RIPPONPETE | ದ್ವಿಪಥ ರಸ್ತೆ ಅಗಲೀಕರಣ ಕಾಮಗಾರಿ ಕಳಪೆ – ಬಿಜೆಪಿ ಗಂಭೀರ ಆರೋಪ , ಪ್ರತಿಭಟನೆಯ ಎಚ್ಚರಿಕೆ

RIPPONPETE | ದ್ವಿಪಥ ರಸ್ತೆ ಅಗಲೀಕರಣ ಕಾಮಗಾರಿ ಕಳಪೆ – ಬಿಜೆಪಿ ಗಂಭೀರ ಆರೋಪ , ಪ್ರತಿಭಟನೆಯ ಎಚ್ಚರಿಕೆ

ರಿಪ್ಪನ್‌ಪೇಟೆ : ಸಾಗರ ರಸ್ತೆಯ ಎಪಿಎಂಸಿ ಯಾರ್ಡ್ ನಿಂದ ವಿನಾಯಕ ವೃತ್ತ ಮತ್ತು ತೀರ್ಥಹಳ್ಳಿ ರಸ್ತೆ  ದ್ವಿ ಪಥ ರಸ್ತೆ ಕಾಮಗಾರಿ ಸಂಪೂರ್ಣವಾಗಿ ಕಳಪೆಯಾಗಿದೆ ಎಂದು ರಿಪ್ಪನ್ ಪೇಟೆ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಎನ್ ಸತೀಶ್ ಗಂಭೀರ ಆರೋಪ ಮಾಡಿದ್ದಾರೆ.

ಪಟ್ಟಣದ ವಿನಾಯಕ ವೃತ್ತದ ಸತ್ಕಾರ್ ಸಭಾಂಗಣದಲ್ಲಿ ಪತ್ರೀಕಾ ಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು 2022 ರಲ್ಲಿ ಮಾಜಿ ಸಚಿವ ಹರತಾಳು ಹಾಲಪ್ಪ ರವರ ವಿಶೇಷ ಆಸಕ್ತಿಯಿಂದ ದ್ವಿಪಥ ರಸ್ತೆ ಕಾಮಗಾರಿಗೆ ಸುಮಾರು 5.13 ಕೋಟಿ ರೂ ಅನುದಾನವನ್ನು ತರಲಾಗಿತ್ತು ಆದರೆ ಕೆಲವೊಂದು ತಾಂತ್ರಿಕ ಸಮಸ್ಯೆ ಹಾಗೂ ಖಾಸಗಿ ವ್ಯಕ್ತಿಯ ಕಟ್ಟಡ ತೆರವು ವಿಳಂಬವಾದ ಹಿನ್ನೆಲೆಯಲ್ಲಿ ಕಾಮಗಾರಿ ಕುಂಟುತ್ತಾ ಸಾಗಿದ್ದು ಇನ್ನು ಸಂಪೂರ್ಣವಾಗದೇ ಪಟ್ಟಣದ ಜನತೆಗೆ ಧೂಳು ಭಾಗ್ಯ ದೊರಕಿದಂತಾಗಿದೆ.

ಈಗ ಮಾರ್ಚ್ ತಿಂಗಳ ಅಂತ್ಯದ ಹಿನ್ನಲೆಯಲ್ಲಿ ಗುತ್ತಿಗೆದಾರರು ಬಿಲ್ ಮಾಡಿಕೊಳ್ಳುವ ಉದ್ದೇಶದಿಂದ ರಸ್ತೆ ಕಾಮಗಾರಿಯನ್ನು ಬೇಕಾಬಿಟ್ಟಿ ಕಳಪೆಯಾಗಿ ಮಾಡುತಿದ್ದು ಇದನ್ನು ಮೇಲ್ವಿಚಾರಣೆ ಮಾಡುವ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ನಿರ್ಲಕ್ಷ್ಯ ತೋರಿದ್ದಾರೆ ಎಂದು ಆರೋಪಿಸಿದರು.

ಇನ್ನೂ ಪುಟ್ ಪಾತ್ ನಿರ್ಮಾಣಕ್ಕಾಗಿ ಚರಂಡಿಯಿಂದ 6 ಅಡಿ ಬಿಡಬೇಕೆಂದು ಇಲ್ಲದಿದ್ದಲಿ ಜೆಸಿಬಿ ಮೂಲಕ ತೆರವುಗೊಳಿಸುವುದಾಗಿ ತಾಲೂಕ್ ಆಡಳಿತ ಹಾಗೂ ಗ್ರಾಮಾಡಳಿತ ಮೈಕ್ ನಲ್ಲಿ ಪ್ರಕಟಣೆ ಮಾಡಿದ ಹಿನ್ನೆಲೆಯಲ್ಲಿ ಜನ ಸಾಮಾನ್ಯರು ಬೆದರಿ ತಮ್ಮ ಅಂಗಡಿ ಮುಂಗಟ್ಟು ಹಾಗೂ ಮನೆಗಳನ್ನು ಒಡೆದು ಊರಿನ ಅಭಿವೃದ್ದಿಗೆ ಸಹಕರಿಸಿದ್ದಾರೆ ಆದರೆ ಸಾಗರ ರಸ್ತೆಯಲ್ಲಿ ಕೆಲವು ಪ್ರಭಾವಿ ವ್ಯಕ್ತಿಗಳು ಈ ಪ್ರಕಟಣೆಗೆ ಕ್ಯಾರೆ ಎನ್ನದೇ ಅಸಡ್ಡೆ ತೋರುತಿದ್ದಾರೆ ಆದರೆ ಸಂಬಂಧಪಟ್ಟವರು ಈ ಬಗ್ಗೆ ನಿರ್ಲಕ್ಷ್ಯ ತೋರುತಿದ್ದು ಜನಸಾಮಾನ್ಯರಿಗೆ ಒಂದು ನ್ಯಾಯ – ಪ್ರಭಾವಿಗಳಿಗೆ ಒಂದು ನ್ಯಾಯದಂತಾಗಿದೆ. ಕೂಡಲೇ ಪ್ರಕಟಣೆಯಂತೆ ಎಲ್ಲಾ ಕಡೆ 6 ಅಡಿ ತೆರವುಗೊಳಿಸದೇ ಇದ್ದಲ್ಲಿ ಮುಂದಿನ ದಿನಗಳಲ್ಲಿ ಪಕ್ಷದ ವತಿಯಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದರು.

ಮುಖಂಡರಾದ ಎಂ ಬಿ ಮಂಜುನಾಥ್ ಮಾತನಾಡಿ ಊರಿನ ಅಭಿವೃದ್ದಿಗೆ ಕೋಟ್ಯಾಂತರ ರೂ ವೆಚ್ಚ ಮಾಡಿ ರಸ್ತೆ ನಿರ್ಮಾಣ ಮಾಡಲಾಗುತಿದ್ದು ಗುತ್ತಿಗೆದಾರ ಬೇಕಾಬಿಟ್ಟಿ ಕಳಪೆ ಕಾಮಗಾರಿ ಮಾಡುತ್ತಿರುವುದನ್ನು ನೋಡಿಕೊಂಡಿರಲು ಸಾಧ್ಯವಿಲ್ಲ ಕೂಡಲೇ ಸಂಬಂಧಿಸಿದ ಅಧಿಕಾರಿಗಳು ಈ ಬಗ್ಗೆ ಗಮನಹರಿಸಬೇಕು ಎಂದು ಒತ್ತಾಯಿಸಿ , ಒಂದು ಸಮುದಾಯಕ್ಕೆ ಗುತ್ತಿಗೆ ಕಾಮಗಾರಿಯಲ್ಲಿ ಮೀಸಲಾತಿ ನೀಡಲು ಬಾಬಾ ಸಾಹೇಬ್ ಅಂಬೇಡ್ಕರ್ ರಚಿಸಿದ ಸಂವಿಧಾನವನ್ನು ಬದಲಾಯಿಸುತ್ತೇವೆ ಎಂದು ಹೇಳಿದ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹೇಳಿಕೆಯನ್ನು ತೀವ್ರವಾಗಿ ಖಂಡಿಸುತ್ತೇವೆ ಎಂದರು.

ಈ ಸಂಧರ್ಭದಲ್ಲಿ ಗ್ರಾಪಂ ಉಪಾಧ್ಯಕ್ಷ ಸುಧೀಂದ್ರ ಪೂಜಾರಿ, ಗ್ರಾಪಂ ಮಾಜಿ ಅಧ್ಯಕ್ಷೆ ಮಂಜುಳಾ ಕೆ ರಾವ್ , ಗ್ರಾಪಂ ಸದಸ್ಯರಾದ ಪಿ ರಮೇಶ್ , ಸುಂದರೇಶ್ , ಮಲ್ಲಿಕಾರ್ಜುನ್ , ಅಶ್ವಿನಿ ರವಿಶಂಕರ್ , ದೀಪಾ ಸುಧೀರ್ , ವನಮಾಲ ಪ್ರಮುಖರಾದ ಪದ್ಮಾ ಸುರೇಶ್ , ರಾಮಚಂದ್ರ ಬಳೆಗಾರ್ , ಮುರುಳಿ ಕೆರೆಹಳ್ಳಿ, ರಾಘವೇಂದ್ರ ಹಾಗೂ ಇನ್ನಿತರರಿದ್ದರು..

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಬೇಟೆಗೆ ಹೊರಟಿದ್ದ ನಾಲ್ವರ ಬಂಧನ; ಎರಡು ನಾಡ ಬಂದೂಕು ಸೇರಿ ಹಲವು ವಸ್ತು ವಶ

ಬೇಟೆಗೆ ಹೊರಟಿದ್ದ ನಾಲ್ವರ ಬಂಧನ; ಎರಡು ನಾಡ ಬಂದೂಕು ಸೇರಿ ಹಲವು ವಸ್ತು ವಶಕ್ಕೆ ! Four people were…

7 hours ago

ಪ್ರವಾಸಿ ಬಸ್ ಪಲ್ಟಿ: ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಸಾವು, 20 ಮಂದಿಗೆ ಗಾಯ

ಪ್ರವಾಸಿ ಬಸ್ ಪಲ್ಟಿ: ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಸಾವು, 20 ಮಂದಿಗೆ ಗಾಯ nursing students died and 20…

8 hours ago

ಬೆಂಗಳೂರು ಮೂಲದ ಸಿವಿಲ್ ಕಂಟ್ರಾಕ್ಟರ್ ತೀರ್ಥಹಳ್ಳಿಯಲ್ಲಿ ನಾಪತ್ತೆ: ಮಾಹಿತಿ ನೀಡಲು ಪೊಲೀಸರ ಮನವಿ

ಬೆಂಗಳೂರು ಮೂಲದ ಸಿವಿಲ್ ಕಂಟ್ರಾಕ್ಟರ್ ತೀರ್ಥಹಳ್ಳಿಯಲ್ಲಿ ನಾಪತ್ತೆ: ಮಾಹಿತಿ ನೀಡಲು ಪೊಲೀಸರ ಮನವಿ 55-year-old Bengaluru-based civil contractor Anil…

12 hours ago

ಕರ್ತವ್ಯ ನಿರತ ಅರಣ್ಯ ವಾಚರ್ ಮೇಲೆ ಕರಡಿ ದಾಳಿ: ಆಸ್ಪತ್ರೆಗೆ ಭೇಟಿ ನೀಡಿ ಧೈರ್ಯ ತುಂಬಿದ ಅರಣ್ಯಾಧಿಕಾರಿಗಳು

ಕರ್ತವ್ಯ ನಿರತ ಅರಣ್ಯ ವಾಚರ್ ಮೇಲೆ ಕರಡಿ ದಾಳಿ: ಆಸ್ಪತ್ರೆಗೆ ಭೇಟಿ ನೀಡಿ ಧೈರ್ಯ ತುಂಬಿದ ಅರಣ್ಯಾಧಿಕಾರಿಗಳು Forest department…

12 hours ago

ರಾತ್ರಿ ವೇಳೆ ರೈತನಿಗೆ ಚಾಕು ತೋರಿಸಿ ದರೋಡೆ ಮಾಡಿದ್ದ ಇಬ್ಬರು ಪೊಲೀಸರ ವಶಕ್ಕೆ

ರಾತ್ರಿ ವೇಳೆ ರೈತನಿಗೆ ಚಾಕು ತೋರಿಸಿ ದರೋಡೆ ಮಾಡಿದ್ದ ಇಬ್ಬರು ಪೊಲೀಸರ ವಶಕ್ಕೆ Shivamogga rural police arrested two…

12 hours ago

ರಿಪ್ಪನ್‌ಪೇಟೆ ಕೆಪಿಎಸ್‌ನಲ್ಲಿ ಉದ್ಯೋಗಾವಕಾಶ: 2 ಹುದ್ದೆಗಳಿಗೆ ಅರ್ಜಿ ಆಹ್ವಾನ | ಆ.22 ಅರ್ಜಿ ಸಲ್ಲಿಕೆಗೆ ಕೊನೆ ದಿನ

ರಿಪ್ಪನ್‌ಪೇಟೆ ಕೆಪಿಎಸ್‌ನಲ್ಲಿ ಉದ್ಯೋಗಾವಕಾಶ: 2 ಹುದ್ದೆಗಳಿಗೆ ಅರ್ಜಿ ಆಹ್ವಾನ | ಆ.22 ಅರ್ಜಿ ಸಲ್ಲಿಕೆಗೆ ಕೊನೆ ದಿನ Karnataka Public…

12 hours ago