ಮೈಕ್ರೋ ಫೈನಾನ್ಸ್ ನವರು ಮನೆ ಬಾಗಿಲಿಗೆ ಬಂದು ಕಿರಿಕಿರಿ ಮಾಡಿದರೆ ತಕ್ಷಣ ಈ ನಂಬರ್ ಗೆ ಕರೆ ಮಾಡಿ
ಸರ್ಕಾರ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬ್ರೇಕ್ ಹಾಕುವು ಸಲುವಾಗಿಯೇ ಕಾನೂನು ಜಾರಿ ಮಾಡಿದೆ. ಆದಾಗ್ಯು ಕೊಟ್ಟ ದುಡ್ಡು ವಾಪಸ್ ಕೊಡುವಾಗ, ಇಸ್ಕೊಂಡಾಗ ಇದ್ದ ನಿಯತ್ತು ಇರಬೇಕಲ್ವಾ ಎನ್ನುತ್ತಲೇ ಸಾಲಗಾರರು ಮತ್ತಷ್ಟು ಕಿರುಕುಳ ನೀಡುತ್ತಿರುವ ಬಗ್ಗೆ ವರದಿಗಳು ಕೇಳಿಬಂದಿದೆ. ಶಿವಮೊಗ್ಗದಲ್ಲಿಯು ಇಂತಹ ಸಾಲದ ಕಿರುಕುಳ ಸಾಮಾನ್ಯವಾಗಿದೆ.
ಹಣ ಪಡೆದವರು ಸ್ವಲ್ಪ ವೀಕ್ ಎಂದು ಗೊತ್ತಾಗುತ್ತಲೇ ಬಾಯಿಗೆ ಬಂದ ಹಾಗೆ ಬೈದು ಹೆದರಿಸುವ ಪ್ರವೃತ್ತಿಗಳು ಚಾಲ್ತಿಯಲ್ಲಿದೆ. ಜೊತೆಯಲ್ಲಿ ರೌಡಿಶೀಟರ್ಗಳನ್ನು ಮನೆಯ ಬಳಿ ಕಳುಹಿಸಿ ಹಣದ ರಿಕವರಿ ಮಾಡಿಕೊಳ್ಳಲಾಗುತ್ತಿದೆ ಎಂದ ಸುದ್ದಿಯಿದೆ. ಇದೆಲ್ಲದಕ್ಕೂ ಬ್ರೇಕ್ ಹಾಕುವ ನಿಟ್ಟಿನಲ್ಲಿ ಶಿವಮೊಗ್ಗ ಪೊಲೀಸ್ ಇಲಾಖೆ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಸೂಚನೆಯಂತೆ ಸಾಲಗಾರರ ಕಾಟಕ್ಕೆ ಬ್ರೇಕ್ ಹಾಕಲು 112 ERSS ನ ಮೊರೆ ಹೋಗುವಂತೆ ಸಾರ್ವಜನಿಕರಿಗೆ ತಿಳಿಸಿದೆ.
ಹೌದು, ಸಾಲದ ವಿಚಾರವಾಗಿ ಕಿರುಕುಳ ನೀಡಿದ್ದಲ್ಲಿ ತಕ್ಷಣವೇ 112 ಪೊಲೀಸರಿಗೆ ಕರೆ ಮಾಡುವಂತೆ ಶಿವಮೊಗ್ಗ ಪೊಲೀಸ್ ಇಲಾಖೆ ಪ್ರಕಟಣೆ ನೀಡಿದೆ. ಈ ಪ್ರಕಟಣೆಯನ್ನು ಎಸ್ಪಿ ಮಿಥುನ್ ಕುಮಾರ್, ತಮ್ಮ ಅಧಿಕೃತ ಸೋಶಿಯಲ್ ಮೀಡಿಯಾ ಅಕೌಂಟ್ನಲ್ಲಿ ಪೋಸ್ಟ್ ಮಾಡಿದ್ದಾರೆ. ಹೀಗಾಗಿ ಸಾಲ ಪಡೆದವರು, ಸಾಲದಾತರ ಆರ್ಭಟಕ್ಕೆ ಹೆದರುವ ಅಗತ್ಯವಿಲ್ಲ. ಸಾಲ ಕೊಟ್ಟವರು ಸಲ್ಲದ ಮಾತುಗಳನ್ನು ಆಡಿ ಹೆದರಿಸಿದರೆ, ತಕ್ಷಣವೆ ಪೊಲೀಸರ ಮೊರೆಹೋಗಬಹುದಾಗಿದೆ.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್
Leave a Reply