HOSANAGARA | ಚಿರತೆ ದಾಳಿಗೆ ಜಾನುವಾರು ಬಲಿ
ಹೊಸನಗರ ತಾಲೂಕಿನ ಪುಣಜೆ ಗ್ರಾಮದ ಬ್ರಹ್ಮೇಶ್ವರದಲ್ಲಿ ಕೆಲ ದಿನಗಳಿಂದ ಚಿರತೆ ಸಂಚರಿಸುತ್ತಿದ್ದು ಗ್ರಾಮದ ಜಾನುವಾರುಗಳು ಚಿರತೆ ದಾಳಿಗೆ ಬಲಿಯಾಗಿವೆ.
ಇಲ್ಲಿನ ಅಂಬೇಡ್ಕರ್ ಕಾಲೋನಿ ಸಮೀಪದ ಅರಣ್ಯ ಪ್ರದೇಶದಲ್ಲಿ 4 ದನಗಳ ಶವದ ಅವಶೇಷಗಳು ದೊರಕಿದ್ದು ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಸುತ್ತಮುತ್ತಲ ಪ್ರದೇಶದಲ್ಲಿ ಚಿರತೆಯ ಹೆಜ್ಜೆ ಗುರುತುಗಳನ್ನು ಗ್ರಾಮಸ್ಥರು ಪತ್ತೆ ಮಾಡಿರುವುದು, ಈ ಭಾಗದಲ್ಲಿ ಚಿರತೆಯ ಇರುವಿಕೆಯನ್ನು ದೃಢಪಡಿಸಿದೆ.
ಕೆಲ ದಿನಗಳಿಂದ ಕಾಡಿಗೆ ಮೇಯಲು ಬಿಟ್ಟ ಜಾನುವಾರುಗಳು ಮನೆ ಮರಳಿ ಬಂದಿರಲಿಲ್ಲ. ಆದರೆ ಇತ್ತೀಚೆಗೆ ಅರಣ್ಯ ಪ್ರದೇಶದಲ್ಲಿ ಜಾನುವಾರುಗಳ ಕಳೇಬರಗಳು ಪತ್ತೆಯಾಗಿವೆ.
ಚಿರತೆಯ ಇರುವಿಕೆ ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣ ಮಾಡಿದೆ. ಜನನಿಬಿಡ ಪ್ರದೇಶವಾಗಿದ್ದು ಈ ಭಾಗದಲ್ಲಿ ದಟ್ಟ ಕಾಡಿಲ್ಲ.
ನಾಗರಿಕ ಪ್ರದೇಶದಲ್ಲಿ ಚಿರತೆ ದಾಳಿ ನಡೆಸಿದ ಹಲವು ಘಟನೆಗಳು ರಾಜ್ಯದಲ್ಲಿ ಆಗಾಗ್ಗೆ ಕೇಳಿ ಬರುತ್ತಿವೆ. ಅರಣ್ಯ ಇಲಾಖೆ ಸಿಬ್ಬಂದಿ ಚಿರತೆಯನ್ನು ಪತ್ತೆ ಮಾಡಿ ಅಭಯಾರಣ್ಯಕ್ಕೆ ಸಾಗಿಸಬೇಕು ಎಂದು ಸ್ಥಳೀಯ ನಿವಾಸಿಗಳು ಒತ್ತಾಯಿಸಿದ್ದಾರೆ.
ಸಾಗರದ ಇಂದಿರಗಾಂಧಿ ಕಾಲೇಜಿನ ಸೀಮಾ ಕೌಸರ್ ಗೆ ಪಿಎಚ್.ಡಿ ಪದವಿ Seema Kausar, Head and Associate Professor of…
ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಪಿಯು ಕಾಲೇಜು ಪ್ರಾಂಶುಪಾಲರ ವಿರುದ್ಧ ಪೋಕ್ಸೋ, ಅಟ್ರಾಸಿಟಿ ಪ್ರಕರಣ Shivamogga police have registered…
ಕಾರ್ಮಿಕರ ಕಾರ್ಡ್ ಹೆಸರಿನಲ್ಲಿ ವಂಚನೆ ಆರೋಪ: ರಿಪ್ಪನ್ಪೇಟೆಯಲ್ಲಿ ಕಾರ್ಮಿಕರ ಆಕ್ರೋಶ Workers in Ripponpete allege money was collected…
ಹುಂಚದ ಶವಾಗಾರಕ್ಕೆ 6 ವರ್ಷವಾದರೂ ಉದ್ಘಾಟನೆ ಭಾಗ್ಯ ಇಲ್ಲ – ಮುಹೂರ್ತ ಸಿಕ್ಕಿಲ್ಲವೋ, ಅಥವಾ ಸತ್ತವರೇ ಎದ್ದು ಬಂದು ರಿಬ್ಬನ್…
ಈದ್ ಮಿಲಾದ್ ಹಬ್ಬ: ಸೌಹಾರ್ದತೆ ಕಾಪಾಡಲು ಪಿಎಸ್ಐ ರಾಜುರೆಡ್ಡಿ ಕರೆ Ripponpete PSI Rajureddy appeals for peaceful and…
13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೈಕ್ ಕಳ್ಳ ಕೊನೆಗೂ ಪೊಲೀಸರ ಬಲೆಗೆ Bhadravati New Town Police have arrested a…