ಲೋಕಾಯುಕ್ತ ಬಲೆಗೆ ಬಿದ್ದ ಡಿವೈಎಸ್ಪಿ
ಶಿವಮೊಗ್ಗ: ಜಿಲ್ಲಾ ಸಶಸ್ತ್ರ ಮೀಸಲು ಪಡೆಯ (ಡಿಎಆರ್) ಡಿವೈಎಸ್ಪಿ ಕೃಷ್ಣಮೂರ್ತಿ ಇಂದು ಲೋಕಾ ಬಲೆಗೆ ಬಿದ್ದಿದ್ದಾರೆ. ಡಿಎಆರ್ ಸಿಬ್ಬಂದಿಯೋಬ್ಬರು ನೀಡಿದ ದೂರಿನ ಮೇರೆಗೆ 5 ಸಾವಿರ ರೂ. ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.
ಶಿವಮೊಗ್ಗದ ಡಿಎಆರ್ ನಲ್ಲಿ ಸಿಬ್ಬಂದಿಗೆ ಕರ್ತವ್ಯ ನಿಯೋಜನೆ ಸಂಬಂಧ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಹಿನ್ನೆಲೆಯಲ್ಲಿ ಡಿಎಆರ್ ನ ಸಿಬ್ಬಂದಿಯೊಬ್ಬರು, ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು ಎನ್ನಲಾಗಿದೆ.
ಅದರಂತೆ ಇಂದು ಡಿಎಆರ್ ಡಿವೈಎಸ್ಪಿ ಕೃಷ್ಣಮೂರ್ತಿ ತಮ್ಮ ಮನೆಯಲ್ಲಿ ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.
ಲೋಕಾಯುಕ್ತ ಎಸ್ಪಿ ಮಂಜುನಾಥ್ ಚೌಧರಿ ನೇತೃತ್ವದಲ್ಲಿ ದಾಳಿ ನಡೆಸಿದ್ದು, ಡಿವೈಎಸ್ಪಿ ಕೃಷ್ಣಮೂರ್ತಿ ಅವರ ವಿಚಾರಣೆ ನಡೆಸಲಾಗುತ್ತಿದೆ.
ತೋಟದ ಮಧ್ಯೆ ಅಕ್ರಮ ಗಾಂಜಾ ಬೆಳೆ: ಲಕ್ಷಾಂತರ ರೂ ಮೌಲ್ಯದ ಗಾಂಜಾ ಗಿಡಗಳು ವಶ, ಇಬ್ಬರ ಬಂಧನ Anandapura Police…
ಪೊಲೀಸ್ ಅಧಿಕಾರಿಗಳೆಂದು ನಂಬಿಸಿ ಮಹಿಳೆಯಿಂದ ಚಿನ್ನದ ಸರ ದೋಚಿದ್ದ ಆರೋಪ - ಇಬ್ಬರ ಬಂಧನ Two interstate thieves from…
ಹೊಸನಗರ ತಾಲೂಕಿನಾದ್ಯಂತ ಮಸೀದಿಗಳಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ Independence Day celebrations were held with patriotic fervour at…
ರಿಪ್ಪನ್ ಪೇಟೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವ ಸಂಭ್ರಮ; ಮಳೆಯ ನಡುವೆಯೂ ಶಾಲಾ ಮಕ್ಕಳ ಪಥಸಂಚಲನ Ripponpete celebrated the 80th Independence…
ಗುಟ್ಕಾ- ಪಾನ್ ಮಸಾಲಾ ಬ್ಯಾನ್ಗೆ ಬಿಗ್ ಟ್ವಿಸ್ಟ್: ಎರಡೇ ದಿನಕ್ಕೆ ಆದೇಶ ವಾಪಸ್! Karnataka government reportedly orders withdrawal…
ಶಿವಮೊಗ್ಗ: ನಕಲಿ ಸರ್ಕಾರಿ ದಾಖಲೆ ಸೃಷ್ಟಿಸಿ ವಂಚನೆ — ಆರೋಪಿಗೆ 5 ವರ್ಷ ಕಠಿಣ ಜೈಲು Shivamogga court sentences…