ರಿಪ್ಪನ್ಪೇಟೆ : ಬೀದಿನಾಯಿಗಳಿಂದ ಜಿಂಕೆಮರಿ ರಕ್ಷಣೆ
ಕಾಡಿನಿಂದ ನಾಡಿನತ್ತ ಬಂದ ಜಿಂಕೆಯ ಮರಿಗೆ ನಾಯಿಗಳು ಬೆನ್ನಟ್ಟಿದಾಗ ಸ್ಥಳೀಯರು ಜಿಂಕೆ ಮರಿಯನ್ನು ರಕ್ಷಿಸಿ ಅರಣ್ಯ ಇಲಾಖೆಯವರಿಗೆ ಒಪ್ಪಿಸಿದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ಪೇಟೆ ಸಮೀಪದ ವಡಗೆರೆ ಗ್ರಾಮದ ಬಳಿ ಇಂದು ನಡೆದಿದೆ.
ಅರಣ್ಯದಿಂದ ರಿಪ್ಪನ್ಪೇಟೆ ಸಮೀಪದ ವಡಗೆರೆ ಗ್ರಾಮದ ಅಮರ್ ನಾಥ್ ಕಾಮತ್ ರವರ ತೋಟದ ಬಳಿ ಬಂದ ಜಿಂಕೆ ಮರಿಯನ್ನು ಕಂಡು ಬೀದಿ ನಾಯಿಗಳು ಬೆನ್ನಟ್ಟಿವೆ. ಈ ವೇಳೆ ನಾಯಿಗಳಿಂದ ಪ್ರಾಣ ರಕ್ಷಣೆಗೆ ಜಿಂಕೆ ಮರಿ ಆ ಜಮೀನಿನಲ್ಲಿದ್ದ ಶಿವಾನಂದ ಎಂಬುವವರ ಮನೆಯ ಜಗುಲಿಯಲ್ಲಿ ಆಶ್ರಯ ಪಡೆದಿದ್ದು ಈ ಸಂಧರ್ಭದಲ್ಲಿ ಸ್ಥಳೀಯರು ಅರಣ್ಯ ಸಂಚಾರಿ ದಳ ಸಾಗರ ವಿಭಾಗದ ಪಿಎಸ್ಐ ವಿನಾಯಕ್ ರವರಿಗೆ ಮಾಹಿತಿ ಮುಟ್ಟಿಸಿದ್ದಾರೆ.
ವಿಷಯ ತಿಳಿಯುತಿದ್ದಂತೆ ಸ್ಥಳಕ್ಕಾಗಮಿಸಿದ ಪಿಎಸ್ಐ ವಿನಾಯಕ್ ಹಾಗೂ ಸಿಬ್ಬಂದಿಗಳ ತಂಡ ಬೀದಿನಾಯಿಗಳ ದಾಳಿಯಿಂದ ಗಾಬರಿಗೊಂಡಿದ್ದ ಜಿಂಕೆಮರಿಯನ್ನು ಉಪಚರಿಸಿ ಅರಸಾಳು ವಲಯ ಅರಣ್ಯಾಧಿಕಾರಿಗಳಿಗೆ ಒಪ್ಪಿಸಿದ್ದಾರೆ.
ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…
ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…
ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…
ಪೊಲೀಸರ ದಿಢೀರ್ ದಾಳಿ – ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…
ರಿಪ್ಪನ್ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…