ಬಿಜೆಪಿಯವರಿಂದ  ಹಲಾಲ್‌ಕೋರ್ ಬುದ್ದಿ ಪ್ರದರ್ಶನ : ಶಾಸಕ ಬೇಳೂರು ಗೋಪಾಲಕೃಷ್ಣ

ಬಿಜೆಪಿಯವರಿಂದ  ಹಲಾಲ್‌ಕೋರ್ ಬುದ್ದಿ ಪ್ರದರ್ಶನ : ಶಾಸಕ ಬೇಳೂರು

ಸಾಗರ : ಕೆಜೆಪಿ ಕಟ್ಟಿದಾಗ ಯಡಿಯೂರಪ್ಪ ಅಲ್ಪಸಂಖ್ಯಾತರಿಗೆ ಹೆಚ್ಚು ಅನುದಾನ ಕೊಡುತ್ತೇನೆ ಎಂದು ಘೋಷಣೆ ಮಾಡಿರಲಿಲ್ಲವೇ. ಇದೀಗ ಬಜೆಟ್‌ನ ಶೇ. 1ರಷ್ಟನ್ನು ಅಲ್ಪಸಂಖ್ಯಾತರ ಶ್ರೇಯೋಭಿವೃದ್ದಿಗೆ ಮುಖ್ಯಮಂತ್ರಿಗಳು ಘೋಷಣೆ ಮಾಡಿದರೆ ಬಿಜೆಪಿಯವರು ಹಲಾಲ್ ಬಜೆಟ್ ಎಂದು ಟೀಕಿಸುವ ಮೂಲಕ ತಮ್ಮ ಹಲಾಲ್‌ಕೋರ್ ಬುದ್ದಿ ಪ್ರದರ್ಶನ ಮಾಡುತ್ತಿದ್ದಾರೆ ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಾಲ್ಲೂಕಿನ ಬೆಳಂದೂರು-ಚನ್ನಾಪುರ ಗ್ರಾಮದ ಸಂಪರ್ಕ ರಸ್ತೆ ಕಾಮಗಾರಿಗೆ ಶನಿವಾರ ರಾತ್ರಿ ಶಂಕುಸ್ಥಾಪನೆ ನೆರವೇರಿಸಿ ಪತ್ರಕರ್ತರ ಜೊತೆ ಮಾತನಾಡಿದ ಅವರು, ಕೈನಲ್ಲಿ ಕತ್ತಿ ಹಿಡಿದು ಟಿಪ್ಪು ಸುಲ್ತಾನರ ಟೋಪಿ ಧರಿಸಿ ಮನೆಮನೆಗೆ ಹೋಗಿ ಮುಸ್ಲೀಮರು ನಮ್ಮ ಭಾಯಿಭಾಯಿ ಎಂದವರು ಈಗ ಅಲ್ಪಸಂಖ್ಯಾತರಿಗೆ ಬಜೆಟ್‌ನಲ್ಲಿ ಸಣ್ಣ ಪ್ರಮಾಣದ ಘೋಷಣೆ ಮಾಡಿದರೆ ಹಲಾಲ್ ಬಜೆಟ್ ಎಂದು ಟೀಕೆ ಮಾಡುವುದು ಎಷ್ಟು ಸರಿ. ನಮ್ಮ ಬಜೆಟ್ ನಾವು ಕೊಟ್ಟಿದ್ದೇವೆ. ನಿಮ್ಮ ಕೈನಲ್ಲಿ ಕೊಡಲು ಆಗದೆ ಇದ್ದರೆ ಸುಮ್ಮನೆ ಕುಳಿತುಕೊಳ್ಳಿ ಎಂದರು.

ರಾಜ್ಯದಲ್ಲಿ ಶೇ. 23ರಷ್ಟು ಅಲ್ಪಸಂಖ್ಯಾತರಿದ್ದಾರೆ. ಈ ಬಾರಿ 4.9500 ಕೋಟಿ ರೂ. ಬಜೆಟ್ ಮಂಡಿಸಿದ್ದು, ಈ ಪೈಕಿ ಶೇ. 1ರಷ್ಟನ್ನು ಅಲ್ಪಸಂಖ್ಯಾತರ ಏಳಿಗೆಗೆ ಘೋಷಣೆ ಮಾಡಲಾಗಿದೆ. ಶೇ. 99 ಇತರೆ ಸಮುದಾಯದವರಿಗೆ ನೀಡಿರುವುದು ಬಿಜೆಪಿಯವರಿಗೆ ಕಾಣಿಸುತ್ತಿಲ್ಲವೆ ಎಂದು ಪ್ರಶ್ನಿಸಿದ ಬೇಳೂರು, ಕಾಂಗ್ರೇಸ್ ಪಕ್ಷ ಎಲ್ಲ ಜಾತಿಧರ್ಮವನ್ನು ಸಮಾನವಾಗಿ ನೋಡುತ್ತದೆ. ಈ ಬಾರಿ ಅತ್ಯಂತ ಉತ್ತಮವಾದ ಬಜೆಟ್ ಮುಖ್ಯಮಂತ್ರಿಗಳು ಮಂಡಿಸಿದ್ದಾರೆ.

ಶಿಕ್ಷಣ, ವಿದ್ಯಾರ್ಥಿನಿಲಯ, ಆರೋಗ್ಯದ ಕ್ಷೇತ್ರಕ್ಕೆ ಹೆಚ್ಚು ಗಮನ ಹರಿಸಲಾಗಿದೆ. ಎಲೆಚುಕ್ಕಿ ರೋಗ ಸಂಶೋಧನೆಗೆ 64 ಕೋಟಿ ರೂ. ಬಜೆಟ್‌ನಲ್ಲಿ ಘೋಷಣೆ ಮಾಡಲಾಗಿದೆ. ಮಳೆಮಾಪನಾ ಕೇಂದ್ರಕ್ಕೆ ಒತ್ತು ನೀಡಲಾಗಿದೆ. ಕೃಷಿ ಬಲವರ್ಧನೆಗೆ ಬಜೆಟ್‌ನಲ್ಲಿ ವಿಶೇಷ ಒತ್ತು ನೀಡಲಾಗಿದೆ ಎಂದು ಹೇಳಿದರು.

ಸಾಗರ ಹೊಸನಗರ ವ್ಯಾಪ್ತಿಯಲ್ಲಿ ಸಂಪರ್ಕ ರಸ್ತೆ ಅಭಿವೃದ್ದಿಗೆ ವಿಶೇಷ ಒತ್ತು ನೀಡಲಾಗಿದೆ.
ಎಲ್ಲಾ ಗ್ರಾಮ ಪಂಚಾಯ್ತಿ ವ್ಯಾಪ್ತಿಗೂ ಕನಿಷ್ಟ ಎರಡು ಕೋಟಿ ರೂ. ಸಂಪರ್ಕ ರಸ್ತೆಗೆ ನೀಡಲಾಗಿದೆ. ರಸ್ತೆ ಅಗಲೀಕರಣಕ್ಕೆ ಒತ್ತು ನೀಡಿದ್ದು, ಯಡೇಹಳ್ಳಿ ವೃತ್ತದಿಂದ ರಿಪ್ಪನಪೇಟೆ ವೃತ್ತದವರೆಗೆ ರಸ್ತೆ ಅಗಲೀಕರಣಕ್ಕೆ 20 ಕೋಟಿ ರೂ., ರಿಪ್ಪನಪೇಟೆ ವೃತ್ತ ಅಗಲೀಕರಣಕ್ಕೆ 5.50 ಕೋಟಿ ರೂ., ಸಾಗರ ನಗರದ ಎಲ್ಲ ಪ್ರಮುಖ ವೃತ್ತಗಳ ಅಭಿವೃದ್ದಿಗೆ ವಿಶೇಷ ಒತ್ತು ನೀಡಿದೆ ಎಂದು ತಿಳಿಸಿದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Share
Published by
ರಫ಼ಿ ರಿಪ್ಪನ್ ಪೇಟೆ

Recent Posts

ನಾಗರ ಪಂಚಮಿ ವಿಶೇಷ : ಆಗಸ್ಟ್ 17ರಂದು ನಾಗರಹಳ್ಳಿ ಶ್ರೀ ನಾಗೇಂದ್ರ ಸ್ವಾಮಿ ಜಾತ್ರೆ — ಭಕ್ತರಿಗೆ ಇಲ್ಲಿದೆ ಮಾಹಿತಿ

ನಾಗರ ಪಂಚಮಿ ವಿಶೇಷ : ಆಗಸ್ಟ್ 17ರಂದು ನಾಗರಹಳ್ಳಿ ಶ್ರೀ ನಾಗೇಂದ್ರ ಸ್ವಾಮಿ ಜಾತ್ರೆ — ಭಕ್ತರಿಗೆ ಇಲ್ಲಿದೆ ಮಾಹಿತಿ…

21 hours ago

ಆಗಸ್ಟ್ 11ರಂದು ಕೆಂಚನಾಲ ಮಾರಿಕಾಂಬಾ ದೇವಿಯ ಜಾತ್ರೆ: ಭಕ್ತರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಆಗಸ್ಟ್ 11ರಂದು ಕೆಂಚನಾಲ ಮಾರಿಕಾಂಬಾ ದೇವಿಯ ಜಾತ್ರೆ: ಭಕ್ತರಿಗೆ ಇಲ್ಲಿದೆ ಮಹತ್ವದ ಮಾಹಿತಿ Ripponpete Kenchanala Sri Marikamba Devi…

22 hours ago

ಅಂಬ್ಲಿಗೋಳ ಜಲಾಶಯ ಭರ್ತಿ: ಶಾಸಕ ಬಿ.ವೈ. ವಿಜಯೇಂದ್ರ, ಸಂಸದ ಬಿ.ವೈ. ರಾಘವೇಂದ್ರರಿಂದ ಬಾಗಿನ ಅರ್ಪಣೆ

ಅಂಬ್ಲಿಗೋಳ ಜಲಾಶಯ ಭರ್ತಿ: ಶಾಸಕ ಬಿ.ವೈ. ವಿಜಯೇಂದ್ರ, ಸಂಸದ ಬಿ.ವೈ. ರಾಘವೇಂದ್ರರಿಂದ ಬಾಗಿನ ಅರ್ಪಣೆ Shikaripura MLA B.Y. Vijayendra…

22 hours ago

ಅರಸಾಳು ರೈಲ್ವೆ ನಿಲ್ದಾಣಕ್ಕೆ DRM ಭೇಟಿ: ಜ್ವಲಂತ ಸಮಸ್ಯೆಗಳು ಗಮನಕ್ಕೆ, ಪರಿಹಾರದ ಭರವಸೆ

ಅರಸಾಳು ರೈಲ್ವೆ ನಿಲ್ದಾಣಕ್ಕೆ DRM ಭೇಟಿ: ಜ್ವಲಂತ ಸಮಸ್ಯೆಗಳು ಗಮನಕ್ಕೆ, ಪರಿಹಾರದ ಭರವಸೆ Mysuru DRM Mudit Mittal inspected…

22 hours ago

ರಿಪ್ಪನ್‌ಪೇಟೆ–ಆಯನೂರು ರಸ್ತೆ ಬಂದ್; 9 MS ಬಳಿ ಬೃಹತ್ ಮರ ಉರುಳಿ ಟ್ರಾಫಿಕ್ ಜಾಮ್ , ಪರ್ಯಾಯ ಮಾರ್ಗ ಮಾಹಿತಿ ಇಲ್ಲಿದೆ.

ರಿಪ್ಪನ್‌ಪೇಟೆ–ಆಯನೂರು ರಸ್ತೆ ಬಂದ್; 9 MS ಬಳಿ ಬೃಹತ್ ಮರ ಉರುಳಿ ಟ್ರಾಫಿಕ್ ಜಾಮ್ , ಪರ್ಯಾಯ ಮಾರ್ಗ ಮಾಹಿತಿ…

1 day ago

ರಮ್-ವಿಸ್ಕಿ ಪ್ರಿಯರೇ ಗಮನಿಸಿ: ಕೃತಕ ಫ್ಲೇವರ್‌ ಬಳಕೆ ಆರೋಪ, FSSAI ಕಠಿಣ ಕ್ರಮ – ಯಾವೆಲ್ಲಾ ಬ್ರ್ಯಾಂಡ್ ಮೇಲೆ ಕ್ರಮ!!?? ಈ ಸುದ್ದಿ ನೋಡಿ

ರಮ್-ವಿಸ್ಕಿ ಪ್ರಿಯರೇ ಗಮನಿಸಿ: ಕೃತಕ ಫ್ಲೇವರ್‌ ಬಳಕೆ ಆರೋಪ, FSSAI ಕಠಿಣ ಕ್ರಮ - ಯಾವೆಲ್ಲಾ ಬ್ರ್ಯಾಂಡ್ ಮೇಲೆ ಕ್ರಮ!!??…

1 day ago