ಕೋಣಂದೂರು : ಹಸು ರಕ್ಷಿಸಲು ಹೋಗಿ ಕೂಲಿ ಕಾರ್ಮಿಕ ಸಾವು
ಕೋಣಂದೂರು ಸಮೀಪದ ಕಾರಕೊಡ್ಲು ಎಂಬಲ್ಲಿ ಬಾವಿಗೆ ಬಿದ್ದಿದ್ದ ಹಸುವನ್ನು ಮೇಲೆತ್ತಲು ಇಳಿದಿದ್ದ ವ್ಯಕ್ತಿ ಉಸಿರುಗಟ್ಟಿ ಸಾವನ್ನಪ್ಪಿದ ಘಟನೆ ಸಂಭವಿಸಿದೆ.
ಕೂಲಿ ಕಾರ್ಮಿಕ, ಕೇರಳದ ಸತೀಶ (45) ಮೃತಪಟ್ಟವನು.
ಕಾರ್ಕೊಡ್ಲುವಿನಲ್ಲಿ ರಾಘು ಎಂಬುವವರು ಇತ್ತೀಚೆಗೆ ರಿಂಗ್ ಬಾವಿ ನಿರ್ಮಿಸಿದ್ದರು. ಅದಕ್ಕೆ ಮಂಗಳವಾರ ಹಸುವೊಂದು ಆಕಸ್ಮಿಕವಾಗಿ ಬಿದ್ದಿತ್ತು. ಅದನ್ನು ರಕ್ಷಿಸಲು ಸತೀಶ್ ಬಾವಿಗೆ
ಇಳಿದಿದ್ದಾಗ ಈ ದುರ್ಘಟನೆ ನಡೆದಿದೆ.
ಸತೀಶ್ ಮತ್ತು ಹಸುವಿನ ಮೃತದೇಹವನ್ನು ಅಗ್ನಿಶಾಮಕ ದಳದವರು ಬುಧವಾರ ಬಾವಿಯಿಂದ ಸಿಬ್ಬಂದಿ ಮೇಲಕ್ಕೆ ತೆಗೆದರು.
ಕೋಣಂದೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ – ಮರಣೋತ್ತರ ಪರೀಕ್ಷೆ ನಡೆಸಿ ಸತೀಶ್ ಅವರ ಮೃತದೇಹವನ್ನು ಕೇರಳಕ್ಕೆ ಕಳುಹಿಸಿಕೊಡಲಾಗಿದೆ.
ತೀರ್ಥಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.