SAGARA | ಹೋಳಿ ಆಚರಣೆ ವೇಳೆ ಹಲ್ಲೆ, ಸಾವು : ಇಬ್ಬರ ವಿರುದ್ಧ ಪ್ರಕರಣ ದಾಖಲು
ಸಾಗರ: ಇಲ್ಲಿನ ಜೆಪಿ ಬಡಾವಣೆಯಲ್ಲಿ ಶುಕ್ರವಾರ ಹೋಳಿ ಆಚರಣೆ ನಡೆದ ಹಲ್ಲೆಯಲ್ಲಿ ಗಾಯಗೊಂಡಿದ್ದ ವ್ಯಕ್ತಿ ಶುಕ್ರವಾರ ಮೃತಪಟ್ಟಿದ್ದಾರೆ.
ಇಲ್ಲಿನ ಜೆ.ಪಿ. ನಗರದ ಕೂಲಿ ಕಾರ್ಮಿಕ ರಾಜು( 48) ಮೃತಪಟ್ಟವರು.
ಹೋಳಿ ಹಬ್ಬ ಆಚರಣೆ ಸಂಧರ್ಭದಲ್ಲಿ ನಡೆದ ಘಟನೆಯಲ್ಲಿ ಗಾಯಗೊಂಡಿದ್ದ ಕಾರ್ಮಿಕ ರಾಜು(48) ಮೃತಪಟ್ಟಿದ್ದಾರೆ.
ಗುರುವಾರ ರಾತ್ರಿ ಕಾಮ ದಹನದ ಸಂದರ್ಭದಲ್ಲಿ ರಾಜು ಅವರ ಮೇಲೆ ಮಧು ಮತ್ತು ಮಾಲತೇಶ ಅವರು ಕ್ಷುಲ್ಲಕ ವಿಚಾರಕ್ಕೆ ಜಗಳವಾಡಿ ಹಲ್ಲೆ ನಡೆಸಿದ್ದರು.
ತಕ್ಷಣ ರಾಜು ಅವರನ್ನು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಈ ಸಂಬಂಧ ಶನಿವಾರ ಗಣೇಶ್ ಎಂಬವರು ನೀಡಿದ ದೂರಿನನ್ವಯ ಸಾಗರ ಟೌನ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸ್ತಿದ್ದಾರೆ. ಸದ್ಯ ಆರೋಪಿಯೊಬ್ಬರನ್ನು ವಶಕ್ಕೆ ಪಡೆದಿರುವ ಮಾಹಿತಿಯಿದೆ.
ಹೊಸನಗರ ತಾಲೂಕಿನ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಉತ್ತಮ ಶಿಕ್ಷಕಿ ಪ್ರಶಸ್ತಿ | ಶಿಕ್ಷಣ ಸಚಿವರಿಂದ ಅಭಿನಂದನೆ Rural teacher Ratnakumari…
ಬೇಟೆಗೆ ಹೊರಟಿದ್ದ ನಾಲ್ವರ ಬಂಧನ; ಎರಡು ನಾಡ ಬಂದೂಕು ಸೇರಿ ಹಲವು ವಸ್ತು ವಶಕ್ಕೆ ! Four people were…
ಪ್ರವಾಸಿ ಬಸ್ ಪಲ್ಟಿ: ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಸಾವು, 20 ಮಂದಿಗೆ ಗಾಯ nursing students died and 20…
ಬೆಂಗಳೂರು ಮೂಲದ ಸಿವಿಲ್ ಕಂಟ್ರಾಕ್ಟರ್ ತೀರ್ಥಹಳ್ಳಿಯಲ್ಲಿ ನಾಪತ್ತೆ: ಮಾಹಿತಿ ನೀಡಲು ಪೊಲೀಸರ ಮನವಿ 55-year-old Bengaluru-based civil contractor Anil…
ಕರ್ತವ್ಯ ನಿರತ ಅರಣ್ಯ ವಾಚರ್ ಮೇಲೆ ಕರಡಿ ದಾಳಿ: ಆಸ್ಪತ್ರೆಗೆ ಭೇಟಿ ನೀಡಿ ಧೈರ್ಯ ತುಂಬಿದ ಅರಣ್ಯಾಧಿಕಾರಿಗಳು Forest department…
ರಾತ್ರಿ ವೇಳೆ ರೈತನಿಗೆ ಚಾಕು ತೋರಿಸಿ ದರೋಡೆ ಮಾಡಿದ್ದ ಇಬ್ಬರು ಪೊಲೀಸರ ವಶಕ್ಕೆ Shivamogga rural police arrested two…