ಶ್ರೀಕ್ಷೇತ್ರ ಹೊಂಬುಜ ಬೆಳ್ಳಿ-ಪುಷ್ಪ ರಥ ಶ್ರೀವಿಹಾರ

ಶ್ರೀಕ್ಷೇತ್ರ ಹೊಂಬುಜ ಬೆಳ್ಳಿ-ಪುಷ್ಪ ರಥ ಶ್ರೀವಿಹಾರ

ಹೊಂಬುಜ ಅತಿಶಯ ಸಿದ್ಧಕ್ಷೇತ್ರ ವಿಶ್ವಮಾನ್ಯವಾಗಿದೆ” ; ಗಣಧರಾಚಾರ್ಯ ಶ್ರೀ ಕುಂಥುಸಾಗರ ಮುನಿಮಹಾರಾಜರು

ಅತಿಶಯ ಶ್ರೀಕ್ಷೇತ್ರ ಹೊಂಬುಜದ ಶ್ರೀ 1008 ಪಾರ್ಶ್ವನಾಥ ಸ್ವಾಮಿ ಅಧಿದಾಏವತೆ ಜಗನ್ಮಾತೆ ಯಕ್ಷಿ ಶ್ರೀ ಪದ್ಮಾವತಿ ದೇವಿ ವಾರ್ಷಿಕ ರಥೋತ್ಸವದ ಅಂಗವಾಗಿ ತೃತೀಯ ದಿನದಂದು ಕಲಾತ್ಮಕ ಬೆಳ್ಳಿ ರಥೋತ್ಸವವು ನಿತ್ಯವಿಧಿಗಳ ಬಳಿಕ ಶ್ರೀವಿಹಾರಕ್ಕೆ ಹೊರಟಿತು. ಜತೆಗೆ ಸಂಪ್ರದಾಯದಂತೆ ಸಾಲಾಂಕೃತ ಶೋಭಾಯಾತ್ರೆಯಲ್ಲಿ ಪುಷ್ಪ ರಥೋತ್ಸವವು ಊರ ಪರವೂರ ಭಕ್ತರ ಪಾಲ್ಗೊಳ್ಳುವಿಕೆಯಿಂದ ನಡೆಯಿತು.

ಹೊಂಬುಜ ಶ್ರೀ ಜೈನ ಮಠದ ಪೀಠಾಧೀಶರಾದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮಿಗಳವರ ದಿವ್ಯ ಸಾನಿಧ್ಯ, ನೇತೃತ್ವ ಹಾಗೂ ಮಾರ್ಗದರ್ಶನದಲ್ಲಿ ಪ್ರಾತಃಕಾಲ ನಿತ್ಯವಿಧಿ ಸಹಿತ ಜಲಾಗ್ನಿ ಹೋಮ, ಶಾಂತಿಚಕ್ರಾರಾಧನೆ, ಶ್ರೀ ಬಲಿ ನಡೆಯಿತು.

ಗಣಾಧಿಪತಿ ಗಣಧರಾಚಾರ್ಯ ಶ್ರೀ 108 ಕುಂಥುಸಾಗರ ಮಹಾರಾಜರ ಸಸಂಘದ ಮುನಿಶ್ರೀಯವರು, ಆರ್ಯಿಕೆಯರ ದಿವ್ಯ ಉಪಸ್ಥಿತಿಯಲ್ಲಿ ಜಿನಾಗಮೋಕ್ತ ವಿಧಿ-ವಿಧಾನಗಳು ಜರುಗಿದವು.

ಸರೋಜ್, ಸರಿತಾ ನವೀನ್ ಬಗಡಾ, ಸೇಲಂ, ಗೌಹಾಟಿಯ ರಾಜೇಂದ್ರ, ಸುಮನ್ ಛಾಬ್ರಾ, ಪ್ರತೀಕ್, ನಕುಲ್ ಜೈನ್ ಛಾಬ್ರಾ ಪೂಜಾ ಮತ್ತು ಭೋಜನ ಸೇವಾ ಕರ್ತೃಗಳಾಗಿ ಪಾಲ್ಗೊಂಡರು. ವಾದ್ಯ, ಅಷ್ಟಾವದಾನ, ಶ್ರೀಬಲಿ ವಿಧಾನಗಳಲ್ಲಿ ಭಕ್ತರು ಶ್ರೀ ಪಾರ್ಶ್ವನಾಥ ತೀರ್ಥಂಕರ್ ಕೀ ಜೈನ್, ಪದ್ಮಾವತಿ ಮಾತಾ ಕೀ ಜೈ ಎಂದು ಭಕ್ತಿಭಾವದಲ್ಲಿ ಜಯಕಾರ ಹಾಕಿದರು.

ಪುಷ್ಪರಥೋತ್ಸವದ ಸಂಜೆಯ ಉಪಹಾರದ ಸೇವಾಕರ್ತರಾಗಿ ಶಿವಮೊಗ್ಗದ ನಾಗರತ್ನಮ್ಮ ವಿ.ಪಿ. ಶಾಂತರಾಜ್, ಮೇಘ ಸಿದ್ಧಾರ್ಥ ಮತ್ತು ಮೊಮ್ಮಕ್ಕಳು ಪೂಜೆ ಮತ್ತು ರಥಯಾತ್ರೆಯಲ್ಲಿ ಉಪಸ್ಥಿತರಿದ್ದರು.

ಹೊಂಬುಜ ಅತಿಶಯ ಸಿದ್ಧಕ್ಷೇತ್ರ ವಿಶ್ವಮಾನ್ಯವಾಗಿದೆ” ; ಗಣಧರಾಚಾರ್ಯ ಶ್ರೀ ಕುಂಥುಸಾಗರ ಮುನಿಮಹಾರಾಜರು

ರಿಪ್ಪನ್ ಪೇಟೆ :  ಪ್ರಾಚೀನ ಜೈನ ಪರಂಪರೆ, ಪೂಜಾ ವಿಧಿ ವಿಧಾನ, ಭಕ್ತರ ಅಭೀಷ್ಠ ಈಡೇರಿಸುವ ಜಗನ್ಮಾತೆ ಯಕ್ಷಿ ಶ್ರೀ ಪದ್ಮಾವತಿ ದೇವಿಯವರ ಸಾನಿಧ್ಯ ಅಪೂರ್ವವಾದುದು ಎಂದು ಗಣಾಧಿಪತಿ ಗಣಧರಾಚಾರ್ಯ ಶ್ರೀ 108 ಕುಂಥುಸಾಗರ ಮಹಾರಾಜರವರು ಸಿದ್ಧಾಂತಕೀರ್ತಿ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ವಾರ್ಷಿಕ ರಥೋತ್ಸವ ನಿಮಿತ್ತ ಧಾರ್ಮಿಕ ಸಭೆಯಲ್ಲಿ ವಿವರಸುತ್ತಾ ತೀರ್ಥಂಕರರ, ಯಕ್ಷ ಯಕ್ಷಿಯರ, ಜಿನಶಾಸನ ದೇವತೆಗಳ ಕುರಿತು ಜೈನ ಧರ್ಮೀಯರು ಅರಿಯಬೇಕು ಎನ್ನುತ್ತಾ ಹೊಂಬುಜ ಅತಿಶಯ ಶ್ರೀಕ್ಷೇತ್ರ ವಿಶಿಷ್ಠ ಸಿದ್ಧಕ್ಷೇತ್ರವೂ, ವಿಶ್ವಮಾನ್ಯ ಆದುದೆಂದು ಪ್ರವಚನದಲ್ಲಿ ಹೇಳಿದರು.

ಪೂರ್ವ ಭಟ್ಟಾರಕರು ಕ್ಷೇತ್ರದ ಜೀರ್ಣೋದ್ಧಾರ ಕೈಗೊಂಡಿದ್ದನ್ನು ಸ್ಮರಿಸಿ, ಪ್ರಸಕ್ತ ಪೀಠಾಧೀಶರಾದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಗಳವರು ಅಸ್ಥೆ-ಶ್ರದ್ಧೆ ಅಭಿನಂದನಾರ್ಹವಾದುದೆಂದು ಹರಸಿದರು.

ಸಾಹಿತಿ, ವಾಗ್ಮಿ, ಸಂಶೋಧಕಿ ಪ್ರೊ. ಪದ್ಮಾಶೇಖರರವರಿಗೆ ಸಿದ್ಧಾಂತಕೀರ್ತಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ರೂ. 51 ಸಾವಿರ ನಗದು, ಪ್ರಶಸ್ತಿ ಪತ್ರ, ಶಾಲು, ಹಾರ ನೀಡಿ ಅಭಿನಂದಿಸಿ, ಗೌರವಿಸಲಾಯಿತು.

ಮುನಿಶ್ರೀಯವರ ಸಸಂಘ, ಆರ್ಯಿಕೆಯರು, ಕಂಬದಹಳ್ಳಿಯ ಪರಮಪೂಜ್ಯ ಸ್ವಸ್ತಿಶ್ರೀ ಭಾನುಕೀರ್ತಿ ಭಟ್ಟಾರಕ ಮಹಾಸ್ವಾಮಿಜಿಯವರು ಉಪಸ್ಥಿತರಿದ್ದರು.

ಪ್ರಶಸ್ತಿ ಸ್ವೀಕರಿಸಿದ ಪ್ರೊ. ಪದ್ಮಾಶೇಖರರವರು ಹೊಂಬುಜ ಸಂಸ್ಥಾನದ ಸಾಹಿತ್ಯ-ಸಾಂಸ್ಕೃತಿಕ ಹಿನ್ನಲೆ ಬಗ್ಗೆ ಅವಲೋಕಿಸಿ, ಯುವ ಪೀಳಿಗೆಯವರು ಕ್ಷೇತ್ರದ ಐತಿಹ್ಯ ತಿಳಿಯಲು ಅಧ್ಯಯನ-ಸಂಶೋಧನೆಯಲ್ಲಿ ತೊಡಗಿಸಿಕೊಳ್ಳಲು ತಿಳಿಸಿದರು.

ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಗಳವರು ಆದಿನಾಯಕ ಶ್ರೀ 1008 ಪಾರ್ಶ್ವನಾಥ ತೀರ್ಥಂಕರ ಮತ್ತು ಮಹಾಮಾತೆ ಯಕ್ಷಿ ಶ್ರೀ ಪದ್ಮಾವತಿ ದೇವಿಯ ನೆಲೆಯಾಗಿ ಹೊಂಬುಜ ಕ್ಷೇತ್ರವು 1400 ವರ್ಷಗಳ ಇತಿಹಾಸ ಹೊಂದಿದೆ. ಭಕ್ತರ ಇಷ್ಟಾರ್ಥ ಸಿದ್ಧಿಸಲು ಪದ್ಮಾವತಿ ದೇವಿ ಸದಾ ಹರಸಿ, ಸಂತೃಪ್ತ ಜೀವನ ನಿರ್ವಹಣೆ ಜ್ಯೋತಿಸ್ವರೂಪವಾಗಿ ಸಧರ್ಮಪಥ ತೋರುತ್ತಿರುವುದು ಶ್ರೀಕ್ಷೇತ್ರದ ಅನನ್ಯತೆ ಎಂದರು.

ಶ್ರೀಕ್ಷೇತ್ರದ ವಾರ್ಷಿಕ ರಥೋತ್ಸವ ಸಂದರ್ಭದಲ್ಲಿ ಸೇವಾಕರ್ತೃರಾದವರನ್ನು ಪೂಜ್ಯ ಸ್ವಾಮೀಜಿಯವರು ಶ್ರೀಮಠದ ವತಿಯಿಂದ ಗೌರವಿಸಿ, ಆಶೀರ್ವದಿಸಿದರು.

ಶಾಲಿನಿ ಮೋಹನ್ ಪ್ರಾರ್ಥಿಸಿದರು. ಸಿ.ಡಿ. ಅಶೋಕ ಕುಮಾರರ್ ಸ್ವಾಗತಿಸಿ, ಶಿರಹಟ್ಟಿ ಪ್ರೋ. ಶಾಂತಿಸಾಗರ್ ಪರಿಚಯ ವಾಚನ ಮಾಡಿದರು. ಪ್ರ‍್ರಾದ್ಯಾಪಕ ಹೆಚ್. ಸಂತೋಷ್ ಜೈನ್ ಕಾರ್ಯಕ್ರಮ ನಿರ್ವಹಿಸಿದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ನೀರಿನಲ್ಲಿ ಅಡಗಿ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಲು ಯತ್ನ ; ಸಿನಿಮೀಯ ರೀತಿಯಲ್ಲಿ ರೌಡಿಶೀಟರ್‌ನನ್ನು ಬಂಧಿಸಿದ ಪೊಲೀಸರು

ನೀರಿನಲ್ಲಿ ಅಡಗಿ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಲು ಯತ್ನ ; ಸಿನಿಮೀಯ ರೀತಿಯಲ್ಲಿ ರೌಡಿಶೀಟರ್‌ನನ್ನು ಬಂಧಿಸಿದ ಪೊಲೀಸರು Bhadravathi police dramatically…

10 hours ago

ಅಜಾಗರೂಕ ಚಾಲನೆಯಿಂದ ಕೆರೆಗೆ ನುಗ್ಗಿದ ಲಾರಿ! ತಪ್ಪಿದ ಭಾರಿ ದುರಂತ

ಅಜಾಗರೂಕ ಚಾಲನೆಯಿಂದ ಕೆರೆಗೆ ನುಗ್ಗಿದ ಲಾರಿ! ತಪ್ಪಿದ ಭಾರಿ ದುರಂತ A container lorry allegedly driven recklessly under…

10 hours ago

ರಿಪ್ಪನ್‌ಪೇಟೆ ಶಾಲಾ ಮಕ್ಕಳ ಕ್ರೀಡಾಕೂಟದಲ್ಲಿ ಅನಾಹುತ; ಡಿಸ್ಕಸ್ ತಲೆಗೆ ಬಿದ್ದು ಶಿಕ್ಷಕ ಗಂಭೀರ ಗಾಯ

ರಿಪ್ಪನ್‌ಪೇಟೆ ಶಾಲಾ ಮಕ್ಕಳ ಕ್ರೀಡಾಕೂಟದಲ್ಲಿ ಅನಾಹುತ; ಡಿಸ್ಕಸ್ ತಲೆಗೆ ಬಿದ್ದು ಶಿಕ್ಷಕ ಗಂಭೀರ ಗಾಯ A physical education teacher…

15 hours ago

ನೆಲ್ಲಿಬೀಡು ಟಿಪ್ಪರ್ – ಬೈಕ್ ಅಪಘಾತ: ಮಗಳ ಸಾವಿನ ಬಳಿಕ ಚಿಕಿತ್ಸೆ ಫಲಿಸದೆ ತಂದೆಯೂ ಮೃತ್ಯು

ನೆಲ್ಲಿಬೀಡು ಟಿಪ್ಪರ್ – ಬೈಕ್ ಅಪಘಾತ: ಮಗಳ ಸಾವಿನ ಬಳಿಕ ಚಿಕಿತ್ಸೆ ಫಲಿಸದೆ ತಂದೆಯೂ ಮೃತ್ಯು A tragic tipper-bike…

18 hours ago

ಬಾಲಕ ಓಡಿಸಿದ ಬೊಲೆರೊ, ದಂಡ ಕಟ್ಟಿದ ತಂದೆ! ₹26,500 ಫೈನ್

ಬಾಲಕ ಓಡಿಸಿದ ಬೊಲೆರೊ, ದಂಡ ಕಟ್ಟಿದ ತಂದೆ! ₹26,500 ಫೈನ್ A Shivamogga court fined a father ₹26,500…

18 hours ago

ಸಾಗರ ಗ್ರಾಮಾಂತರ ಠಾಣೆಯ ನೂತನ ಪಿಎಸ್‌ಐ ಆಗಿ ಶಂಕರ್ ಗೌಡ ಪಾಟೀಲ್ ನೇಮಕ

ಸಾಗರ ಗ್ರಾಮಾಂತರ ಠಾಣೆಯ ನೂತನ ಪಿಎಸ್‌ಐ ಆಗಿ ಶಂಕರ್ ಗೌಡ ಪಾಟೀಲ್ ನೇಮಕ PSI Shankar Gowda Patil has…

2 days ago