ಪೊಲೀಸರ ಕ್ಷಿಪ್ರ ಕಾರ್ಯಾಚರಣೆ – ವೃದ್ದೆಯ ಮಾಂಗಲ್ಯ ಸರ ಅಪಹರಿಸಿದ್ದ ಆರೋಪಿಯ ಬಂಧನ
ಸಾಗರ : ಸಂಜೆ ವೇಳೆ ಮನೆಯ ವಿದ್ಯುತ್ ಸಂಪರ್ಕ ಕಡಿತಗೊಳಿಸಿ, ವೃದ್ದೆಯ ಮಾಂಗಲ್ಯ ಸರ ಅಪಹರಿಸಿ ಪರಾರಿಯಾಗಿದ್ದ ಆರೋಪಿಯನ್ನು, ಘಟನೆ ನಡೆದ 24 ಗಂಟೆಯೊಳಗೆ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಬಂಧಿಸುವಲ್ಲಿ ಸಾಗರ ಗ್ರಾಮಾಂತರ ಠಾಣೆ ಪೊಲೀಸರು ಸಫಲರಾಗಿದ್ದಾರೆ.
ಸಾಗರ ತಾಲೂಕು ಶೆಡ್ತಿಕೆರೆ ಗ್ರಾಮದ ನಿವಾಸಿ, ಕೂಲಿ ಕೆಲಸ ಮಾಡಿ ಜೀವನ ಸಾಗಿಸುತ್ತಿದ್ದ ರವಿಕುಮಾರ್ ಸಿ (39) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ.
ಆರೋಪಿಯಿಂದ ಕಳವು ಮಾಡಿದ್ದ ಅಂದಾಜು 2. 26 ಲಕ್ಷ ರೂ. ಮೌಲ್ಯದ 26 ಗ್ರಾಂ 400 ಮಿಲಿ ತೂಕದ ಮಾಂಗಲ್ಯ ಸರವನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಸಾಗರ ಡಿವೈಎಸ್ಪಿ ಗೋಪಾಲಕೃಷ್ಣ ನಾಯ್ಕ್ ಟಿ ಮೇಲ್ವಿಚಾರಣೆಯಲ್ಲಿ ಇನ್ಸ್’ಪೆಕ್ಟರ್ ಮಹಾಬಲೇಶ್ವರ ಎಸ್ ಎನ್ ನೇತೃತ್ವದಲ್ಲಿ ಸಬ್ ಇನ್ಸ್’ಪೆಕ್ಟರ್ ಸಿದ್ದರಾಮಪ್ಪ, ಸಿಬ್ಬಂದಿಗಳಾದ ಶೇಖ್ ಫೈರೋಜ್ ಅಹಮದ್, ರವಿಕುಮಾರ್,ಹನುಮಂತ ಜಂಬೂರ್, ನಂದೀಶ್, ಪ್ರವೀಣ್ ಕುಮಾರ್, ವಿಶ್ವನಾಥ್, ಚಾಲಕ ಗಿರೀಶ್ ಬಾಬು, ತಾಂತ್ರಿಕ ಘಟಕದ ಹೆಚ್ ಸಿ ಇಂದ್ರೇಶ್, ಗುರುರಾಜ್, ವಿಜಯಕುಮಾರ್ ಅವರು ಆರೋಪಿಯನ್ನು ಬಂಧಿಸುವಲ್ಲಿ ಸಫಲರಾಗಿದ್ದಾರೆ.
ಘಟನೆ ಹಿನ್ನೆಲೆ :
28-2-2025 ರಂದು ಸಂಜೆ ಶೆಡ್ತಿಕೆರೆ ಗ್ರಾಮದಲ್ಲಿ ವೃದ್ದ
ಮನೆಯ ವಿದ್ಯುತ್ ಸಂಪರ್ಕವನ್ನು ಆರೋಪಿ ಕಡಿತಗೊಳಿಸಿದ್ದ. ನಂತರ ಮನೆಯೊಳಗೆ ನುಗ್ಗಿ, ವೃದ್ದೆಯ ಕೊರಳಲ್ಲಿದ್ದ ಮಾಂಗಲ್ಯ ಸರ ಅಪಹರಿಸಿ ಪರಾರಿಯಾಗಿದ್ದ. ಈ ಕುರಿತಂತೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಬಿಎನ್ಎಸ್ ಕಾಯ್ದೆ ಕಲಂ 309 (4), 332 (ಬಿ) ಅಡಿ ಪ್ರಕರಣ ದಾಖಲಾಗಿತ್ತು.
ಹೊಸನಗರ ತಾಲೂಕಿನ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಉತ್ತಮ ಶಿಕ್ಷಕಿ ಪ್ರಶಸ್ತಿ | ಶಿಕ್ಷಣ ಸಚಿವರಿಂದ ಅಭಿನಂದನೆ Rural teacher Ratnakumari…
ಬೇಟೆಗೆ ಹೊರಟಿದ್ದ ನಾಲ್ವರ ಬಂಧನ; ಎರಡು ನಾಡ ಬಂದೂಕು ಸೇರಿ ಹಲವು ವಸ್ತು ವಶಕ್ಕೆ ! Four people were…
ಪ್ರವಾಸಿ ಬಸ್ ಪಲ್ಟಿ: ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಸಾವು, 20 ಮಂದಿಗೆ ಗಾಯ nursing students died and 20…
ಬೆಂಗಳೂರು ಮೂಲದ ಸಿವಿಲ್ ಕಂಟ್ರಾಕ್ಟರ್ ತೀರ್ಥಹಳ್ಳಿಯಲ್ಲಿ ನಾಪತ್ತೆ: ಮಾಹಿತಿ ನೀಡಲು ಪೊಲೀಸರ ಮನವಿ 55-year-old Bengaluru-based civil contractor Anil…
ಕರ್ತವ್ಯ ನಿರತ ಅರಣ್ಯ ವಾಚರ್ ಮೇಲೆ ಕರಡಿ ದಾಳಿ: ಆಸ್ಪತ್ರೆಗೆ ಭೇಟಿ ನೀಡಿ ಧೈರ್ಯ ತುಂಬಿದ ಅರಣ್ಯಾಧಿಕಾರಿಗಳು Forest department…
ರಾತ್ರಿ ವೇಳೆ ರೈತನಿಗೆ ಚಾಕು ತೋರಿಸಿ ದರೋಡೆ ಮಾಡಿದ್ದ ಇಬ್ಬರು ಪೊಲೀಸರ ವಶಕ್ಕೆ Shivamogga rural police arrested two…