ರೈತರ ಅಡಿಕೆ ಗೋಡೌನ್ ಮೇಲೆ ಜಿಎಸ್ ಟಿ ಅಧಿಕಾರಿಗಳ ದಾಳಿ
ಹೊಳೆಹೊನ್ನೂರು ಸಮೀಪದ ಅರಹತೊಳಲು- ಕೈಮರದಲ್ಲಿ ಅಡಿಕೆ ಗೋಡೌನ್ ಮೇಲೆ ಜಿಎಸ್ಟಿ ಅಧಿಕಾರಿಗಳು ದಾಳಿ ನಡೆಸಿ ಸುಮಾರು 23 ಕ್ವಿಂಟಾಲ್ ಅಡಕೆ ಮುಟ್ಟುಗೋಲು ಹಾಕಿಕೊಂಡು ತೆರಿಗೆ ಕಟ್ಟುವಂತೆ ರೈತರಿಗೆ ನೋಟೀಸ್ ನೀಡಿದ್ದಾರೆ.
ಚಂದ್ರಪ್ಪ ಎಂಬುವವರಿಗೆ ಸೇರಿದ ಗೋಡೌನ್ನಲ್ಲಿ ಸುಮಾರು 65 ಕ್ವಿಂಟಾಲ್ ಅಡಿಕೆ ದಾಸ್ತಾನು ಮಾಡಲಾಗಿದ್ದು, ಎಮ್ಮೆಹಟ್ಟಿ ಗ್ರಾಮದ ಕೋಟೇಶ್ ಎಂಬುವರಿಗೆ ಸೇರಿದ 23 ಕ್ವಿಂಟಾಲ್ ಅಡಿಕೆಯನ್ನು ಸೋಮವಾರ ಸಂಜೆ ವೇಳೆಯಲ್ಲಿ ಮಾರಾಟ ಮಾಡಲು ಕ್ಯಾಂಟರ್ನಲ್ಲಿ ತುಂಬಿಸಲಾಗಿತ್ತು.
ಆ ಸಮಯಕ್ಕೆ ಖಚಿತ ಮಾಹಿತಿ ಮೇರೆಗೆ ಬಂದ ಅಧಿಕಾರಿಗಳು ರೈತರ ಗೋಡೌನ್ ಹಾಗೂ ಕ್ಯಾಂಟರ್ ಅನ್ನು ತಡೆಹಿಡಿದು ಮುಟ್ಟುಗೋಲು ಹಾಕಿಕೊಂಡು ಹೋಗಿದ್ದಾರೆ.
ಇದರಿಂದ ರೊಚ್ಚಿಗೆದ್ದ ಕೆಲವು ರೈತರು, ರೈತರು ಬೆಳೆದ ಬೆಳೆಗೆ ಇದುವರೆಗೂ ಯಾವುದೇ ಸರ್ಕಾರ ತೆರಿಗೆ ಹಾಕಿಲ್ಲ. ರೈತರು ಸಾಲಸೋಲ ಮಾಡಿ ಬೆಳೆದ ಬೆಳೆಗಳಲ್ಲಿ ಜೀವನ ನಡೆಸುವುದೇ ಕಷ್ಟವಾಗಿದೆ. ರೈತರು ಸಾಲ ತೀರಿಸಲಾಗದೆ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಈ ರೀತಿ ರೈತರು ಬೆಳೆದ ಬೆಳೆಗೆ ಅಧಿ ಕಾರಿಗಳು ಏಕಾಏಕಿ ಬಂದು ತೆರಿಗೆ ವಿಧಿಸುತ್ತಿದ್ದಾರೆ. ಇಲ್ಲಿ ಯಾರು ಕೂಡ ವ್ಯಾಪಾರದಾರರಲ್ಲ. ರೈತರು ಬೆಳೆದ ಬೆಳೆಗೆ ಮನೆಯಲ್ಲಿ ಸ್ಥಳಾವಕಾಶವಿಲ್ಲದೆ ಇರುವುದರಿಂದ ಬಾಡಿಗೆ ಗೋಡೌನ್ನಲ್ಲಿ ಅಡಿಕೆ ದಾಸ್ತಾನು ಇಡಲಾಗಿದೆಯೇ ಹೊರತು ಸರ್ಕಾರದ ಕಣ್ಣುತಪ್ಪಿಸಿ ವ್ಯಾಪಾರ ಮಾಡುವ ಯಾವುದೇ ಉದ್ದೇಶವಿಲ್ಲ. ಇದೇ ರೀತಿ ದಾಳಿ ಮುಂದುವರಿದರೆ ರೈತರು ಒಗ್ಗಟ್ಟಾಗಿ ಸರ್ಕಾರದ ವಿರುದ್ಧ ಹೋರಾಟ ನಡೆಸುವುದು ಅನಿವಾರ್ಯ ಎಂದು ಎಚ್ಚರಿಸಿದರು.
ನೀರಿನಲ್ಲಿ ಅಡಗಿ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಲು ಯತ್ನ ; ಸಿನಿಮೀಯ ರೀತಿಯಲ್ಲಿ ರೌಡಿಶೀಟರ್ನನ್ನು ಬಂಧಿಸಿದ ಪೊಲೀಸರು Bhadravathi police dramatically…
ಅಜಾಗರೂಕ ಚಾಲನೆಯಿಂದ ಕೆರೆಗೆ ನುಗ್ಗಿದ ಲಾರಿ! ತಪ್ಪಿದ ಭಾರಿ ದುರಂತ A container lorry allegedly driven recklessly under…
ರಿಪ್ಪನ್ಪೇಟೆ ಶಾಲಾ ಮಕ್ಕಳ ಕ್ರೀಡಾಕೂಟದಲ್ಲಿ ಅನಾಹುತ; ಡಿಸ್ಕಸ್ ತಲೆಗೆ ಬಿದ್ದು ಶಿಕ್ಷಕ ಗಂಭೀರ ಗಾಯ A physical education teacher…
ನೆಲ್ಲಿಬೀಡು ಟಿಪ್ಪರ್ – ಬೈಕ್ ಅಪಘಾತ: ಮಗಳ ಸಾವಿನ ಬಳಿಕ ಚಿಕಿತ್ಸೆ ಫಲಿಸದೆ ತಂದೆಯೂ ಮೃತ್ಯು A tragic tipper-bike…
ಬಾಲಕ ಓಡಿಸಿದ ಬೊಲೆರೊ, ದಂಡ ಕಟ್ಟಿದ ತಂದೆ! ₹26,500 ಫೈನ್ A Shivamogga court fined a father ₹26,500…
ಸಾಗರ ಗ್ರಾಮಾಂತರ ಠಾಣೆಯ ನೂತನ ಪಿಎಸ್ಐ ಆಗಿ ಶಂಕರ್ ಗೌಡ ಪಾಟೀಲ್ ನೇಮಕ PSI Shankar Gowda Patil has…