ಚಲಿಸುತಿದ್ದ KSRTC ಬಸ್ನಲ್ಲಿ ಸಾಗರದ ಯುವಕನಿಗೆ ಚೂರಿ ಇರಿದು ಹತ್ಯೆ – ಭಗ್ನ ಪ್ರೇಮಿ ಹಾಗೂ ಮೃತನ ಪತ್ನಿಯ ಬಂಧನ
ಶಿರಸಿಯಲ್ಲಿ ಸಾಗರ ತಾಲ್ಲೂಕು ನಿವಾಸಿಯೊಬ್ಬರನ್ನು ಬಸ್ನಲ್ಲಿಯೇ ಇರಿದು ಹತ್ಯೆ ಮಾಡಲಾಗಿದೆ.
ಸಾಗರ ತಾಲ್ಲೂಕು ನಿಚಡಿಯ ಗಂಗಾಧರ್ ಮೃತ ಯುವಕ.
ಗಂಗಾಧರ್ ಶಿರಸಿಯ ಯವತಿಯ ಜೊತೆ ನಾಲ್ಕು ತಿಂಗಳ ಹಿಂದೆಷ್ಟೆ ಮದುವೆಯಾಗಿ ಬೆಂಗಳೂರಿನಲ್ಲಿ ನೆಲೆಸಿದ್ದವರು, ಸಂಬಂಧಿಕರ ಮನೆಯ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳುವ ಸಲುವಾಗಿ ಶನಿವಾರ ಶಿರಸಿಗೆ ಬಂದಿದ್ದರು. ವಾಪಸ್ ಬೆಂಗಳೂರಿಗೆ ಹೋಗಲು ಸಂಜೆ 7ರ ಸುಮಾರಿಗೆ ಹೊಸ ಬಸ್ ನಿಲ್ದಾಣದಲ್ಲಿ KSRTC ಬಸ್ ಹತ್ತಿದ್ದ ದಂಪತಿಯ ಜೊತೆ ಪ್ರೀತಮ್ ಡಿಸೋಜಾ ಎಂಬಾತ ಜಗಳ ತೆಗೆದಿದ್ದನು. ಬಸ್ ಸರಕಾರಿ ಆಸ್ಪತ್ರೆ ಬಳಿ ಬರುತ್ತಿದ್ದಂತೆಯೇ ಬಸ್ನಲ್ಲಿಯೇ ಗಂಗಾಧರ್ ಎದೆಗೆ ಇರಿದು ಅವರನ್ನು ಹತ್ಯೆ ಮಾಡಿದ್ದಾನೆ.
ಘಟನೆ ಹಿನ್ನಲೆ :
ಪ್ರೀತಮ್ ಡಿಸೋಜಾ 10 ವರ್ಷಗಳಿಂದ ಶಿರಸಿಯ ಪೂಜಾಳನ್ನು ಪ್ರೀತಿಸುತ್ತಿದ್ದನು. ಆಕೆಯು ಸಹ ಪ್ರೀತಿಯಲ್ಲಿದ್ದಳು. ಈ ನಡುವೆ ಬೆಂಗಳೂರಿಗೆ ಕೆಲಸಕ್ಕೆ ಸೇರಿದ್ದ ಯುವತಿ ಅಲ್ಲಿ ನಾಲ್ಕು ತಿಂಗಳ ಹಿಂದೆ ಗಂಗಾಧರ್ರನ್ನು ಮದುವೆಯಾಗಿದ್ದರು. ಇದರಿಂದ ಪ್ರೀತಮ್ ಡಿಸೋಜಾ ಆಕ್ರೋಶ ಗೊಂಡಿದ್ದ.
ಸಂಬಂಧಿಕರ ಮನೆಗೆ ಯುವತಿ ಹಾಗೂ ಗಂಗಾಧರ್ ಬರುವ ಮಾಹಿತಿ ಹೊಂದಿದ್ದ ಪ್ರೀತಮ್ ಶಿರಸಿ ಬಸ್ ನಿಲ್ದಾಣದ ಸಮೀಪ, ಕೆಎಸ್ಆರ್ಟಿಸಿ ಬಸ್ನಲ್ಲಿ ಗಂಗಾಧರ್ ಜೊತೆ ಜಗಳ ತೆಗೆದಿದ್ದಾನೆ. ಜಗಳದ ನಡುವೆ ಪ್ರೀತಮ್ ಗಂಗಾಧರ್ರವರ ಎದೆಗೆ ಚಾಕುವನಿಂದ ಇರಿದಿದ್ದ. ಗಂಭೀರವಾಗಿ ಗಾಯಗೊಂಡಿದ್ದ ಗಂಗಾಧರ್ರವರನ್ನು ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಅವರು ಮೃತಪಟ್ಟಿದ್ದರು.
ಇತ್ತ ಪ್ರೀತಮ್ ಕೃತ್ಯವೆಸಗಿದ ಬೆನ್ನಲ್ಲೆ ಪೊಲೀಸರಿಗೆ ಶರಣಾಗಿದ್ದಾನೆ. ಪ್ರಕರಣ ದಾಖಲಿಸಿರುವ ಪೊಲೀಸರು ಗಂಗಾಧರ್ ಪತ್ನಿ ಪೂಜಾಳನ್ನು ಸಹ ಬಂಧನ ಮಾಡಿ ವಿಚಾರಣೆ ನಡೆಸುತ್ತಿದ್ದಾರೆ.
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…
ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…
ರಿಪ್ಪನ್ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…
ಈಸ್ಟ್ವೆಸ್ಟ್ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…
ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…
ಚೋರಡಿ ಲಾಡ್ಜ್ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್ನಲ್ಲಿ ತಂಗಿದ್ದ…