣಕ್ಕೆ 30 ರೂ. ದರ ವಿಧಿಸಲಾಗುತ್ತಿದೆʼ ಅನ್ನುತ್ತಾರೆ ರ‍್ಯಾಪಿಡೋ ಬೈಕ್‌ ಟ್ಯಾಕ್ಸಿಯೊಂದರ ಚಾಲಕ.

ರ‍್ಯಾಪಿಡೋ ಬೈಕ್‌ ಟ್ಯಾಕ್ಸಿಯಿಂದಾಗಿ ಆಟೋ ಚಾಲಕರು ಆತಂಕಕ್ಕೀಡಾಗಿದ್ದಾರೆ. ದಿನಕ್ಕೆ ಸಿಗುತ್ತಿದ್ದ  ಒಂದೆರಡು ಬಾಡಿಗೆಯನ್ನೂ ಬೈಕ್‌ ಟ್ಯಾಕ್ಸಿಗಳು ಕಸಿಯಬಹುದು ಎಂದು ಚಿಂತೆಗೀಡಾಗಿದ್ದಾರೆ. ಶಿವಮೊಗ್ಗದಲ್ಲಿ ಸುಮಾರು ಆರು ಸಾವಿರ ಆಟೋಗಳಿವೆ. ಹತ್ತು ಸಾವಿರಕ್ಕೂ ಹೆಚ್ಚು ಮಂದಿ ಆಟೋಗಳ ಮೇಲೆ ಅವಲಂಬಿತವಾಗಿದ್ದಾರೆ.

ಶಿವಮೊಗ್ಗದಲ್ಲಿ ಸದ್ದಿಲ್ಲದೆ ರ‍್ಯಾಪಿಡೋ ಸೇವೆ ಆರಂಭವಾಗಿದ್ದರು, ಸಾರ್ವಜನಿಕರು ಇದರ ಉಪಯೋಗ ಪಡೆಯಲು ಆರಂಭಿಸಿದ್ದಾರೆ. ಹಾಗಾಗಿ ರ‍್ಯಾಪಿಡೋ ಬೈಕ್‌ ಟ್ಯಾಕ್ಸಿ ಕುರಿತು ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.

ರ‍್ಯಾಪಿಡೋ ಬೈಕ್‌ ಟ್ಯಾಕ್ಸಿಗಳಲ್ಲಿ ತೆರಳುವಾಗ ಅಪಘಾತ ಸಂಭವಿಸಿದರೆ ಹೊಣೆ ಯಾರು? ಇನ್ಷುರೆನ್ಸ್‌ ಕ್ಲೇಮ್‌ ಆಗಲಿದೆಯೇ ಅನ್ನುವುದು ಆಟೋ ಚಾಲಕರ ಪ್ರಶ್ನೆ. ಇತ್ತ ನಿರುದ್ಯೋಗಿ ಯುವಕರಿಗೆ, ಬೈಕ್‌ ಇದ್ದು ಪಾರ್ಟ್‌ ಟೈಮ್‌ ಉದ್ಯೋಗ ಮಾಡ ಬಯಸುವವರಿಗೆ ರ‍್ಯಾಪಿಡೋ ಉತ್ತಮ ವೇದಿಕೆ ಎಂಬ ವಾದವು ಇದೆ. ಹಾಗಾಗಿ ರ‍್ಯಾಪಿಡೋ ಬೈಕ್‌ ಟ್ಯಾಕ್ಸಿ ಪರ ಮತ್ತು ವಿರುದ್ಧ ಚರ್ಚೆಗಳಿವೆ. ಆದರೆ ರ‍್ಯಾಪಿಡೋ ಬೈಕ್‌ ಟ್ಯಾಕ್ಸಿ ಸೇವೆ ಆಟೋ ಚಾಲಕರು ಮತ್ತು ಅವಲಂಬಿತ ವರ್ಗಕ್ಕೆ ದೊಡ್ಡ ಪೆಟ್ಟು ನೀಡಲಿದೆ.

ಸರ್ಕಾರವೆ ಆಟೋಗಳಿಗೆ ಪ್ರತ್ಯೇಕ ಆ್ಯಪ್ ಸಿದ್ಧಪಡಿಸಬೇಕು. ಇದರಿಂದ ಆಟೋ ಚಾಲಕರಿಗೆ ಅನುಕೂಲವಾಗಲಿದೆ. ಅಲ್ಲದೆ ಖಾಸಗಿ ವಾಹನದಲ್ಲಿ ಬಾಡಿಗೆಗೆ ಅನುಮತಿ ನೀಡಬಾರದು ಎಂಬ ಆಗ್ರಹವಿದೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…

18 hours ago

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…

19 hours ago

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !!

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…

23 hours ago

ಈಸ್ಟ್‌ವೆಸ್ಟ್‌ ಬಸ್ ಸಂಸ್ಥೆ ಮಾಲೀಕ, ಮಾಜಿ ವಕ್ಫ್‌ ಬೋರ್ಡ್ ಅಧ್ಯಕ್ಷ ತಲ್ಕೀನ್ ಅಹ್ಮದ್ ನಿಧನ

ಈಸ್ಟ್‌ವೆಸ್ಟ್‌ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…

1 day ago

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…

1 day ago

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್‌ನಲ್ಲಿ ತಂಗಿದ್ದ…

1 day ago