ದುಬಾರಿ ಗಿಫ್ಟ್ ಬಂದಿದೆ ಎಂದು ವಿದೇಶದಿಂದ ಬಂದ ಕರೆ ಹಾಗೂ ಮೆಸೇಜ್ ಗೆ ಸ್ಪಂದಿಸಿದ ವ್ಯಕ್ತಿಗೆ ಕಾದಿತ್ತು ಬಿಗ್ ಶಾಕ್..!!

ದುಬಾರಿ ಗಿಫ್ಟ್ ಬಂದಿದೆ ಎಂದು ವಿದೇಶದಿಂದ ಬಂದ ಕರೆ ಹಾಗೂ ಮೆಸೇಜ್ ಗೆ ಸ್ಪಂದಿಸಿದ ವ್ಯಕ್ತಿಗೆ ಕಾದಿತ್ತು ಬಿಗ್ ಶಾಕ್..!!

ಶಿವಮೊಗ್ಗ : ಲಂಡನ್‌ನಿಂದ ಬೆಲೆ ಬಾಳುವ ಗಿಫ್ಟ್‌ ಬಂದಿದೆ ಎಂದು ನಂಬಿಸಿ ಭದ್ರಾವತಿಯ ವ್ಯಕ್ತಿಯೊಬ್ಬರಿಗೆ 8.56 ಲಕ್ಷ ರೂ. ವಂಚಿಸಲಾಗಿದೆ. ಇದೇ ಮಾದರಿ ಈ ಹಿಂದೆಯು ಹಲವರಿಗೆ ವಂಚನೆಯಾಗಿದ್ದು, ಈ ಬಗ್ಗೆ ಎಚ್ಚೆತ್ತುಕೊಳ್ಳಬೇಕಿದೆ.

ಲಂಡನ್‌ನಿಂದ ಮೈಕಲ್‌ ಮ್ಯಾಕ್‌ಡೊನಾಲ್ಡ್‌ ಹೆಸರಿನಲ್ಲಿ ಕರೆ ಮತ್ತು ಮೆಸೇಜ್‌ ಮಾಡಿ 43 ಲಕ್ಷ ರೂ. ಮೌಲ್ಯದ ಗಿಫ್ಟ್‌ ಕಳುಹಿಸುತ್ತಿರುವುದಾಗಿ ಭದ್ರಾವತಿಯ ವ್ಯಕ್ತಿಗೆ ನಂಬಿಸಿದ್ದ. ಗಿಫ್ಟ್‌ ಕಳುಹಿಸಲು ಕಂಪನಿಯ ವೇಯ್ಟಿಂಗ್‌ ಚಾರ್ಜ್‌ 5 ಸಾವಿರ ರೂ. ಪಾವತಿಸುವಂತೆ ತಿಳಿಸಿ, ಬ್ಯಾಂಕ್‌ ಖಾತೆ ಮತ್ತು ಗೂಗಲ್‌ ಪೇ ನಂಬರ್‌ ಕಳುಹಿಸಿದ್ದ. ಭದ್ರಾವತಿಯ ವ್ಯಕ್ತಿ ಈ ಖಾತೆಗಳಿಗೆ ಹಣ ಕಳುಹಿಸಿದ್ದರು. ಬಳಿಕ ವಿವಿಧ ಚಾರ್ಜ್‌ಗಳ ಹೆಸರಿನಲ್ಲಿ ಒಟ್ಟು 6.53 ಲಕ್ಷ ರೂ. ಹಣ ವರ್ಗಾಯಿಸಿಕೊಂಡಿದ್ದ ಎಂದು ಆರೋಪಿಸಲಾಗಿದೆ.

ಸ್ವಲ್ಪ ದಿನದ ಬಳಿಕ ವಿಮಾನ ನಿಲ್ದಾಣದ ಕಸ್ಟಮ್ಸ್‌ ಅಧಿಕಾರಿ ಸೋಗಿನಲ್ಲಿ ಕರೆ ಮಾಡಿದ ವ್ಯಕ್ತಿ ಲಕ್ಷಾಂತರ ಮೌಲ್ಯದ ಗಿಫ್ಟ್‌ಗಳನ್ನು ವಶಕ್ಕೆ ಪಡೆಯಲಾಗಿದೆ. ಅವುಗಳನ್ನು ಪಡೆದುಕೊಳ್ಳಲು 2.03 ಲಕ್ಷ ರೂ. ಪಾವತಿಸಬೇಕು ಎಂದು ತಿಳಿಸಿದ್ದು, ವಿವಿಧ ನಂಬರ್‌ಗಳಿಂದ ಕರೆ ಮಾಡಿ ಹಂತ ಹಂತವಾಗಿ ಹಣ ವರ್ಗಾಯಿಸಿಕೊಂಡಿದ್ದರು.

ಒಟ್ಟು 8.56 ಲಕ್ಷ ರೂ. ಹಣವನ್ನು ವರ್ಗಾಯಿಸಿಕೊಂಡಿದ್ದರೂ ಗಿಫ್ಟ್‌ ಬಾರದಿದ್ದರಿಂದ ಅನುಮಾನಗೊಂಡು ಪರಿಚಿತರಲ್ಲಿ ವಿಚಾರಿಸಿದಾಗ ಮೋಸ ಹೋಗಿರುವುದು ಗೊತ್ತಾಗಿದೆ. ಘಟನೆ ಸಂಬಂಧ ಶಿವಮೊಗ್ಗ ಸಿ.ಇ.ಎನ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

A big shock awaited the person who responded to a call and message from abroad saying he had received an expensive gift..!!

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Share
Published by
ರಫ಼ಿ ರಿಪ್ಪನ್ ಪೇಟೆ
Tags: cyber crime

Recent Posts

ನೀರಿನಲ್ಲಿ ಅಡಗಿ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಲು ಯತ್ನ ; ಸಿನಿಮೀಯ ರೀತಿಯಲ್ಲಿ ರೌಡಿಶೀಟರ್‌ನನ್ನು ಬಂಧಿಸಿದ ಪೊಲೀಸರು

ನೀರಿನಲ್ಲಿ ಅಡಗಿ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಲು ಯತ್ನ ; ಸಿನಿಮೀಯ ರೀತಿಯಲ್ಲಿ ರೌಡಿಶೀಟರ್‌ನನ್ನು ಬಂಧಿಸಿದ ಪೊಲೀಸರು Bhadravathi police dramatically…

10 hours ago

ಅಜಾಗರೂಕ ಚಾಲನೆಯಿಂದ ಕೆರೆಗೆ ನುಗ್ಗಿದ ಲಾರಿ! ತಪ್ಪಿದ ಭಾರಿ ದುರಂತ

ಅಜಾಗರೂಕ ಚಾಲನೆಯಿಂದ ಕೆರೆಗೆ ನುಗ್ಗಿದ ಲಾರಿ! ತಪ್ಪಿದ ಭಾರಿ ದುರಂತ A container lorry allegedly driven recklessly under…

10 hours ago

ರಿಪ್ಪನ್‌ಪೇಟೆ ಶಾಲಾ ಮಕ್ಕಳ ಕ್ರೀಡಾಕೂಟದಲ್ಲಿ ಅನಾಹುತ; ಡಿಸ್ಕಸ್ ತಲೆಗೆ ಬಿದ್ದು ಶಿಕ್ಷಕ ಗಂಭೀರ ಗಾಯ

ರಿಪ್ಪನ್‌ಪೇಟೆ ಶಾಲಾ ಮಕ್ಕಳ ಕ್ರೀಡಾಕೂಟದಲ್ಲಿ ಅನಾಹುತ; ಡಿಸ್ಕಸ್ ತಲೆಗೆ ಬಿದ್ದು ಶಿಕ್ಷಕ ಗಂಭೀರ ಗಾಯ A physical education teacher…

15 hours ago

ನೆಲ್ಲಿಬೀಡು ಟಿಪ್ಪರ್ – ಬೈಕ್ ಅಪಘಾತ: ಮಗಳ ಸಾವಿನ ಬಳಿಕ ಚಿಕಿತ್ಸೆ ಫಲಿಸದೆ ತಂದೆಯೂ ಮೃತ್ಯು

ನೆಲ್ಲಿಬೀಡು ಟಿಪ್ಪರ್ – ಬೈಕ್ ಅಪಘಾತ: ಮಗಳ ಸಾವಿನ ಬಳಿಕ ಚಿಕಿತ್ಸೆ ಫಲಿಸದೆ ತಂದೆಯೂ ಮೃತ್ಯು A tragic tipper-bike…

18 hours ago

ಬಾಲಕ ಓಡಿಸಿದ ಬೊಲೆರೊ, ದಂಡ ಕಟ್ಟಿದ ತಂದೆ! ₹26,500 ಫೈನ್

ಬಾಲಕ ಓಡಿಸಿದ ಬೊಲೆರೊ, ದಂಡ ಕಟ್ಟಿದ ತಂದೆ! ₹26,500 ಫೈನ್ A Shivamogga court fined a father ₹26,500…

18 hours ago

ಸಾಗರ ಗ್ರಾಮಾಂತರ ಠಾಣೆಯ ನೂತನ ಪಿಎಸ್‌ಐ ಆಗಿ ಶಂಕರ್ ಗೌಡ ಪಾಟೀಲ್ ನೇಮಕ

ಸಾಗರ ಗ್ರಾಮಾಂತರ ಠಾಣೆಯ ನೂತನ ಪಿಎಸ್‌ಐ ಆಗಿ ಶಂಕರ್ ಗೌಡ ಪಾಟೀಲ್ ನೇಮಕ PSI Shankar Gowda Patil has…

2 days ago