ಕ್ಷುಲ್ಲಕ ವಿಚಾರಕ್ಕೆ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ – ಇಬ್ಬರ ಬಂಧನ | ಅಷ್ಟಕ್ಕೂ ಹುಂಚ ಕಲ್ಲುಕ್ವಾರೆಯಲ್ಲಿ ನಡೆದಿದ್ದೇನು..!!?
ರಿಪ್ಪನ್ಪೇಟೆ : ಇಲ್ಲಿನ ಸಮೀಪದ ಹುಂಚ ಗ್ರಾಪಂ ವ್ಯಾಪ್ತಿ ಕಲ್ಲು ಕ್ವಾರೆಯೊಂದರಲ್ಲಿ ಕ್ಷುಲ್ಲಕ ವಿಚಾರಕ್ಕೆ ವ್ಯಕ್ತಿಯೊಬ್ಬನ ಮಾರಣಾಂತಿಕ ಹಲ್ಲೆ ನಡೆದಿದ್ದು , ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.
ನಡೆದಿದ್ದೇನು..!!?
ಹುಂಚ ವ್ಯಾಪ್ತಿಯ ಹೊಂಡಲಗದ್ದೆ ಕಲ್ಲು ಕ್ರಷರ್ ನಲ್ಲಿ ದಿನಾಂಕ 08-03-2025 ರಂದು ಸಂಜೆ ಸಮಯದಲ್ಲಿ ಕ್ರಷರ್ ಗೆ ಬೈಕ್ ನಲ್ಲಿ ಬಂದ ನಾಲ್ಕೈದು ಜನ ಕ್ಷುಲ್ಲಕ ವಿಚಾರಕ್ಕೆ ಕ್ರಷರ್ ನ ಕಾರ್ಮಿಕ ಪ್ರತೀಷ್ ಕುಮಾರ್ ಎಂಬಾತನ ಮೇಲೆ ರಾಡು ಹಾಗೂ ದೊಣ್ಣೆಗಳಿಂದ ಹಲ್ಲೆ ಮಾಡಿದ್ದಾರೆ ಈ ಸಂಧರ್ಭದಲ್ಲಿ ಯಾರೋ ಕಿಡಿಗೇಡಿಗಳು ಕಟ್ಟಡದ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದಾರೆ ,ಮತ್ತೊಬ್ಬ ಕಬ್ಬಿಣದ ರಾಡ್ ಹಿಡಿದುಕೊಂಡು ಪ್ರತೀಷ್ ಕುಮಾರ್ ನನ್ನು ಕೊಲೆ ಮಾಡುವ ಉದ್ದೇಶದಿಂದ ತಲೆ ಗೆ ಹೊಡೆಯಲು ಯತ್ನಿಸಿದ್ದಾನೆ ಈ ಸಂಧರ್ಭದಲ್ಲಿ ಅವರು ತಪ್ಪಿಸಿಕೊಂಡಿದ್ದಾರೆ.
ನಂತರದಲ್ಲಿ ಅಲ್ಲಿದ್ದ ಕಾರ್ಮಿಕರು ಬಂದು ಗಲಾಟೆ ತಪ್ಪಿಸಿದ್ದಾರೆ ಇದೇ ಸಂಧರ್ಭದಲ್ಲಿ ಕಿಡಿಗೇಡಿಗಳು ಈ ಬಾರಿ ತಪ್ಪಿಸಿಕೊಂಡಿದ್ದೀಯಾ ಮುಂದಿನ ಬಾರಿ ನಿನ್ನನ್ನು ಮುಗಿಸಿಬಿಡುತ್ತೇವೆ ಎಂದು ಬೆದರಿಕೆ ಹಾಕಿ ಅವಾಚ್ಯ ಪದಗಳಿಂದ ನಿಂದಿಸಿದ್ದಾರೆ.
ಈ ಬಗ್ಗೆ ರಿಪ್ಪನ್ಪೇಟೆ ಪೊಲೀಸ್ ಠಾಣೆಗೆ ಗಾಯಾಳು ಪ್ರತೀಷ್ ಕುಮಾರ್ ದೂರು ಸಲ್ಲಿಸಿದ್ದಾರೆ.ಪ್ರಕರಣ ದಾಖಲಾಗುತಿದ್ದಂತೆ ಕಾರ್ಯಪ್ರವೃತ್ತರಾದ ಪಿಎಸ್ಐ ಪ್ರವೀಣ್ ಎಸ್ ಪಿ ಮತ್ತು ಸಿಬ್ಬಂದಿಗಳ ತಂಡ ಇಬ್ಬರನ್ನು ಬಂಧಿಸಿದ್ದಾರೆ.ಇನ್ನುಳಿದ ಮೂವರು ಆರೋಪಿಗಳು ತಲೆಮರೆಸಿಕೊಂಡಿದ್ದು ಅವರ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
ನೀರಿನಲ್ಲಿ ಅಡಗಿ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಲು ಯತ್ನ ; ಸಿನಿಮೀಯ ರೀತಿಯಲ್ಲಿ ರೌಡಿಶೀಟರ್ನನ್ನು ಬಂಧಿಸಿದ ಪೊಲೀಸರು Bhadravathi police dramatically…
ಅಜಾಗರೂಕ ಚಾಲನೆಯಿಂದ ಕೆರೆಗೆ ನುಗ್ಗಿದ ಲಾರಿ! ತಪ್ಪಿದ ಭಾರಿ ದುರಂತ A container lorry allegedly driven recklessly under…
ರಿಪ್ಪನ್ಪೇಟೆ ಶಾಲಾ ಮಕ್ಕಳ ಕ್ರೀಡಾಕೂಟದಲ್ಲಿ ಅನಾಹುತ; ಡಿಸ್ಕಸ್ ತಲೆಗೆ ಬಿದ್ದು ಶಿಕ್ಷಕ ಗಂಭೀರ ಗಾಯ A physical education teacher…
ನೆಲ್ಲಿಬೀಡು ಟಿಪ್ಪರ್ – ಬೈಕ್ ಅಪಘಾತ: ಮಗಳ ಸಾವಿನ ಬಳಿಕ ಚಿಕಿತ್ಸೆ ಫಲಿಸದೆ ತಂದೆಯೂ ಮೃತ್ಯು A tragic tipper-bike…
ಬಾಲಕ ಓಡಿಸಿದ ಬೊಲೆರೊ, ದಂಡ ಕಟ್ಟಿದ ತಂದೆ! ₹26,500 ಫೈನ್ A Shivamogga court fined a father ₹26,500…
ಸಾಗರ ಗ್ರಾಮಾಂತರ ಠಾಣೆಯ ನೂತನ ಪಿಎಸ್ಐ ಆಗಿ ಶಂಕರ್ ಗೌಡ ಪಾಟೀಲ್ ನೇಮಕ PSI Shankar Gowda Patil has…