ಹಾಡಹಗಲೇ ಮನೆ ಕಳವು ಮಾಡಿದ್ದ ಆರೋಪಿಯ ಬಂಧನ – ಲಕ್ಷಾಂತರ ಮೌಲ್ಯದ ಚಿನ್ನಾಭರಣ ಹಾಗೂ ಬೈಕ್ ವಶಕ್ಕೆ.!

ಹಾಡಹಗಲೇ ಮನೆ ಕಳವು ಮಾಡಿದ್ದ ಆರೋಪಿಯ ಬಂಧನ – ಲಕ್ಷಾಂತರ ಮೌಲ್ಯದ ಚಿನ್ನಾಭರಣ ಹಾಗೂ ಬೈಕ್ ವಶಕ್ಕೆ.!

ಹೊಸನಗರ : ಮನೆಗಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರ ಪೊಲೀಸ್ ಠಾಣೆಯ ಪಿಎಸೈ ಶಿವಾನಂದ್ ಕೆ ನೇತ್ರತ್ವದ ಸಿಬ್ಬಂದಿಗಳು ಆರೋಪಿಯನ್ನು ಬಂಧಿಸುವಲ್ಲಿ ಸಫಲರಾಗಿದ್ದಾರೆ. ಆರೋಪಿಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆದ ಘಟನೆ ನಡೆದಿದೆ.

ಹೊಸನಗರ ತಾಲೂಕಿನ ನಗರ ಹೋಬಳಿಯ ಕಟ್ಟಿನಹೊಳೆ ನಿವಾಸಿ ಶರತ್ ಎಂಬಾತನನ್ನು ಬಂಧಿಸಿ ಚಿನ್ನಾಭರಣ ಹಾಗೂ ಕಳ್ಳತನಕ್ಕೆ ಬಳಸಿದ್ದ ಬೈಕ್ ನ್ನು ವಶಕ್ಕೆ ಪಡೆಯಲಾಗಿದೆ.

ಆರೋಪಿಗಳಿಂದ ಹಾಲಿ ಮಾರುಕಟ್ಟೆ ಮೌಲ್ಯದ ಅಂದಾಜು 100000 ರೂ. ಮೌಲ್ಯದ 12 ಗ್ರಾಂ ತೂಕದ ಬಂಗಾರದ ಆಭರಣಗಳು ಹಾಗೂ 65 ಸಾವಿರ ರೂ ಮೌಲ್ಯದ ವಾಹನವನ್ನು ವಶಕ್ಕೆ ಪಡೆಯಲಾಗಿದೆ ಎಂದು ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದೆ.

ಕಳವು ಪ್ರಕರಣ :

03-03-2025 ರ ಮಧ್ಯಾಹ್ನ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಮತ್ತಿಕೈ ಗ್ರಾಮದ ಪರಶುರಾಮ ಎಂಬುವವರು ಸಂಬಂಧಿಕರ ಮನೆಯ ಉಪನಯನ ಕಾರ್ಯಕ್ರಮಕ್ಕೆ ತೆರಳಿ ಹಿಂದಿರುಗಿದಾಗ ಮನೆಯಲ್ಲಿ ಕಳವು ಕೃತ್ಯ ನಡೆದಿತ್ತು.

ಕಾರ್ಯಕ್ರಮದಿಂದ ವಾಪಾಸ್ ಆಗಮಿಸಿದಾಗ, ಮನೆಯ ಮುಂಬಾಗಿಲು ಹೊಡೆದು ಮನೆಯ ರೂಮ್ ನ ಕಪಾಟಿನಲ್ಲಿದ್ದ 12 ಗ್ರಾಂ ಚಿನ್ನದ ಸರ ಹಾಗೂ 15 ಸಾವಿರ ರೂ ನಗದು ಕಳ್ಳತನವಾಗಿರುವ ಬಗ್ಗೆ ಬೆಳಕಿಗೆ ಬಂದಿತ್ತು. ಈ ಸಂಬಂಧ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾದ ಪೊಲೀಸರ ಕಾರ್ಯವನ್ನು ಜಿಲ್ಲಾ ರಕ್ಷಣಾಧಿಕಾರಿ ಜಿ ಕೆ ಮಿಥುನ್ ಕುಮಾರ್ ಶ್ಲಾಘಿಸಿದ್ದಾರೆ.

ಕಾರ್ಯಾಚರಣೆಯಲ್ಲಿ ಠಾಣೆಯ ಎಎಸ್ ಐ ಗಳಾದ ಕುಮಾರ್ ಟಿ ಎಸ್ , ಶೇಖ್ ಅಮೀರ್ ಜಾನ್ ಸಿಬ್ಬಂದಿಗಳಾದಕಿರಣ್ ಕುಮಾರ್ , ವಿಶ್ವನಾಥ್ , ಪ್ರವೀಣ್ ಕುಮಾರ್ ,ಶಿವಕುಮಾರ್ ನಾಯ್ಕ್ ,ರವಿಚಂದ್ರನ್ ,ಸುಜಯ್ ಕುಮಾರ್ , ಪ್ರಜ್ವಲ್ ,ಸಚಿನ್ ಹಾಗೂ ಶಶಿಧರ್ ಇದ್ದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ರಿಪ್ಪನ್‌ಪೇಟೆಯಲ್ಲಿ ಮೋದಿ ಜನ್ಮದಿನಾಚರಣೆ : ವರಸಿದ್ದಿವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ

ರಿಪ್ಪನ್‌ಪೇಟೆಯಲ್ಲಿ ಮೋದಿ ಜನ್ಮದಿನಾಚರಣೆ : ವರಸಿದ್ದಿವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ Special pooja was offered at Varasiddhi…

3 hours ago

ಪ್ರಧಾನಿ ಮೋದಿ ಜನ್ಮದಿನ: ಶಿವಮೊಗ್ಗದಲ್ಲಿ ‘ಸೇವಾ ಸಂಕಲ್ಪ ಅಭಿಯಾನ’ಕ್ಕೆ ಚಾಲನೆ

ಪ್ರಧಾನಿ ಮೋದಿ ಜನ್ಮದಿನ: ಶಿವಮೊಗ್ಗದಲ್ಲಿ ‘ಸೇವಾ ಸಂಕಲ್ಪ ಅಭಿಯಾನ’ಕ್ಕೆ ಚಾಲನೆ BJP launches a month-long Seva Sankalpa Abhiyan…

3 hours ago

ಮೋದಿ ಹುಟ್ಟುಹಬ್ಬ ‘ನಿರುದ್ಯೋಗಿಗಳ ದಿನ’ವಾಗಿ ಆಚರಣೆ; ಯುವ ಕಾಂಗ್ರೆಸ್ ಪ್ರತಿಭಟನೆ

ಮೋದಿ ಹುಟ್ಟುಹಬ್ಬ ‘ನಿರುದ್ಯೋಗಿಗಳ ದಿನ’ವಾಗಿ ಆಚರಣೆ; ಯುವ ಕಾಂಗ್ರೆಸ್ ಪ್ರತಿಭಟನೆ Youth Congress and NSUI workers in Shivamogga…

3 hours ago

ಶಿವಮೊಗ್ಗ ಲೋಕಾಯುಕ್ತ ಎಸ್‌ಪಿಯಾಗಿ ಆಂಟನಿ ಜಾನ್ ನೇಮಕ

ಶಿವಮೊಗ್ಗ ಲೋಕಾಯುಕ್ತ ಎಸ್‌ಪಿಯಾಗಿ ಆಂಟನಿ ಜಾನ್ ನೇಮಕ Anthony John has been appointed as the new Lokayukta…

4 hours ago

ಕಡವೆ ಬೇಟೆ ಮಾಡಿ ಮಾಂಸ ಕತ್ತರಿಸುತ್ತಿದ್ದಾಗಲೇ ದಾಳಿ! ಮೂವರ ಬಂಧನ | 70 ಕೆ.ಜಿ. ಮಾಂಸ , ಬಂದೂಕು ಜಪ್ತಿ

ಕಡವೆ ಬೇಟೆ ಮಾಡಿ ಮಾಂಸ ಕತ್ತರಿಸುತ್ತಿದ್ದಾಗಲೇ ದಾಳಿ! ಮೂವರ ಬಂಧನ | 70 ಕೆ.ಜಿ. ಮಾಂಸ , ಬಂದೂಕು ಜಪ್ತಿ…

12 hours ago

ಬೇಕರಿ ಉತ್ಪನ್ನಗಳ ತಯಾರಿಕೆಯಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ: ಅರ್ಜಿ ಆಹ್ವಾನ

ಬೇಕರಿ ಉತ್ಪನ್ನಗಳ ತಯಾರಿಕೆಯಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ: ಅರ್ಜಿ ಆಹ್ವಾನ One-month skill development training on bakery product preparation…

1 day ago