ಬಿ ವೈ ವಿಜಯೇಂದ್ರ ಕಾರಿಗೆ ಲಾರಿಗೆ ಡಿಕ್ಕಿ – ನಡೆದಿದ್ದೇನು.!!?

ಬಿ ವೈ ವಿಜಯೇಂದ್ರ ಕಾರಿಗೆ ಲಾರಿಗೆ ಡಿಕ್ಕಿ – ನಡೆದಿದ್ದೇನು.!!?

ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ ಹೊಡೆದಿರುವ ಘಟನೆ ನಿನ್ನೆ ರಾತ್ರಿ ಚಿಕ್ಕಮಗಳೂರು ತಾಲೂಕಿನ ಲಕ್ಯಾ ಕ್ರಾಸ್ ಬಳಿ ನಡೆದಿದೆ. ಈ ಭೀಕರ ಅಪಘಾತದಲ್ಲಿ ಅದೃಷ್ಟವಶಾತ್ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ನಿನ್ನೆ (ಶುಕ್ರವಾರ) ಬಸವ ತತ್ವ ಕಾರ್ಯಕ್ರಮ ಮುಗಿಸಿ ವಾಪಸ್ ಚಿಕ್ಕಮಗಳೂರು ನಗರದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ ಎನ್ನಲಾಗಿದೆ. ಲಾರಿ ಕಾರಿನ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ಕಾರು ಹಿಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ.

ಈ ಭೀಕರ ಅಪಘಾತದಲ್ಲಿ ಕಾರು ಚಾಲಕ ಸೇರಿದಂತೆ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಪೊಲೀಸರು ಲಾರಿಯನ್ನು ವಶಕ್ಕೆ ಪಡೆದು ಡ್ರೈವರ್​ ವಿರುದ್ಧ ಕೇಸ್​ ಮಾಡಿದ್ದಾರೆ. ಇನ್ನು, ಪಕ್ಷದ ಕಡೆಯಿಂದ ವಿಜಯೇಂದ್ರ ಅವರಿಗೆ ನೀಡಲಾದ ಅಧಿಕೃತ ಕಾರು ಇದಾಗಿತ್ತು ಎಂದು ತಿಳಿದುಬಂದಿದೆ.

ವಿಜಯೇಂದ್ರ ಅವರು ತಮ್ಮ ಪರ್ಸನಲ್​ ಕಾರಿನಲ್ಲಿ ಇದ್ದರು. ಪಕ್ಷ ನೀಡಿದ್ದ ಕಾರಿನಲ್ಲಿ ವಿಜಯೇಂದ್ರ ಅವರ ಫೋಟೋಗ್ರಾಫರ್​​ ಮತ್ತು ಪಿಎ ಸಂಚರಿಸುತ್ತಿದ್ದರು. ಚಿಕ್ಕಮಗಳೂರಿನಿಂದ ಶಿಖಾರಿಪುರ ತೆರಳುವ ವೇಳೆ ಆಯಕ್ಸಿಡೆಂಟ್​ ಆಗಿದೆ.

ಬೀರೂರು ಮೂಲದ ಹರೀಶ್ ಎಂಬುವರಿಗೆ ಸೇರಿದ ಲಾರಿ ಮರದ ಪೀಸ್ ತುಂಬಿಕೊಂಡು ಚಿಕ್ಕಮಗಳೂರು ನಗರದಿಂದ ಮುಂಬಯಿಗೆ ತೆರಳುತ್ತಿತ್ತು. ಸದ್ಯ ಪೊಲೀಸರು ಕಾರು ಸೇರಿದಂತೆ ಲಾರಿಯನ್ನು ಸಹ ಗ್ರಾಮಾಂತರ ಠಾಣೆಗೆ ತೆಗೆದುಕೊಂಡು ಹೋಗಿದ್ದು, ಲಾರಿ ಚಾಲಕನ ವಿರುದ್ಧ ಪ್ರಕರಣ ದಾಖಲಿಸಲು ಸಿದ್ದತೆ ನಡೆಸಿದ್ದಾರೆ.

ವಿಜಯೇಂದ್ರ ಅವರು ಬೇರೊಂದು ಕಾರಿನಲ್ಲಿ ಪ್ರಯಾಣಿಸುತ್ತಿದ್ದರಿಂದ ಅವರು ಅಪಘಾತದಿಂದ ಆಗಿದ್ದಾರೆ. ಅಂತೆಯೇ ಅಪಘಾತಕ್ಕೀಡಾದ ವಿಜಯೇಂದ್ರಗೆ ಸೇರಿದ ಕಾರಿನ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹೊರ ಜಿಲ್ಲೆಗಳಿಗೆ ತೆರಳುವಾಗ ವಿಜಯೇಂದ್ರ ಅವರು ಇದೇ ಕಾರನ್ನು ಬಳಸುತ್ತಿದ್ದರು. ಆದರೆ, ಅದೃಷ್ಟವಶಾತ್ ಇಂದು ಮತ್ತೊಂದು ಕಾರಿನಲ್ಲಿ ಪ್ರಯಾಣಿಸುತ್ತಿದ್ದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಹೊಸನಗರ ತಾಲೂಕಿನ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಉತ್ತಮ ಶಿಕ್ಷಕಿ ಪ್ರಶಸ್ತಿ | ಶಿಕ್ಷಣ ಸಚಿವರಿಂದ ಅಭಿನಂದನೆ

ಹೊಸನಗರ ತಾಲೂಕಿನ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಉತ್ತಮ ಶಿಕ್ಷಕಿ ಪ್ರಶಸ್ತಿ | ಶಿಕ್ಷಣ ಸಚಿವರಿಂದ ಅಭಿನಂದನೆ Rural teacher Ratnakumari…

7 hours ago

ಬೇಟೆಗೆ ಹೊರಟಿದ್ದ ನಾಲ್ವರ ಬಂಧನ; ಎರಡು ನಾಡ ಬಂದೂಕು ಸೇರಿ ಹಲವು ವಸ್ತು ವಶ

ಬೇಟೆಗೆ ಹೊರಟಿದ್ದ ನಾಲ್ವರ ಬಂಧನ; ಎರಡು ನಾಡ ಬಂದೂಕು ಸೇರಿ ಹಲವು ವಸ್ತು ವಶಕ್ಕೆ ! Four people were…

20 hours ago

ಪ್ರವಾಸಿ ಬಸ್ ಪಲ್ಟಿ: ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಸಾವು, 20 ಮಂದಿಗೆ ಗಾಯ

ಪ್ರವಾಸಿ ಬಸ್ ಪಲ್ಟಿ: ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಸಾವು, 20 ಮಂದಿಗೆ ಗಾಯ nursing students died and 20…

22 hours ago

ಬೆಂಗಳೂರು ಮೂಲದ ಸಿವಿಲ್ ಕಂಟ್ರಾಕ್ಟರ್ ತೀರ್ಥಹಳ್ಳಿಯಲ್ಲಿ ನಾಪತ್ತೆ: ಮಾಹಿತಿ ನೀಡಲು ಪೊಲೀಸರ ಮನವಿ

ಬೆಂಗಳೂರು ಮೂಲದ ಸಿವಿಲ್ ಕಂಟ್ರಾಕ್ಟರ್ ತೀರ್ಥಹಳ್ಳಿಯಲ್ಲಿ ನಾಪತ್ತೆ: ಮಾಹಿತಿ ನೀಡಲು ಪೊಲೀಸರ ಮನವಿ 55-year-old Bengaluru-based civil contractor Anil…

1 day ago

ಕರ್ತವ್ಯ ನಿರತ ಅರಣ್ಯ ವಾಚರ್ ಮೇಲೆ ಕರಡಿ ದಾಳಿ: ಆಸ್ಪತ್ರೆಗೆ ಭೇಟಿ ನೀಡಿ ಧೈರ್ಯ ತುಂಬಿದ ಅರಣ್ಯಾಧಿಕಾರಿಗಳು

ಕರ್ತವ್ಯ ನಿರತ ಅರಣ್ಯ ವಾಚರ್ ಮೇಲೆ ಕರಡಿ ದಾಳಿ: ಆಸ್ಪತ್ರೆಗೆ ಭೇಟಿ ನೀಡಿ ಧೈರ್ಯ ತುಂಬಿದ ಅರಣ್ಯಾಧಿಕಾರಿಗಳು Forest department…

1 day ago

ರಾತ್ರಿ ವೇಳೆ ರೈತನಿಗೆ ಚಾಕು ತೋರಿಸಿ ದರೋಡೆ ಮಾಡಿದ್ದ ಇಬ್ಬರು ಪೊಲೀಸರ ವಶಕ್ಕೆ

ರಾತ್ರಿ ವೇಳೆ ರೈತನಿಗೆ ಚಾಕು ತೋರಿಸಿ ದರೋಡೆ ಮಾಡಿದ್ದ ಇಬ್ಬರು ಪೊಲೀಸರ ವಶಕ್ಕೆ Shivamogga rural police arrested two…

1 day ago