Breaking
12 Jan 2026, Mon

RIPPONPETE • ಸುಟ್ಟುಹೋದ ವಿದ್ಯುತ್ ಟಿಸಿ – ಐದು ದಿನಗಳಿಂದ ಕುಡಿಯುವ ನೀರಿಲ್ಲದೆ ಗವಟೂರು ಗ್ರಾಮಸ್ಥರ ಪರದಾಟ

RIPPONPETE • ಸುಟ್ಟುಹೋದ ವಿದ್ಯುತ್ ಟಿಸಿ – ಐದು ದಿನಗಳಿಂದ ಕುಡಿಯುವ ನೀರಿಲ್ಲದೆ ಗವಟೂರು ಗ್ರಾಮಸ್ಥರ ಪರದಾಟ

ರಿಪ್ಪನ್‌ಪೇಟೆ;-ಇಲ್ಲಿನ ಗವಟೂರು ಗ್ರಾಮದಲ್ಲಿ ಕಳೆದ ಐದಾರು ದಿನಗಳ ಹಿಂದೆ ಟಿಸಿ ಸುಟ್ಟುಹೋಗಿದ್ದು ಸಾರ್ವಜನಿಕರು ಕುಡಿಯುವ ನೀರಿಲ್ಲದೆ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

ಸ್ಥಳೀಯ ಗ್ರಾಮ ಪಂಚಾಯಿತ್‌ನಿಂದ ಪೈಪ್ ಲೈನ್ ಮೂಲಕ ಸರಬರಾಜು ಮಾಡಲಾಗುವ ಕುಡಿಯುವ ನೀರಿನ ನಲ್ಲಿಯಲ್ಲಿ ನೀರು ಬರದೇ ಇದ್ದು ಈ ಕುರಿತು ಗ್ರಾಮಾಡಳಿತದ ಗಮನಕ್ಕೆ ತರಲಾದರೂ ಕೂಡಾ ಪ್ರಯೋಜನವಾಗಿಲ್ಲ ಮತ್ತು ಮೆಸ್ಕಾಂ ಇಲಾಖೆಯವರಿಗೆ ಸಾರ್ವಜನಿಕರು ಗವಟೂರು ಬಳಿಯಲ್ಲಿ 63 ಕೆ.ವಿ.ಲೈನ್ ಟಿಸಿ  ಸುಟ್ಟುಹೋಗಿದೆ ಎಂದು ದೂರು ಸಲ್ಲಿಸಲಾದರೂ ಕೂಡಾ ಕ್ರಮ ಕೈಗೊಳ್ಳದೆ ನಿರ್ಲಕ್ಷö್ಯ ವಹಿಸಿದ್ದಾರೆಂದು ಸಾರ್ವಜನಿಕರು ಆರೋಪಿಸಿದರು.

ಬೇಸಿಗೆ ಕಾಲವಾಗಿರುವ ಕಾರಣ ಇಲ್ಲಿನ ತೆರೆದ ಬಾವಿಗಳಲ್ಲಿ ನೀರು ತಳಮಟ್ಟಕ್ಕೆ ಹೋಗಿವೆ ಇನ್ನೂ ಬೋರ್‌ವೆಲ್ ನೀರು ತರೋಣವೆಂದರೆ ಟಿಸಿ ಸುಟ್ಟುಹೋಗಿದ್ದು  ಮೋಟರ್ ಅನ್ ಮಾಡುವುದಾದರೂ ಹೇಗೆ ಎಂದು ಪ್ರಶ್ನಿಸುತ್ತಾರೆ.

ಈ ಕೂಡಲೇ ಸಂಬಂಧಿಸಿದ ಮೆಸ್ಕಾಂ ಮತ್ತು ಸ್ಥಳೀಯ ಗ್ರಾಮಾಡಳಿತ ಮನಹರಿಸಿ 63 ಕೆ.ವಿ. ಟಿಸಿ ಅಳವಡಿಸಿ ಸಾರ್ವಜನಿಕರಿಗೆ ಕುಡಿಯುವ ನೀರಿನ ಸೌಲಭ್ಯವನ್ನು ಒದಗಿಸುವಂತೆ ಗವಟೂರು ಗ್ರಾಮಸ್ಥರು ಆಗ್ರಹಿಸಿದ್ದಾರೆ.

About The Author

By ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Leave a Reply

Your email address will not be published. Required fields are marked *