ಕ್ಷುಲ್ಲಕ ವಿಚಾರಕ್ಕೆ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ – ಇಬ್ಬರ ಬಂಧನ | ಅಷ್ಟಕ್ಕೂ ಹುಂಚ ಕಲ್ಲುಕ್ವಾರೆಯಲ್ಲಿ ನಡೆದಿದ್ದೇನು..!!?
ರಿಪ್ಪನ್ಪೇಟೆ : ಇಲ್ಲಿನ ಸಮೀಪದ ಹುಂಚ ಗ್ರಾಪಂ ವ್ಯಾಪ್ತಿ ಕಲ್ಲು ಕ್ವಾರೆಯೊಂದರಲ್ಲಿ ಕ್ಷುಲ್ಲಕ ವಿಚಾರಕ್ಕೆ ವ್ಯಕ್ತಿಯೊಬ್ಬನ ಮಾರಣಾಂತಿಕ ಹಲ್ಲೆ ನಡೆದಿದ್ದು , ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.
ನಡೆದಿದ್ದೇನು..!!?
ಹುಂಚ ವ್ಯಾಪ್ತಿಯ ಹೊಂಡಲಗದ್ದೆ ಕಲ್ಲು ಕ್ರಷರ್ ನಲ್ಲಿ ದಿನಾಂಕ 08-03-2025 ರಂದು ಸಂಜೆ ಸಮಯದಲ್ಲಿ ಕ್ರಷರ್ ಗೆ ಬೈಕ್ ನಲ್ಲಿ ಬಂದ ನಾಲ್ಕೈದು ಜನ ಕ್ಷುಲ್ಲಕ ವಿಚಾರಕ್ಕೆ ಕ್ರಷರ್ ನ ಕಾರ್ಮಿಕ ಪ್ರತೀಷ್ ಕುಮಾರ್ ಎಂಬಾತನ ಮೇಲೆ ರಾಡು ಹಾಗೂ ದೊಣ್ಣೆಗಳಿಂದ ಹಲ್ಲೆ ಮಾಡಿದ್ದಾರೆ ಈ ಸಂಧರ್ಭದಲ್ಲಿ ಯಾರೋ ಕಿಡಿಗೇಡಿಗಳು ಕಟ್ಟಡದ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದಾರೆ ,ಮತ್ತೊಬ್ಬ ಕಬ್ಬಿಣದ ರಾಡ್ ಹಿಡಿದುಕೊಂಡು ಪ್ರತೀಷ್ ಕುಮಾರ್ ನನ್ನು ಕೊಲೆ ಮಾಡುವ ಉದ್ದೇಶದಿಂದ ತಲೆ ಗೆ ಹೊಡೆಯಲು ಯತ್ನಿಸಿದ್ದಾನೆ ಈ ಸಂಧರ್ಭದಲ್ಲಿ ಅವರು ತಪ್ಪಿಸಿಕೊಂಡಿದ್ದಾರೆ.
ನಂತರದಲ್ಲಿ ಅಲ್ಲಿದ್ದ ಕಾರ್ಮಿಕರು ಬಂದು ಗಲಾಟೆ ತಪ್ಪಿಸಿದ್ದಾರೆ ಇದೇ ಸಂಧರ್ಭದಲ್ಲಿ ಕಿಡಿಗೇಡಿಗಳು ಈ ಬಾರಿ ತಪ್ಪಿಸಿಕೊಂಡಿದ್ದೀಯಾ ಮುಂದಿನ ಬಾರಿ ನಿನ್ನನ್ನು ಮುಗಿಸಿಬಿಡುತ್ತೇವೆ ಎಂದು ಬೆದರಿಕೆ ಹಾಕಿ ಅವಾಚ್ಯ ಪದಗಳಿಂದ ನಿಂದಿಸಿದ್ದಾರೆ.
ಈ ಬಗ್ಗೆ ರಿಪ್ಪನ್ಪೇಟೆ ಪೊಲೀಸ್ ಠಾಣೆಗೆ ಗಾಯಾಳು ಪ್ರತೀಷ್ ಕುಮಾರ್ ದೂರು ಸಲ್ಲಿಸಿದ್ದಾರೆ.ಪ್ರಕರಣ ದಾಖಲಾಗುತಿದ್ದಂತೆ ಕಾರ್ಯಪ್ರವೃತ್ತರಾದ ಪಿಎಸ್ಐ ಪ್ರವೀಣ್ ಎಸ್ ಪಿ ಮತ್ತು ಸಿಬ್ಬಂದಿಗಳ ತಂಡ ಇಬ್ಬರನ್ನು ಬಂಧಿಸಿದ್ದಾರೆ.ಇನ್ನುಳಿದ ಮೂವರು ಆರೋಪಿಗಳು ತಲೆಮರೆಸಿಕೊಂಡಿದ್ದು ಅವರ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
ನಾಗರ ಪಂಚಮಿ ವಿಶೇಷ : ಆಗಸ್ಟ್ 17ರಂದು ನಾಗರಹಳ್ಳಿ ಶ್ರೀ ನಾಗೇಂದ್ರ ಸ್ವಾಮಿ ಜಾತ್ರೆ — ಭಕ್ತರಿಗೆ ಇಲ್ಲಿದೆ ಮಾಹಿತಿ…
ಆಗಸ್ಟ್ 11ರಂದು ಕೆಂಚನಾಲ ಮಾರಿಕಾಂಬಾ ದೇವಿಯ ಜಾತ್ರೆ: ಭಕ್ತರಿಗೆ ಇಲ್ಲಿದೆ ಮಹತ್ವದ ಮಾಹಿತಿ Ripponpete Kenchanala Sri Marikamba Devi…
ಅಂಬ್ಲಿಗೋಳ ಜಲಾಶಯ ಭರ್ತಿ: ಶಾಸಕ ಬಿ.ವೈ. ವಿಜಯೇಂದ್ರ, ಸಂಸದ ಬಿ.ವೈ. ರಾಘವೇಂದ್ರರಿಂದ ಬಾಗಿನ ಅರ್ಪಣೆ Shikaripura MLA B.Y. Vijayendra…
ಅರಸಾಳು ರೈಲ್ವೆ ನಿಲ್ದಾಣಕ್ಕೆ DRM ಭೇಟಿ: ಜ್ವಲಂತ ಸಮಸ್ಯೆಗಳು ಗಮನಕ್ಕೆ, ಪರಿಹಾರದ ಭರವಸೆ Mysuru DRM Mudit Mittal inspected…
ರಿಪ್ಪನ್ಪೇಟೆ–ಆಯನೂರು ರಸ್ತೆ ಬಂದ್; 9 MS ಬಳಿ ಬೃಹತ್ ಮರ ಉರುಳಿ ಟ್ರಾಫಿಕ್ ಜಾಮ್ , ಪರ್ಯಾಯ ಮಾರ್ಗ ಮಾಹಿತಿ…
ರಮ್-ವಿಸ್ಕಿ ಪ್ರಿಯರೇ ಗಮನಿಸಿ: ಕೃತಕ ಫ್ಲೇವರ್ ಬಳಕೆ ಆರೋಪ, FSSAI ಕಠಿಣ ಕ್ರಮ - ಯಾವೆಲ್ಲಾ ಬ್ರ್ಯಾಂಡ್ ಮೇಲೆ ಕ್ರಮ!!??…