ಮಹಿಳೆಯ ಮಾಂಗಲ್ಯ ಸರ ಕಿತ್ತು ಬೈಕ್ ನಲ್ಲಿ ಪರಾರಿಯಾದ ಕಳ್ಳರು
ಶಿವಮೊಗ್ಗ:ಮಾದೇಶ್ವರ ದೇವಸ್ಥಾನದ ರಸ್ತೆಯ ಮೂಲಕ ವೀರಾಪುರಕ್ಕೆ ಬೈಕ್ ನಲ್ಲಿ ದಂಪತಿ ತೆರಳುತ್ತಿದ್ದ ವೇಳೆ ಗೃಹಿಣಿಯ ಮಾಂಗಲ್ಯ ಸರವನ್ನು ಇನ್ನೊಂದು ಬೈಕಿನಲ್ಲಿ ಬಂದ ಯುವಕರಿಬ್ಬರು ಕಿತ್ತು ಪರಾರಿಯಾದ ಘಟನೆ ಭದ್ರಾವತಿಯಿಂದ ವರದಿಯಾಗಿದೆ.
ಭದ್ರಾವತಿಯ ನ್ಯೂ ಕಾಲೋನಿಯಲ್ಲಿ ವಾಸವಾಗಿರುವ ಸಂಬಂಧಿಕರ ಮನೆಯ ಕಾರ್ಯಕ್ರಮಕ್ಕೆ ಹಿರಿಯೂರು ವೀರಾಪುರದ ಹನುಮಂತೇಗೌಡ ಎನ್ನುವವರು ಬೈಕ್ ನಲ್ಲಿ ಪತ್ನಿ ಜೊತೆ ತೆರಳಿದ್ದರು. ಕಾರ್ಯಕ್ರಮ ಮುಗಿಸಿಕೊಂಡು ವಾಪಾಸ್ ಮನೆಗೆ ತೆರಳುವಾಗ ಬೈಪಾಸ್ ಬಳಿ ಹನುಮಂತೆ ಗೌಡ ವಾಹನವನ್ನು ನಿಧಾನ ಗೊಳಿಸುತ್ತಿದ್ದಂತೆ ಬೈಕ್ ನ ಹಿಂಬದಿಯಿಂದ ಇನ್ನೊಂದು ಬೈಕಿನಲ್ಲಿ ಬಂದ ಯುವಕರಿಬ್ಬರು ಗೌಡರ ಪತ್ನಿಯ ಕುತ್ತಿಗೆಯಲ್ಲಿದ್ದ 35 ಗ್ರಾಂ ಚಿನ್ನಾಭರಣವನ್ನು ಎಳೆದೊಯ್ದಿದ್ದಾರೆ.
ತಾಳಿ ಸರದ ಬೆಲೆ 1.75.000/-ರೂ. ಗಳಾಗಿರಬಹುದು ಎಂದು ಅಂದಾಜಿಸಲಾಗಿದೆ.
ಈ ಬಗ್ಗೆ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ರಿಪ್ಪನ್ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…
ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…
ರಿಪ್ಪನ್ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…
ಈಸ್ಟ್ವೆಸ್ಟ್ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…
ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…