ಮುಖ್ಯಮಂತ್ರಿ ಬದಲಾವಣೆ: ಸಿದ್ದರಾಮಯ್ಯ- ಡಿಕೆಶಿ ಬಗ್ಗೆ ಸ್ಫೋಟಕ ಭವಿಷ್ಯ ನುಡಿದ ಕೋಡಿಹಳ್ಳಿ ಶ್ರೀ!
ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆ ಕೂಗ ಹಲವು ದಿನಗಳಿಂದ ಜೋರಾಗುತ್ತಿದೆ. ಹೇಗಾದರೂ ಮಾಡಿ ಮುಖ್ಯಮಂತ್ರಿಯಾಗಲೇಬೆಕೆಂದು ಡಿಕೆ ಶಿವಕುಮಾರ್, ಇನ್ನಿಲ್ಲದ ಕಸರತ್ತು ನಡೆಸಿದ್ದು, ಇದಕ್ಕೆ ನಾನಾ ತಂತ್ರಗಳನ್ನು ಹೆಣೆಯುತ್ತಿದ್ದಾರೆ. ಅದರಲ್ಲೂ ಇತ್ತೀಚೆಗೆ ಡಿಕೆ ಶಿವಕುಮಾರ್ ಅವರ ನಡೆ, ನುಡಿಗಳು ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಸಂಚಲನಕ್ಕೆ ಕಾರಣವಾಗಿದೆ.
ಅದರಲ್ಲೂ ಕಾಂಗ್ರೆಸ್ನಲ್ಲಿ ಹಲವು ರೀತಿಯ ಚರ್ಚೆಗೆ ಗ್ರಾಸವಾಗಿದೆ. ಇದರ ಮಧ್ಯೆ ಇದೀಗ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಕೋಡಿಹಳ್ಳಿ ಶ್ರೀ ಮಹತ್ವದ ಭವಿಷ್ಯ ನುಡಿದಿದ್ದಾರೆ. ಅಲ್ಲದೇ ಯುಗಾದಿ ನಂತರ ದೇಶ-ವಿದೇಶಗಳಲ್ಲಿ ಏನೇನಾಗಲಿದೆ ಎನ್ನುವ ಆಘಾತಕಾರಿ ಅಂಶವನ್ನು ಬಿಚ್ಚಿಟ್ಟಿದ್ದಾರೆ.
ಯಾದಗಿರಿಯಲ್ಲಿಂದು ಮಾತನಾಡಿರುವ ಕೋಡಿಹಳ್ಳಿ ಶ್ರೀಗಳು, ಎಲ್ಲಾ ಸಮುದಾಯದ ಎಲ್ಲಾ ಜಾತಿ ಎಲ್ಲಾ ವರ್ಗದವರು ಈ ಭೂಮಿ ಮೇಲೆ ವಾಸವಿದ್ದಾರೆ. ಪ್ರಾಚೀನ ಕಾಲದಿಂದಲೂ ಹಾಲಮತ ಸಮಾಜ ಅಂತ ಆಂದ್ರೆ ಅಡವಿಯಲ್ಲಿದ್ದು ಕುರಿಗಳನ್ನ ಸಾಕೋದು ಮಾಡ್ತಾರೆ. ಕುರಿಯ ಇಕ್ಕಿಯಲ್ಲಿ ಲಿಂಗವನ್ನ ಕಂಡವರು. ಪ್ರಕೃತಿ ಮೇಲೆ ಗಾಳಿಯ ಮೇಲೆ ಭೂಮಿಯ ಮೇಲೆ ಅವರು ಅಡವಿಯಲ್ಲಿ ಇದ್ದು ಕಂಡದ್ದು ನೋಡಿದ್ದ ಅನುಭವಸಿದ್ದನ್ನ ಹೇಳುತ್ತಾ ಬಂದಿದ್ದಾರೆ ಅದು ಕುರುವಿನ ರಟ್ಟು. ಹಾಲು ಕೆಟ್ಟರು ಹಾಲಮತ ಸಮಾಜ ಕೆಡುವುದಿಲ್ಲ ಅಂತ ಹೇಳುತ್ತಾರೆ. ಇವತ್ತು ಹಾಲಮತ ಸಮಾಜದವರ ಕೈಯಲ್ಲಿ ರಾಜ್ಯದ ಅಧಿಕಾರವಿದೆ. ಬಿಡಿಸಿಕೊಳ್ಳೋದು ಅಷ್ಟು ಸುಲಭವಲ್ಲ. ಅವರಾಗೇ ಬಿಡಬೇಕು. ನೀವು ಬಿಡಿಸಿಕೊಳ್ಳುವುದು ಅಷ್ಟು ಸುಲಭವಲ್ಲ. ಮುಂದೆ ಏನಾಗುತ್ತೆ ಎಂದು ಯುಗಾದಿ ಮೇಲೆ ಹೇಳುತ್ತೇನೆ ಎಂದಿದ್ದಾರೆ.
ಈ ಮೂಲಕ ಕೋಡಿಹಳ್ಳಿ ಶ್ರೀ ಪರೋಕ್ಷವಾಗಿ ಸದ್ಯ ಸಿದ್ದರಾಮಯ್ಯನವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸುವುದು ಅಷ್ಟು ಸುಲಭವಲ್ಲ ಎಂದಿದ್ದಾರೆ.
ನಮ್ಮಲ್ಲಿ ಎರಡು ಭಾಗ ಮಾಡುತ್ತಾರೆ. ಒಂದು ಸಂಕ್ರಾಂತಿ ಭವಿಷ್ಯ ಇನ್ನೊಂದು ಯುಗಾದಿ ಭವಿಷ್ಯ ಅಂತ. ಸಂಕ್ರಾಂತಿ ಭವಿಷ್ಯ ರಾಜರುಗಳಿಗೆ ಮಹಾರಾಜರುಗಳಿಗೆ ದೊಡ್ಡ ವ್ಯಾಪಾರಸ್ಥರಿಗೆ ಸಂಕ್ರಾಂತಿ ಭವಿಷ್ಯ ಇರುತ್ತೆ. ಯುಗಾದಿ ಮೇಲೆ ಬರೋದು ಚಂದ್ರಮಾನ ಯುಗಾದಿ. ಚಂದ್ರನನ್ನ ಆಧಾರವಾಗಿಟ್ಟುಕೊಂಡು ಮಳೆ,ಬೆಳೆ ,ಆಳ್ವಿಕೆಗಳು,ರಾಜರುಗಳು,ಅವಘಡಗಳು,ದುಖ ದುಮ್ಮಾನಗಳು,ಸಂತೋಷಗಳು ಇದರ ಮೇಲೆ ಹೇಳೆದೋ ಯುಗಾದಿ ಸಮಸ್ರಫಲ. ಯುಗಾದಿ ಇನ್ನೊಂದು ತಿಂಗಳು ದೂರವಿದೆ. ಅದರ ಮೇಲೆ ಹೇಳೋದು ಸ್ವಲ್ಪ ಕಷ್ಟ. ನಮ್ಮ ಪ್ರಕಾರ ಬರುವಂತ ದಿನಗಳಲ್ಲಿ ಕರ್ನಾಟಕಕ್ಕೆ ತೊಂದರೆ ತಾಪತ್ರೆಗಳಿಲ್ಲ. ಮಳೆ ಬೆಳೆ ಚೆನ್ನಾಗಿಯಿದೆ ಸುಭಿಕ್ಷಿತೆ ಇರುತ್ತೆ ಯಾವುದೇ ತೊಂದರೆಗಳು ಕಾಣುತ್ತಿಲ್ಲ.
ಯುಗಾದಿಯ ಬಳಿಕ ಮತ್ತೆ ಜಾಗತಿಕ ಬಗ್ಗೆ ಬಹಳ ಅಜಾಗುರಕತೆಯಿದೆ. ಹೋದ ವರ್ಷಕ್ಕಿಂತ ಈ ವರ್ಷ ಇನ್ನು ಭೀಕರಕತೆ ಕಾಡುವ ಲಕ್ಷಣಗಳಿವೆ. ಭೂಮಿ ಅಗಲಾಗೊಂದು(ಭೂಕಂಪ) ಸಾವು ನೋವು ಸಂಭವಿಸೋದು, ಕಟ್ಟಡಗಳು ನೆಲಕುರುಳೋದು ಮುಂದುವರೆಯುತ್ತೆ. ಭೂ ಸುನಾಮಿ,ಜಲ ಸುನಾಮಿ,ಭಾಹ್ಯ ಸುನಾಮಿ ಅಂತ ಹೇಳುತ್ತಿವೆ. ಇಲ್ಲಿವರೆಗೆ ಬರಿ ಜಲ ಸುನಾಮಿ ಆಗುತ್ತಿತ್ತು. ಈ ಬಾರಿ ಭುಸುನಾಮಿ ಕೂಡ ಆಗುತ್ತೆ ಎಂದು ಕೋಡಿಹಳ್ಳಿ ಶ್ರೀ ಸ್ಫೋಟಕ ಭವಿಷ್ಯ ನುಡಿದಿದ್ದು, ಜೊತೆಗೆ ಭಾಹ್ಯಕಾಶದಲ್ಲೂ ಸುನಾಮಿ ಆಗುತ್ತೆ. ಅದನ್ನ ಯುಗಾದಿ ನಂತರ ಹೇಳುತ್ತೇನೆ ಎಂದರು.
ಸಾಗರದ ಇಂದಿರಗಾಂಧಿ ಕಾಲೇಜಿನ ಸೀಮಾ ಕೌಸರ್ ಗೆ ಪಿಎಚ್.ಡಿ ಪದವಿ Seema Kausar, Head and Associate Professor of…
ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಪಿಯು ಕಾಲೇಜು ಪ್ರಾಂಶುಪಾಲರ ವಿರುದ್ಧ ಪೋಕ್ಸೋ, ಅಟ್ರಾಸಿಟಿ ಪ್ರಕರಣ Shivamogga police have registered…
ಕಾರ್ಮಿಕರ ಕಾರ್ಡ್ ಹೆಸರಿನಲ್ಲಿ ವಂಚನೆ ಆರೋಪ: ರಿಪ್ಪನ್ಪೇಟೆಯಲ್ಲಿ ಕಾರ್ಮಿಕರ ಆಕ್ರೋಶ Workers in Ripponpete allege money was collected…
ಹುಂಚದ ಶವಾಗಾರಕ್ಕೆ 6 ವರ್ಷವಾದರೂ ಉದ್ಘಾಟನೆ ಭಾಗ್ಯ ಇಲ್ಲ – ಮುಹೂರ್ತ ಸಿಕ್ಕಿಲ್ಲವೋ, ಅಥವಾ ಸತ್ತವರೇ ಎದ್ದು ಬಂದು ರಿಬ್ಬನ್…
ಈದ್ ಮಿಲಾದ್ ಹಬ್ಬ: ಸೌಹಾರ್ದತೆ ಕಾಪಾಡಲು ಪಿಎಸ್ಐ ರಾಜುರೆಡ್ಡಿ ಕರೆ Ripponpete PSI Rajureddy appeals for peaceful and…
13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೈಕ್ ಕಳ್ಳ ಕೊನೆಗೂ ಪೊಲೀಸರ ಬಲೆಗೆ Bhadravati New Town Police have arrested a…