ಎರಡು ಪ್ರತ್ಯೇಕ ಪ್ರಕರಣ – ಗಾಂಜಾ ಮಾರುತ್ತಿದ್ದ ಇಬ್ಬರ ಬಂಧನ
ಶಿವಮೊಗ್ಗ,: ವಿನೋಬ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗಾಂಜಾ ದಾಳಿ ನಡೆದಿದೆ. ಎರಡು ಪ್ರತ್ಯೇಕ ದಾಳಿಯಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.
ಜೆ. ಹೆಚ್. ಪಟೇಲ್ ಬಡಾವಣೆ ತುಂಗಾ ಚಾನಲ್ ದಂಡೆಯಲ್ಲಿ ವ್ಯಕ್ತಿಯೊಬ್ಬನು ದ್ವಿಚ ಕ್ರ ವಾಹನವನ್ನು ನಿಲ್ಲಿಸಿಕೊಂಡು, ಗಾಂಜಾವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.
ಮಾಹಿತಿಯ ಮೇರೆಗೆ ದಾಳಿ ನಡೆಸಲಾಗಿದ್ದು ಗಾಂಜಾ ಮಾರಾಟ ಮಾಡುತ್ತಿದ್ದ ಸಾಗರ ತಾಲೂಕಿನ ಬಿಲಗೋಡಿ ಗ್ರಾಮದ ಪ್ರತಾಪ್ ಎಸ್, (26) ಎನ್ನುವವನನ್ನು ಬಂಧಿಸಲಾಗಿದೆ. ಆರೋಪಿತನಿಂದ ಅಂದಾಜು ಮೌಲ್ಯ 6,000 ರೂಗಳ 349 ಗ್ರಾಂ ತೂಕದ ಒಣ ಗಾಂಜಾ, ರೂ 600/ ನಗದು ಹಣ, ಮತ್ತು ಕೃತ್ಯ ಕ್ಕೆ ಉಪಯೋಗಿಸಿದ ಅಂದಾಜು ಮೌಲ್ಯ 8,000/- ರೂಗಳ ಮೊಬೈಲ್ ಪೋನ್ ಹಾಗೂ ಅಂದಾಜು ಮೌಲ್ಯ 20,000ರೂಗಳ ದ್ವಿ ಚಕ್ರ ವಾಹನ ಸೇರಿದಂತೆ ಒಟ್ಟು 34,600 ರೂಗಳ ಮಾಲನ್ನು ಅಮಾನತ್ತು ಪಡಿಸಿಕೊಳ್ಳಲಾಗಿದೆ.
ಮತ್ತೊಂದು ಪ್ರಕರಣ ಕೀರ್ತಿ ನಗರದ ದೇವಂಗಿ ಪಾರ್ಕಿನಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಸುರೇಂದ್ರ ಬಬ್ಲು ಎಂಬಾತನನ್ನು ಬಂಧಿಸಲಾಗಿದೆ. 15000 ರೂ ಮೊಬೈಲ್ 363 ಗ್ರಾಂ ಮೌಲ್ಯದ ಗಾಂಜಾವನ್ನ ವಶಕ್ಕೆ ಪಡೆಯಲಾಗಿದೆ. ವಿನೋಬ ನಗರ ಪೊಲೀಸ್ ಠಾಣೆಯ ಪಿಐ ಚಂದ್ರಕಲಾ ಅವರ ನೇತೃತ್ವದಲ್ಲಿ ಈ ದಾಳಿ ನಡೆದಿದೆ.
ಹೊಸನಗರ ತಾಲೂಕಿನ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಉತ್ತಮ ಶಿಕ್ಷಕಿ ಪ್ರಶಸ್ತಿ | ಶಿಕ್ಷಣ ಸಚಿವರಿಂದ ಅಭಿನಂದನೆ Rural teacher Ratnakumari…
ಬೇಟೆಗೆ ಹೊರಟಿದ್ದ ನಾಲ್ವರ ಬಂಧನ; ಎರಡು ನಾಡ ಬಂದೂಕು ಸೇರಿ ಹಲವು ವಸ್ತು ವಶಕ್ಕೆ ! Four people were…
ಪ್ರವಾಸಿ ಬಸ್ ಪಲ್ಟಿ: ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಸಾವು, 20 ಮಂದಿಗೆ ಗಾಯ nursing students died and 20…
ಬೆಂಗಳೂರು ಮೂಲದ ಸಿವಿಲ್ ಕಂಟ್ರಾಕ್ಟರ್ ತೀರ್ಥಹಳ್ಳಿಯಲ್ಲಿ ನಾಪತ್ತೆ: ಮಾಹಿತಿ ನೀಡಲು ಪೊಲೀಸರ ಮನವಿ 55-year-old Bengaluru-based civil contractor Anil…
ಕರ್ತವ್ಯ ನಿರತ ಅರಣ್ಯ ವಾಚರ್ ಮೇಲೆ ಕರಡಿ ದಾಳಿ: ಆಸ್ಪತ್ರೆಗೆ ಭೇಟಿ ನೀಡಿ ಧೈರ್ಯ ತುಂಬಿದ ಅರಣ್ಯಾಧಿಕಾರಿಗಳು Forest department…
ರಾತ್ರಿ ವೇಳೆ ರೈತನಿಗೆ ಚಾಕು ತೋರಿಸಿ ದರೋಡೆ ಮಾಡಿದ್ದ ಇಬ್ಬರು ಪೊಲೀಸರ ವಶಕ್ಕೆ Shivamogga rural police arrested two…