ಪೆಟ್ರೋಲ್ ಬಂಕ್ ಪಾಲುದಾರಿಕೆ ಕೊಡುವುದಾಗಿ 17 ಜನರಿಗೆ ಮೋಸ!? – ತೀರ್ಥಹಳ್ಳಿಯ ಮಹಿಳೆ ವಿರುದ್ಧ ಕೇಸ್ ದಾಖಲು !
ತೀರ್ಥಹಳ್ಳಿ : ಪೆಟ್ರೋಲ್ ಬಂಕ್ ಪಾರ್ಟ್ನರ್ಶಿಪ್ ಕೊಡುವುದಾಗಿ ಹೇಳಿ ಕೋಟಿ, ಕೋಟಿ ಲೂಟಿ ಮಾಡಿದ ಆರೋಪ ತೀರ್ಥಹಳ್ಳಿಯ ಆರತಿ ಮತ್ತು ಆಕೆಯ ಪತಿಯ ವಿರುದ್ಧ ಕೇಳಿ ಬಂದಿದೆ.ತೀರ್ಥಹಳ್ಳಿಯ ಗೋಮತಿ ಪೆಟ್ರೋಲ್ ಬಂಕ್ ಓನರ್ ಆರತಿ ಮೇಲೆ ದೂರು ದಾಖಲಾಗಿದೆ.
ಗೋಮತಿ ಪೆಟ್ರೋಲ್ ಬಂಕ್ ಓನರ್ ಆಗಿರುವ ಆರತಿ ಅವರು ಬಂಕ್ ತೋರಿಸಿ ಜನರಿಗೆ ಮಕ್ಮಲ್ ಟೋಪಿ ಹಾಕಿದ್ದಾರೆ. ಪೆಟ್ರೋಲ್ ಬಂಕ್ನಲ್ಲಿ ಪಾರ್ಟ್ನರ್ಶಿಪ್ ಕೊಡುತ್ತೇನೆಂದು ನಂಬಿಸಿ 4 ಲಕ್ಷದಿಂದ 50 ಲಕ್ಷ ರೂಪಾಯಿ ತನಕ ವಂಚಿಸಿರುವ ಆರೋಪ ಕೇಳಿ ಬಂದಿದೆ.
ತೀರ್ಥಹಳ್ಳಿ ತಾ. ಲಿಂಗಾಪುರ ಮುಡುಬ ಮೂಲದ ಆರತಿ ವಿಶಾಲ್ ಮತ್ತು ಆಕೆಯ ಪತಿ ಕಳೆದ 2 ವರ್ಷಗಳಿಂದ ತೀರ್ಥಹಳ್ಳಿ & ಶಿವಮೊಗ್ಗದಲ್ಲಿ 17 ಜನರಿಗೆ ವಂಚಿಸಿದ್ದಾರೆ. ಬ್ಯಾಂಕ್ ಖಾತೆ ಮೂಲಕ ಹಣ ಸ್ವೀಕರಿಸಿ ವಂಚಿಸಿದ್ದಾರೆ. ಪಡೆದ ಹಣಕ್ಕೆ ಚೆಕ್ ಮತ್ತಿತರ ದಾಖಲೆಗಳನ್ನು ನೀಡಿದ್ದಾರೆ. ಹಣ ಪಾವತಿ ಸಂಬಂಧ ವಿಚಾರಿಸಿದವರಿಗೆ ಆವಾಜ್ ಹಾಕಿದ್ದಾರೆ ಎನ್ನಲಾಗಿದೆ. ಜನರು ತಾವು ಹಣ ಕೊಟ್ಟಿದ್ದಲ್ಲದೆ, ತಮ್ಮ ಸ್ನೇಹಿತರಿಂದಲೂ ಹಣ ಕೊಡಿಸಿದ್ದ್ದು, ಮರುಪಾವತಿಗೆ ಕೇಳಿದಾಗ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ವಂಚನೆಗೆ ಒಳಗಾದವರು ಕಾನೂನು ಹೋರಾಟಕ್ಕೆ ಮುಂದಾಗಿದ್ದಾರೆ. ಇದೀಗ ಆರತಿ ಮತ್ತು ಪತಿಯ ವಿರುದ್ಧ ವಿವಿಧ ಠಾಣೆಗಳಲ್ಲಿ FIR ದಾಖಲಾಗಿದೆ.
ಸಾಗರದ ಇಂದಿರಗಾಂಧಿ ಕಾಲೇಜಿನ ಸೀಮಾ ಕೌಸರ್ ಗೆ ಪಿಎಚ್.ಡಿ ಪದವಿ Seema Kausar, Head and Associate Professor of…
ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಪಿಯು ಕಾಲೇಜು ಪ್ರಾಂಶುಪಾಲರ ವಿರುದ್ಧ ಪೋಕ್ಸೋ, ಅಟ್ರಾಸಿಟಿ ಪ್ರಕರಣ Shivamogga police have registered…
ಕಾರ್ಮಿಕರ ಕಾರ್ಡ್ ಹೆಸರಿನಲ್ಲಿ ವಂಚನೆ ಆರೋಪ: ರಿಪ್ಪನ್ಪೇಟೆಯಲ್ಲಿ ಕಾರ್ಮಿಕರ ಆಕ್ರೋಶ Workers in Ripponpete allege money was collected…
ಹುಂಚದ ಶವಾಗಾರಕ್ಕೆ 6 ವರ್ಷವಾದರೂ ಉದ್ಘಾಟನೆ ಭಾಗ್ಯ ಇಲ್ಲ – ಮುಹೂರ್ತ ಸಿಕ್ಕಿಲ್ಲವೋ, ಅಥವಾ ಸತ್ತವರೇ ಎದ್ದು ಬಂದು ರಿಬ್ಬನ್…
ಈದ್ ಮಿಲಾದ್ ಹಬ್ಬ: ಸೌಹಾರ್ದತೆ ಕಾಪಾಡಲು ಪಿಎಸ್ಐ ರಾಜುರೆಡ್ಡಿ ಕರೆ Ripponpete PSI Rajureddy appeals for peaceful and…
13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೈಕ್ ಕಳ್ಳ ಕೊನೆಗೂ ಪೊಲೀಸರ ಬಲೆಗೆ Bhadravati New Town Police have arrested a…