ರಿಪ್ಪನ್ ಪೇಟೆ : ಪಟ್ಟಣದ ತೀರ್ಥಹಳ್ಳಿ ರಸ್ತೆಯ ನಿವಾಸಿ ಬೆಂಗಳೂರಿನಲ್ಲಿ ಚಲಿಸುತಿದ್ದ ರೈಲಿಗೆ ತಲೆಕೊಟ್ಟು ಸಾವನ್ನಪ್ಪಿರುವ ಘಟನೆ ನಡೆದಿದೆ.
ತೀರ್ಥಹಳ್ಳಿ ರಸ್ತೆಯ ನಿವಾಸಿ ರಾಮನಾಥ್ (28) ಮೃತಪಟ್ಟ ದುರ್ಧೈವಿಯಾಗಿದ್ದಾನೆ. ಶಬರೀಶ ನಗರದ ಸಾಯಿನಾಥ್ ಭಂಡಾರಿಯವರ ಪುತ್ರನಾದ ರಾಮನಾಥ್ ಬೆಂಗಳೂರಿನಲ್ಲಿ ಕಳೆದ ಐದಾರು ವರ್ಷಗಳಿಂದ ಖಾಸಗಿ ಸಂಸ್ಥೆಯಲ್ಲಿ ಉದ್ಯೋಗ ಮಾಡಿಕೊಂಡಿದ್ದನು.
ಚನ್ನಪಟ್ಟಣದಿಂದ ಮದ್ದೂರಿಗೆ ತೆರಳುವ ಮಾರ್ಗದ ನಿಡಗುಂಟೆ ರೈಲ್ವೆ ನಿಲ್ದಾಣದ ಗೇಟ್ ಬಳಿ ದ್ವಿಚಕ್ರ ವಾಹನವನ್ನು(KA 15 ED 9437) ನಿಲ್ಲಿಸಿ ಮೊಬೈಲ್ ನ್ನು ಸ್ವಿಚ್ ಆಫ಼್ ಮಾಡಿ ಅದೇ ನಿಲ್ದಾಣದಲ್ಲಿ ಸೋಮವಾರ ರಾತ್ರಿ 10.30 ರ ಸಮಯದಲ್ಲಿ ಮುರ್ಡೇಶ್ವರ ಎಕ್ಸ್ಪ್ರೆಸ್ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.
ಆತ್ಮಹತ್ಯೆಗೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ , ಚನ್ನಪಟ್ಟಣ ರೈಲ್ವೆ ಪೊಲೀಸರು ಸ್ಥಳಕ್ಕೆ ತೆರಳಿ ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.
ಪೋಸ್ಟ್ ಮ್ಯಾನ್ ನ್ಯೂಸ್ ಗೆ ಅಲ್ಪಕಾಲ ವರದಿಗಾರನಾಗಿ ಕಾರ್ಯನಿರ್ವಹಿಸಿದ್ದ ರಾಮನಾಥ್ ನಿಧನಕ್ಕೆ ಪೋಸ್ಟ್ ಮ್ಯಾನ್ ಸುದ್ದಿ ಬಳಗ ಸಂತಾಪವನ್ನು ಸೂಚಿಸುತ್ತದೆ..
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…
ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…
ರಿಪ್ಪನ್ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…
ಈಸ್ಟ್ವೆಸ್ಟ್ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…
ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…
ಚೋರಡಿ ಲಾಡ್ಜ್ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್ನಲ್ಲಿ ತಂಗಿದ್ದ…