ಅತಿಶಯ ಶ್ರೀಕ್ಷೇತ್ರ ಹೊಂಬುಜ ಮಹಾರಥೋತ್ಸವ | ಭಕ್ತಿ ಸಿಂಚನ, ಸ್ವರ್ಣ ಮಂಟಪ ಸಮರ್ಪಣೆ
ರಿಪ್ಪನ್ಪೇಟೆ ; ಅತಿಶಯ ಶ್ರೀಕ್ಷೇತ್ರ ಹೊಂಬುಜ ಶ್ರೀ 1008 ಪಾರ್ಶ್ವನಾಥ ಸ್ವಾಮಿ, ವಿಶ್ವಮಾತೆ ಯಕ್ಷಿ ಶ್ರೀ ಪದ್ಮಾವತಿ ದೇವಿ ಸನ್ನಿಧಿಯಲ್ಲಿ ಪೂರ್ವ ಪರಂಪರೆಯ ಆಗಮೋಕ್ತ ವಿಧಿ-ವಿಧಾನಗಳೊಂದಿಗೆ ಹೊಂಬುಜ ಶ್ರೀ ಜೈನ ಮಠ, ಸಂಸ್ಥಾನದ ಪೀಠಾಧೀಶರಾದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಗಳವರ ದಿವ್ಯ ಸಾನಿಧ್ಯ, ನೇತೃತ್ವ ಹಾಗೂ ಮಾರ್ಗದರ್ಶನದಲ್ಲಿ ಇಂದು ಮಧ್ಯಾಹ್ನ 12.53 ಗಂಟೆಗೆ (ಮೂಲಾ ನಕ್ಷತ್ರ) ದೇವರ ಶ್ರೀ ರಥಾರೋಹಣ ನಡೆಯಿತು.
ಗಣಾಧಿಪತಿ ಗಣಧರಾಚಾರ್ಯ ಶ್ರೀ 108 ಕುಂಥುಸಾಗರ ಮಹಾರಾಜರು, ಸಸಂಘ, ಆರ್ಯಿಕೆಯರು, ಕಂಬದಹಳ್ಳಿ ಶ್ರೀಮಠದ ಪೀಠಾಧೀಶರಾದ ಪರಮಪೂಜ್ಯ ಸ್ವಸ್ತಿಶ್ರೀ ಭಾನುಕೀರ್ತಿ ಭಟ್ಟಾರಕ ಮಹಾಸ್ವಾಮಿಗಳವರು ಉಪಸ್ಥಿತರಿದ್ದರು.
ಭಕ್ತವೃಂದದವರು ಕರ್ನಾಟಕ, ತಮಿಳುನಾಡು ಆಂದ್ರಪ್ರದೇಶ, ಮಹಾರಾಷ್ಟ್ರ, ಉತ್ತರ ಪ್ರದೇಶ, ಅಸ್ಸಾಂ, ಗುಜರಾತ್, ದೆಹಲಿ, ಮಧ್ಯಪ್ರದೇಶಗಳಿಂದ ಆಗಮಿಸಿ ಶ್ರೀ ಪದ್ಮಾವತಿ ದೇವಿ ರಥಯಾತ್ರೆಯ ಶ್ರೀ ವಿಹಾರದಲ್ಲಿ ಪಾಲ್ಗೊಂಡರು.
ವಾದ್ಯಗೋಷ್ಠಿ, ಸಾಂಪ್ರದಾಯಿಕ ಚಂಡೆವಾದನ, ಶಂಖ, ಸ್ಯಾಕ್ಸೋಪೋನ್ ಜೈನ ಧರ್ಮೀಯ ವಾರ್ಷಿಕ ರಥೋತ್ಸವ ಸಂಭ್ರಮಕ್ಕೆ ಪೂರಕವಾಗಿದ್ದವು. ಭಕ್ತರಿಗೆ ಉಪಹಾರ, ಭೋಜನ, ವಾಸ್ತವ್ಯ ವ್ಯವಸ್ಥೆ ಶಿಸ್ತುಬದ್ಧವಾಗಿತ್ತು.
ಸ್ವರ್ಣ ಮಂಟಪ ಸಮರ್ಪಣೆ ;
ಲೋಕಮಾತೆ ಶ್ರೀ ಪದ್ಮಾವತಿ ದೇವಿ ಗರ್ಭಗುಡಿಯಲ್ಲಿ ವಿನೂತನ ಶೈಲಿಯ ಕಲಾನೈಪುಣ್ಯತೆಯ ‘ಸ್ವರ್ಣ ಮಂಟಪ” ವನ್ನು ನಿರ್ಮಿಸಿ, ಶ್ರೀ ಪದ್ಮಾವತಿ ದೇವಿಯವರಿಗೆ ಪೂಜ್ಯ ಶ್ರೀಗಳವರು ಸಮರ್ಪಿಸಿ, ಶಾಸ್ತ್ರೋಕ್ತವಾಗಿ ಪೂಜೆ ಸಲ್ಲಿಸಿದರು.
ವಿಶ್ವಶಾಂತಿ, ಸಮಾಜದಲ್ಲಿ ಅನ್ಯೋನ್ಯತೆ ಇನ್ನಷ್ಟು ಬೆಳೆಯಲೆಂದು ಶ್ರೀಗಳವರು ತಿಳಿಸಿದರು. ಪರಿಸರ, ಪ್ರಕೃತಿ ಸಮೃದ್ಧವಾಗಿ, ಪ್ರಾಣಿ ಪಕ್ಷಿಗಳಿಗೂ ಆಹಾರ-ಆಶ್ರಯ-ನೀರು ನೀಡುವಂತಾಗಲಿ ಎಂದು ಭಕ್ತರಿಗೂ ಪರಿಸರ ಜಾಗೃತಿ ಜೈನ ಧರ್ಮದ ಮಹತ್ವದ ಅಂಗ ಎಂದು ತಿಳಿಯಬಯಸಿದರು.
ಶ್ರೀ ಕ್ಷೇತ್ರಪಾಲ ಜಟ್ಟಿಂಗರಾಯ ಸ್ವಾಮಿ ಸನ್ನಿಧಿಯಲ್ಲಿ ಶ್ರೀ ದೇವರಿಗೆ ಚಿನ್ನದ ಕಿರೀಟವನ್ನು ಅರ್ಪಿಸಿ, ವಿಶೇಷ ಪೂಜೆ ಸಲ್ಲಿಸಿದರು.
ಸಾಗರದ ಇಂದಿರಗಾಂಧಿ ಕಾಲೇಜಿನ ಸೀಮಾ ಕೌಸರ್ ಗೆ ಪಿಎಚ್.ಡಿ ಪದವಿ Seema Kausar, Head and Associate Professor of…
ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಪಿಯು ಕಾಲೇಜು ಪ್ರಾಂಶುಪಾಲರ ವಿರುದ್ಧ ಪೋಕ್ಸೋ, ಅಟ್ರಾಸಿಟಿ ಪ್ರಕರಣ Shivamogga police have registered…
ಕಾರ್ಮಿಕರ ಕಾರ್ಡ್ ಹೆಸರಿನಲ್ಲಿ ವಂಚನೆ ಆರೋಪ: ರಿಪ್ಪನ್ಪೇಟೆಯಲ್ಲಿ ಕಾರ್ಮಿಕರ ಆಕ್ರೋಶ Workers in Ripponpete allege money was collected…
ಹುಂಚದ ಶವಾಗಾರಕ್ಕೆ 6 ವರ್ಷವಾದರೂ ಉದ್ಘಾಟನೆ ಭಾಗ್ಯ ಇಲ್ಲ – ಮುಹೂರ್ತ ಸಿಕ್ಕಿಲ್ಲವೋ, ಅಥವಾ ಸತ್ತವರೇ ಎದ್ದು ಬಂದು ರಿಬ್ಬನ್…
ಈದ್ ಮಿಲಾದ್ ಹಬ್ಬ: ಸೌಹಾರ್ದತೆ ಕಾಪಾಡಲು ಪಿಎಸ್ಐ ರಾಜುರೆಡ್ಡಿ ಕರೆ Ripponpete PSI Rajureddy appeals for peaceful and…
13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೈಕ್ ಕಳ್ಳ ಕೊನೆಗೂ ಪೊಲೀಸರ ಬಲೆಗೆ Bhadravati New Town Police have arrested a…