ರಾಜ್ಯ ವಿಧಾನಸಭೆಯಿಂದ 18 ಬಿಜೆಪಿ ಶಾಸಕರು ಅಮಾನತು: ಹೊತ್ತೊಯ್ದು ಹೊರ ಹಾಕಿದ ಮಾರ್ಷಲ್ಸ್

ರಾಜ್ಯ ವಿಧಾನಸಭೆಯಿಂದ 18 ಬಿಜೆಪಿ ಶಾಸಕರು ಅಮಾನತು: ಹೊತ್ತೊಯ್ದು ಹೊರ ಹಾಕಿದ ಮಾರ್ಷಲ್ಸ್

ಕರ್ನಾಟಕ ವಿಧಾನಸಭೆಯ ಸ್ಪೀಕರ್ ಪೀಠಕ್ಕೆ ಅಗೌರವ ತಂದಂತ ಆರೋಪದ ಹಿನ್ನಲೆಯಲ್ಲಿ ವಿಧಾನಸಭೆಯಲ್ಲಿ ಆರು ತಿಂಗಳುಗಳ ಕಾಲ ಬಿಜೆಪಿಯ 18 ಶಾಸಕರನ್ನು ಅಮಾನತುಗೊಳಿಸಿ ಸ್ಪೀಕರ್ ಯು.ಟಿ ಖಾದರ್ ಆದೇಶಿಸಿದ್ದರು. ಅಲ್ಲದೇ ತಕ್ಷಣವೇ ಹೊರ ನಡೆಯುವಂತೆ ಸ್ಪೀಕರ್ ಸೂಚಿಸಿದರು.

ಆದರೇ ಸ್ಪೀಕರ್ ಸೂಚನೆಗೆ ಧಿಕ್ಕರಿಸಿ ಸದನದಲ್ಲೇ ಇದ್ದಂತ 18 ಬಿಜೆಪಿಯ ಅಮಾನತು ಶಾಸಕರನ್ನು ಮಾರ್ಷಲ್ ಗಳು ಹೊತ್ತೊಯ್ದು ಹೊರ ಹಾಕಿದರು.

ಇಂದು ವಿಧಾನಸಭೆಯ ಕಲಾಪ ಮಧ್ಯಾಹ್ನ ಆರಂಭಗೊಳ್ಳುತ್ತಿದ್ದಂತೆ ಬಿಜೆಪಿ ಶಾಸಕರಿಂದ ಗಲಾಟೆ, ಕೋಲಾಹಲ ಏಳಿಸಲಾಯಿತು. ಸ್ಪೀಕರ್ ಪೀಠಕ್ಕೆ ಅಗೌರವ ತೋರುವಂತ ನಡೆಯನ್ನು ಬಿಜೆಪಿಯ ಶಾಸಕರು ನಡೆದುಕೊಂಡಿದ್ದಾಗಿ ತಿಳಿದು ಬಂದಿದೆ.

ಈ ಹಿನ್ನಲೆಯಲ್ಲಿ ವಿಧಾನಸಭೆಯ ಕಲಾಪದಿಂದ 6 ತಿಂಗಳವರೆಗೆ ಬಿಜೆಪಿಯ 18 ಶಾಸಕರನ್ನು ಅಮಾನತುಗೊಳಿಸಿ ಸ್ಪೀಕರ್ ಯುಟಿ ಖಾದರ್ ಆದೇಶ ಮಾಡಿದ್ದಾರೆ.

ಹೀಗಿದೆ ವಿಧಾನಸಭೆ ಕಲಾಪದಿಂದ 6 ತಿಂಗಳುಗಳ ಕಾಲ ಅಮಾನತುಗೊಂಡ 18 ಬಿಜೆಪಿ ಶಾಸಕರ ಪಟ್ಟಿ

ದೊಡ್ಡನಗೌಡ ಪಾಟೀಲ್

ಅಶ್ವಥನಾರಾಯಣ

ಎಸ್ ಆರ್ ವಿಶ್ವನಾಥ್

ಬೈರತಿ ಬಸವರಾಜು

ಎಮ್ ಆರ್ ಪಟೇಲ್

ಚನ್ನಬಸಪ್ಪ

ಉಮಾನಾಥ್ ಕೋಟ್ಯನ್

ಸುರೇಶ್ ಗೌಡ

ಶೈಲೇಂದ್ರ ಬೆಲ್ದಾಳೆ

ಶರಣು ಸಲಗಾರ್

ಸಿಕೆ ರಾಮಮೂರ್ತಿ

ಯಶ್ಪಾಲ್ ಸುವರ್ಣ

ಹರಿಶ್ ಬಿ ಪಿ

ಭರತ್ ಶೆಟ್ಟಿ

ಬಸವರಾಜ ಮತ್ತಿಮೂಡ್

ಧೀರಜ್ ಮುನಿರಾಜು

ಮುನಿರತ್ನ

ಚಂದ್ರು ಲಮಾಣಿ

ಸ್ಪೀಕರ್ ಪೀಠದಲ್ಲಿ ಕುಳಿತಿರುವ ಯು.ಟಿ ಖಾದರ್ ನಿಮ್ಮನ್ನು ಕ್ಷಮಿಸಬಹುದು. ಆದರೇ ಸ್ಪೀಕರ್ ಪೀಠಕ್ಕೆ ಅಗೌರವ ತೋರುವುದನ್ನು ಸಹಿಸುವುದಿಲ್ಲ ಎಂಬುದಾಗಿ ಸ್ಪೀಕರ್ ಯುಟಿ ಖಾದರ್ ಅವರು ಅಮಾನತು ಆದೇಶದ ಸಂದರ್ಭದಲ್ಲಿ ಹೇಳಿದ್ದಾರೆ. ಅಲ್ಲದೇ ಕೂಡಲೇ ಹೊರ ಹೋಗುವಂತೆ ಸೂಚಿಸಿದರು. ಆದರೇ ಸದನದಲ್ಲೇ ಉಳಿದಂತ ಅಮಾನತುಗೊಂಡ ಶಾಸಕರನ್ನು ಮಾರ್ಷಲ್ ಗಳು ಹೊತ್ತೊಯ್ದು ಹೊರ ಹಾಕಿದರು.

ಅಮಾನತುಗೊಂಡ ಶಾಸಕರಿಗೆ ತಕ್ಷಣದಿಂದ ಜಾರಿಗೆ ಬರುವಂತೆ 6 ತಿಂಗಳ ಕಾಲ ಅಮಾನತು ಮಾಡಲಾಗಿದೆ. ಅಮಾನತು ಆದಂತಹ ಸದಸ್ಯರು ತಕ್ಷಣ ಸದನದಿಂದ ಹೊರ ನಡೆಯಬೇಕು ಎಂದು ವಿಧಾನಸಭೆ ಸ್ಪೀಕರ್ ಯುಟಿ ಖಾದರ್ ಆದೇಶ ಹೊರಡಿಸಿದರು.

ವಿಧಾನಸಭೆಯಿಂದ ಈ ವೇಳೆ ಶಾಸಕರನ್ನು ಮಾರ್ಷಲ್ ಗಳು ಎತ್ತಿಕೊಂಡು ಹೊರ ನಡೆದರು. ಒಬ್ಬೊಬ್ಬರನ್ನು ಎತ್ತಿಕೊಂಡು ಬಂದು ಮಾರ್ಷಲ್ ಗಳು ಹೊರಹಾಕಿದ್ದಾರೆ. ಬಿಜೆಪಿ ಶಾಸಕರಾದ ಮುನಿರತ್ನ, ಚನ್ನಬಸಪ್ಪ, ಬೈರತಿ ಬಸವರಾಜು, ಬಿ ಸುರೇಶ್ ಗೌಡ, ಡಾ. ಭರತ್ ಶೆಟ್ಟಿ, ಧೀರಜ್ ಮುನಿರಾಜು, ಸಿ ಕೆ ರಾಮಮೂರ್ತಿಯನ್ನು ಸದನದಿಂದ ಮಾರ್ಷಲ್ ಗಳು ಎತ್ತಿಕೊಂಡು ಹೊರ ಹಾಕಿದ್ದಾರೆ.ಮೊದಲ ಬಾರಿ ಆರು ತಿಂಗಳ ಕಾಲ ಬಿಜೆಪಿಯ 18 ಶಾಸಕರು ಅಮಾನತುಗೊಂಡಿದ್ದಾರೆ.

ವಿಧಾನಸಭೆ ಇತಿಹಾಸದಲ್ಲಿ ಮೊದಲ ಬಾರಿಗೆ 6 ತಿಂಗಳುಗಳ ಕಾಲ ಅಮಾನತು ಮಾಡಲಾಗಿದೆ. ಮುಂದಿನ ಆರು ತಿಂಗಳು ಕಾಲ ವಿಧಾನಸಭೆ ಪ್ರಾಂಗಣ ಪ್ರವೇಶಕ್ಕೆ ಅವಕಾಶ ಇಲ್ಲ. ಅಮಾನತಾದ ಶಾಸಕರಿಗೆ ಯಾವುದೇ ರೀತಿಯಾದ ಟಿಎ ಡಿಎ ನಡೆದಂತೆ ಆದೇಶ ನೀಡಲಾಗಿದೆ.ಅಲ್ಲದೆ ಸ್ಥಾಯಿ ಸಮೀತಿ ಸಭೆಗಳಿಗೂ ಕೂಡ ಅವಕಾಶ ಇಲ್ಲ. ಅಮಾನತಿನ ಅವಧಿಯಲ್ಲಿ ಶಾಸಕರು ನೀಡುವ ಸೂಚನೆಗೆ ಮಾನ್ಯತೆ ಇಲ್ಲ ಶಾಸಕರ ದಿನದ ಭತ್ಯೆಗೂ ಸಹ ಕೊಕ್ ನೀಡಲಾಗಿದೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…

17 hours ago

ಪೊಲೀಸರ ದಿಢೀರ್ ದಾಳಿ –  ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು

ಪೊಲೀಸರ ದಿಢೀರ್ ದಾಳಿ –  ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…

18 hours ago

ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ

ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…

19 hours ago

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…

2 days ago

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…

2 days ago

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !!

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…

2 days ago