Breaking
12 Jan 2026, Mon

ಕಾಂಗ್ರೆಸ್ ಸೇರ್ಪಡೆ ಆಗುವಂತೆ ಜೆಡಿಎಸ್ ಶಾಸಕಿಗೆ ಮಧು ಬಂಗಾರಪ್ಪ ಓಪನ್ ಆಫರ್.!

ಕಾಂಗ್ರೆಸ್ ಸೇರ್ಪಡೆ ಆಗುವಂತೆ ಜೆಡಿಎಸ್ ಶಾಸಕಿಗೆ ಮಧು ಬಂಗಾರಪ್ಪ ಓಪನ್ ಆಫರ್.!

ಶಿವಮೊಗ್ಗ : ಸಚಿವ ಮಧು ಬಂಗಾರಪ್ಪ ಶಿವಮೊಗ್ಗ ಗ್ರಾಮಾಂತರ ಶಾಸಕಿ ಶಾರದಾ ಪೂರ್ಯನಾಯ್ಕ್ ಅವರಿಗೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಆಗುವಂತೆ ಓಪನ್ ಆಫರ್ ಅನ್ನು ನೀಡಿದ್ದಾರೆ.

ಪುರದಾಳು ಗ್ರಾಮದ ಬಾರೆಹಳ್ಳ ಮತ್ತು ಹಾಯ್​ಹೊಳೆ ಕೆರೆಗಳ ಅಭಿವೃದ್ಧಿ ಕಾಮಗಾರಿಯ ಗುದ್ದಲಿ ಪೂಜೆಯ ಕಾರ್ಯಕ್ರಮದಲ್ಲಿ ಭಾಗವಹಿಸಿ, ಪುರದಾಳು ಗ್ರಾಮ ಸರ್ಕಾರಿ ಶಾಲೆಯಲ್ಲಿ ಭಾಷಣದಲ್ಲಿ ಅವರು ಮಾತನಾಡಿ ಚುನಾವಣೆ ಬಂದಾಗ ನಮಗೆ ಕಷ್ಟ ಆಗುತ್ತದೆ. ಅದಕ್ಕೆ ಶಾರದಕ್ಕನವರಿಗೆ ಹೇಳೋದು, ನೀವಾದ್ರೂ ಬನ್ನಿ, ಇಲ್ಲ ನಾನಾದ್ರೂ ಬರುತ್ತೇನೆ. ಈಗ ಅಧಿಕಾರ ನನ್ನ ಬಳಿ ಇರುವುದರಿಂದ ನಾನು ಸದ್ಯಕ್ಕೆ ಬರೋದಕ್ಕೆ ಆಗಲ್ಲ. ಈಗ ನಾನು ಬಂದು ವೋಟು ಕೇಳೋದು ಕಷ್ಟ ಆಗುತ್ತದೆ. ಜನರಿಗೂ ಸಹ ವೋಟ್ ಹಾಕುವಾಗ ನನಗೆ ಕೇಳಬೇಕೋ ಅಥವಾ ಶಾರದಕ್ಕನಿಗೆ ಕೇಳಬೇಕೋ ಎಂಬ ಕಷ್ಟಕ್ಕೆ ಸಿಲುಕುತ್ತಾರೆ. ಇದರಿಂದ ನೀವೆಲ್ಲಾ ಅವರ ಮನೆಗೆ ಹೋಗಿ ಪ್ರತಿಭಟನೆ ಮಾಡಿ ಎಂದು ತಮಾಷೆಯಾಗಿ ಹೇಳಿದರು.
ಯಾವಾಗ್ಲೂ ಬುದ್ಧಿವಂತಿಕೆ ಹೇಗೆ ಇರಬೇಕು ಅಂದ್ರೆ ಅಂತ ತಮ್ಮ ತಂದೆ ಹೇಳುತ್ತಿದ್ದ ಇಂಗ್ಲಿಷ್​ನ ಗಾದೆ ಮಾತನ್ನು ಹೇಳಿದರು. ‘ಮೇಕ್ ಎ ವೈಲ್ ಸನ್​ಶೈನ್’ ಎಂದ್ರೆ ಏನು ಅಂತ ನೆರೆದಿದ್ದವರನ್ನು ಕೇಳಿದ್ರು. ಯಾರೂ ಉತ್ತರ ಹೇಳದೆ ಹೋದಾಗ ಮೇಕ್ ಎ ವೈಲ್ ಸನ್​ಶೈನ್ ಅಂದ್ರೆ ಬಿಸಿಲಿದ್ದಾಗ ಒಣಗಿಸಿಕೊಳ್ಳಬೇಕು. ಅಕ್ಕ ಬಿಸಿಲಿದೆ, ತೀರ್ಮಾನ ಮಾಡಿ ಎಂದರು.

ಗ್ರಾಮದಲ್ಲಿ ದೇವಾಲಯಗಳನ್ನು ದೊಡ್ಡದಾಗಿ ಕಟ್ಟಬೇಡಿ, ಶಾಲೆಗಳನ್ನು ದೊಡ್ಡದಾಗಿ ಕಟ್ಟಿ, ಮಕ್ಕಳಿಗೆ ವಿದ್ಯಾಭ್ಯಾಸ ಕೊಟ್ಟರೆ ದೇವರು ನಿಮಗೆ ನೂರಕ್ಕೆ ನೂರರಷ್ಟು ಪ್ರಸಾದವನ್ನ ಕೊಡುತ್ತಾರೆ. ಮಕ್ಕಳಿಗೆ ವಿದ್ಯಾಭ್ಯಾಸ ಕೊಟ್ಟರೆ ಆ ಮಕ್ಕಳು ರಾಜ್ಯ, ದೇಶವನ್ನು ಪ್ರಗತಿಯತ್ತ ಕೊಂಡೊಯ್ಯುತ್ತಾರೆ ಎಂದು ಶಿಕ್ಷಣ ಸಚಿವರು ಹೇಳಿದರು.

About The Author

By ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Leave a Reply

Your email address will not be published. Required fields are marked *