ಪೊಲೀಸರ ಕ್ಷಿಪ್ರ ಕಾರ್ಯಾಚರಣೆ – ವೃದ್ದೆಯ ಮಾಂಗಲ್ಯ ಸರ ಅಪಹರಿಸಿದ್ದ ಆರೋಪಿಯ ಬಂಧನ
ಸಾಗರ : ಸಂಜೆ ವೇಳೆ ಮನೆಯ ವಿದ್ಯುತ್ ಸಂಪರ್ಕ ಕಡಿತಗೊಳಿಸಿ, ವೃದ್ದೆಯ ಮಾಂಗಲ್ಯ ಸರ ಅಪಹರಿಸಿ ಪರಾರಿಯಾಗಿದ್ದ ಆರೋಪಿಯನ್ನು, ಘಟನೆ ನಡೆದ 24 ಗಂಟೆಯೊಳಗೆ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಬಂಧಿಸುವಲ್ಲಿ ಸಾಗರ ಗ್ರಾಮಾಂತರ ಠಾಣೆ ಪೊಲೀಸರು ಸಫಲರಾಗಿದ್ದಾರೆ.
ಸಾಗರ ತಾಲೂಕು ಶೆಡ್ತಿಕೆರೆ ಗ್ರಾಮದ ನಿವಾಸಿ, ಕೂಲಿ ಕೆಲಸ ಮಾಡಿ ಜೀವನ ಸಾಗಿಸುತ್ತಿದ್ದ ರವಿಕುಮಾರ್ ಸಿ (39) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ.
ಆರೋಪಿಯಿಂದ ಕಳವು ಮಾಡಿದ್ದ ಅಂದಾಜು 2. 26 ಲಕ್ಷ ರೂ. ಮೌಲ್ಯದ 26 ಗ್ರಾಂ 400 ಮಿಲಿ ತೂಕದ ಮಾಂಗಲ್ಯ ಸರವನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಸಾಗರ ಡಿವೈಎಸ್ಪಿ ಗೋಪಾಲಕೃಷ್ಣ ನಾಯ್ಕ್ ಟಿ ಮೇಲ್ವಿಚಾರಣೆಯಲ್ಲಿ ಇನ್ಸ್’ಪೆಕ್ಟರ್ ಮಹಾಬಲೇಶ್ವರ ಎಸ್ ಎನ್ ನೇತೃತ್ವದಲ್ಲಿ ಸಬ್ ಇನ್ಸ್’ಪೆಕ್ಟರ್ ಸಿದ್ದರಾಮಪ್ಪ, ಸಿಬ್ಬಂದಿಗಳಾದ ಶೇಖ್ ಫೈರೋಜ್ ಅಹಮದ್, ರವಿಕುಮಾರ್,ಹನುಮಂತ ಜಂಬೂರ್, ನಂದೀಶ್, ಪ್ರವೀಣ್ ಕುಮಾರ್, ವಿಶ್ವನಾಥ್, ಚಾಲಕ ಗಿರೀಶ್ ಬಾಬು, ತಾಂತ್ರಿಕ ಘಟಕದ ಹೆಚ್ ಸಿ ಇಂದ್ರೇಶ್, ಗುರುರಾಜ್, ವಿಜಯಕುಮಾರ್ ಅವರು ಆರೋಪಿಯನ್ನು ಬಂಧಿಸುವಲ್ಲಿ ಸಫಲರಾಗಿದ್ದಾರೆ.
ಘಟನೆ ಹಿನ್ನೆಲೆ :
28-2-2025 ರಂದು ಸಂಜೆ ಶೆಡ್ತಿಕೆರೆ ಗ್ರಾಮದಲ್ಲಿ ವೃದ್ದ
ಮನೆಯ ವಿದ್ಯುತ್ ಸಂಪರ್ಕವನ್ನು ಆರೋಪಿ ಕಡಿತಗೊಳಿಸಿದ್ದ. ನಂತರ ಮನೆಯೊಳಗೆ ನುಗ್ಗಿ, ವೃದ್ದೆಯ ಕೊರಳಲ್ಲಿದ್ದ ಮಾಂಗಲ್ಯ ಸರ ಅಪಹರಿಸಿ ಪರಾರಿಯಾಗಿದ್ದ. ಈ ಕುರಿತಂತೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಬಿಎನ್ಎಸ್ ಕಾಯ್ದೆ ಕಲಂ 309 (4), 332 (ಬಿ) ಅಡಿ ಪ್ರಕರಣ ದಾಖಲಾಗಿತ್ತು.
ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…
ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…
ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…
ಪೊಲೀಸರ ದಿಢೀರ್ ದಾಳಿ – ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…
ರಿಪ್ಪನ್ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…