ಪೆಟ್ರೋಲ್ ಬಂಕ್ ಪಾಲುದಾರಿಕೆ ಕೊಡುವುದಾಗಿ 17 ಜನರಿಗೆ ಮೋಸ!? – ತೀರ್ಥಹಳ್ಳಿಯ ಮಹಿಳೆ ವಿರುದ್ಧ ಕೇಸ್ ದಾಖಲು !
ತೀರ್ಥಹಳ್ಳಿ : ಪೆಟ್ರೋಲ್ ಬಂಕ್ ಪಾರ್ಟ್ನರ್ಶಿಪ್ ಕೊಡುವುದಾಗಿ ಹೇಳಿ ಕೋಟಿ, ಕೋಟಿ ಲೂಟಿ ಮಾಡಿದ ಆರೋಪ ತೀರ್ಥಹಳ್ಳಿಯ ಆರತಿ ಮತ್ತು ಆಕೆಯ ಪತಿಯ ವಿರುದ್ಧ ಕೇಳಿ ಬಂದಿದೆ.ತೀರ್ಥಹಳ್ಳಿಯ ಗೋಮತಿ ಪೆಟ್ರೋಲ್ ಬಂಕ್ ಓನರ್ ಆರತಿ ಮೇಲೆ ದೂರು ದಾಖಲಾಗಿದೆ.
ಗೋಮತಿ ಪೆಟ್ರೋಲ್ ಬಂಕ್ ಓನರ್ ಆಗಿರುವ ಆರತಿ ಅವರು ಬಂಕ್ ತೋರಿಸಿ ಜನರಿಗೆ ಮಕ್ಮಲ್ ಟೋಪಿ ಹಾಕಿದ್ದಾರೆ. ಪೆಟ್ರೋಲ್ ಬಂಕ್ನಲ್ಲಿ ಪಾರ್ಟ್ನರ್ಶಿಪ್ ಕೊಡುತ್ತೇನೆಂದು ನಂಬಿಸಿ 4 ಲಕ್ಷದಿಂದ 50 ಲಕ್ಷ ರೂಪಾಯಿ ತನಕ ವಂಚಿಸಿರುವ ಆರೋಪ ಕೇಳಿ ಬಂದಿದೆ.
ತೀರ್ಥಹಳ್ಳಿ ತಾ. ಲಿಂಗಾಪುರ ಮುಡುಬ ಮೂಲದ ಆರತಿ ವಿಶಾಲ್ ಮತ್ತು ಆಕೆಯ ಪತಿ ಕಳೆದ 2 ವರ್ಷಗಳಿಂದ ತೀರ್ಥಹಳ್ಳಿ & ಶಿವಮೊಗ್ಗದಲ್ಲಿ 17 ಜನರಿಗೆ ವಂಚಿಸಿದ್ದಾರೆ. ಬ್ಯಾಂಕ್ ಖಾತೆ ಮೂಲಕ ಹಣ ಸ್ವೀಕರಿಸಿ ವಂಚಿಸಿದ್ದಾರೆ. ಪಡೆದ ಹಣಕ್ಕೆ ಚೆಕ್ ಮತ್ತಿತರ ದಾಖಲೆಗಳನ್ನು ನೀಡಿದ್ದಾರೆ. ಹಣ ಪಾವತಿ ಸಂಬಂಧ ವಿಚಾರಿಸಿದವರಿಗೆ ಆವಾಜ್ ಹಾಕಿದ್ದಾರೆ ಎನ್ನಲಾಗಿದೆ. ಜನರು ತಾವು ಹಣ ಕೊಟ್ಟಿದ್ದಲ್ಲದೆ, ತಮ್ಮ ಸ್ನೇಹಿತರಿಂದಲೂ ಹಣ ಕೊಡಿಸಿದ್ದ್ದು, ಮರುಪಾವತಿಗೆ ಕೇಳಿದಾಗ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ವಂಚನೆಗೆ ಒಳಗಾದವರು ಕಾನೂನು ಹೋರಾಟಕ್ಕೆ ಮುಂದಾಗಿದ್ದಾರೆ. ಇದೀಗ ಆರತಿ ಮತ್ತು ಪತಿಯ ವಿರುದ್ಧ ವಿವಿಧ ಠಾಣೆಗಳಲ್ಲಿ FIR ದಾಖಲಾಗಿದೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್