ಶ್ರೀಕ್ಷೇತ್ರ ಹೊಂಬುಜದಲ್ಲಿ ಶ್ರೀ ಪದ್ಮಾವತಿ ದೇವಿ ಉಯ್ಯಾಲೆ ಸೇವೆ

ಶ್ರೀಕ್ಷೇತ್ರ ಹೊಂಬುಜದಲ್ಲಿ ಶ್ರೀ ಪದ್ಮಾವತಿ ದೇವಿ ಉಯ್ಯಾಲೆ ಸೇವೆ

ಅತಿಶಯ ಶ್ರೀಕ್ಷೇತ್ರ ಹೊಂಬುಜದಲ್ಲಿ ಅಧಿದೇವತೆ ಜಗನ್ಮಾತೆ ಯಕ್ಷಿ ಶ್ರೀ ಪದ್ಮಾವತಿ ದೇವಿಯ ರಜತ ಉಯ್ಯಾಲೆ ಸೇವೆಯನ್ನು ಶ್ರೀಕ್ಷೇತ್ರದ ಚಂದ್ರಶಾಲೆಯಲ್ಲಿ ಫೆ. 18ರಂದು ಸಾಯಂಕಾಲ ಶೋಡೋಪಚಾರ ಪೂಜಾ ವಿಧಿ-ವಿಧಾನಗಳೊಂದಿಗೆ ನೆರವೇರಿಸಲಾಯಿತು.

ಅಷ್ಟವಿದಾರ್ಚನೆ ಪೂಜೆಯಲ್ಲಿ ವಿವಿಧ ಪುಷ್ಪ, ಫಲ, ಸುಗಂಧ ದ್ರವ್ಯಗಳಿಂದ ಶ್ರೀ ಪದ್ಮಾವತಿ ದೇವಿಯನ್ನು ಆರಾಧಿಸಿ, ಪದ್ಮಾವತಿ ದೇವಿ ಸ್ತುತಿಗಳೊಂದಿಗೆ ಶಾಸ್ತ್ರೋಕ್ತ ವಿಧಾನದಲ್ಲಿ ಉಯ್ಯಾಲೆ ಸೇವೆಯಲ್ಲಿ ಊರ-ಪರವೂರ ಭಕ್ತರು ಸಮರ್ಪಿಸಿಕೊಂಡರು.

ಸ್ವರ್ಣ ಪಲ್ಲಕ್ಕಿಯಲ್ಲಿ ಉತ್ಸವ ಶ್ರೀ ಪದ್ಮಾವತಿ ದೇವಿ ಜಿನಬಿಂಬವನ್ನು ಜಿನಮಂದಿರದಿಂದ ಭಕ್ತರ ಸೇವೆಯಲ್ಲಿ ಜಯಘೋಷ, ವಾದ್ಯ ವಾದನದಲ್ಲಿ ತರಲಾಯಿತು.

ಗಣಾಧಿಪತಿ ಗಣಧರಾಚಾರ್ಯ ಶ್ರೀ 108 ಕುಂಥುಸಾಗರ ಮಹಾರಾಜರು ಸಸಂಘದ ಮುನಿಶ್ರೀಯವರು, ಆರ್ಯಿಕೆಯರು ಉಪಸ್ಥಿತರಿದ್ದರು. ಪೀಠಾಧೀಶರಾದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಯವರು ವಿಶೇಷ ರಜತ ಉಯ್ಯಾಲೆ ಸೇವೆಯನ್ನು ಮುನಿಶ್ರೀಯವರ ಸಾನಿಧ್ಯದಲ್ಲಿ ಏರ್ಪಡಿಸಿದ್ದರು. ಅಷ್ಟಾವಧಾನ ವಾದ್ಯ, ಶಂಖ, ತಾಳ, ನೃತ್ಯ, ಗದ್ಯ, ಪದ್ಯ, ಸ್ತೋತ್ರ ಪ್ರಸ್ತುತಪಡಿಸಲಾಯಿತು.

ರಜತ ಉಯ್ಯಾಲೆಯಲ್ಲಿ ಶ್ರೀ ಪದ್ಮಾವತಿ ದೇವಿ ಆರಾಧನೆಯನ್ನು ವೀಕ್ಷಿಸಿ, ಪಾಲ್ಗೊಂಡ ಭಕ್ತರು ಧನ್ಯತೆಯಿಂದ ಜಯ ಜಯ ಪದ್ಮಿನಿ ದೇವಿ, ಹರಸು ತಾಯಿ ಪದ್ಮಾವತಿ ಮುಂತಾದ ಜಿನಸ್ತುತಿಗಳನ್ನು ಸಾಮೂಹಿಕವಾಗಿ ಸ್ತುತಿಸಿದರು.

ಶ್ರೀ ಜಿನಭಕ್ತಿ ಗಾಯಕಿ ಜಯಶ್ರೀ ಹೊರನಾಡುರವರಿಂದ ಸುಶ್ರಾವ್ಯ ಪೂಜಾಷ್ಟಕಗಳು ಭಕ್ತರನ್ನು ಭಾವಪರವಶವನ್ನಾಗಿಸಿತು. ಸರ್ವವಾದ್ಯ ಗೋಷ್ಠಿ ಮೇಳೈಸಿ, ಭಕ್ತರನ್ನು ಪುಳಕಿತಗೊಳಿಸಿತು.

ಶ್ರೀ ಪದ್ಮರಾಜ ಹಾಗೂ ಸಹಪುರೋಹಿತರು ಪೂಜಾ ವಿಧಿ-ವಿಧಾನಗಳನ್ನು ಸಾಂಗವಾಗಿ ನೆರವೇರಿಸಿದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Share
Published by
ರಫ಼ಿ ರಿಪ್ಪನ್ ಪೇಟೆ

Recent Posts

RIPPONPETE | ಹಿಂದೂ ಮಹಾಸಭಾ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಸುಧೀಂದ್ರ ಪೂಜಾರಿ , ಪ್ರಧಾನ ಕಾರ್ಯದರ್ಶಿಯಾಗಿ ನವೀನ್ ಆಯ್ಕೆ – ಪದಾಧಿಕಾರಿಗಳ ವಿವರ ಇಲ್ಲಿದೆ

RIPPONPETE | ಹಿಂದೂ ಮಹಾಸಭಾ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಸುಧೀರ್ ಪಿ , ಪ್ರಧಾನ ಕಾರ್ಯದರ್ಶಿಯಾಗಿ ನವೀನ್ ಆಯ್ಕೆ –…

1 hour ago

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಬಳಿಕ ಮನನೊಂದು ವಿಷ ಸೇವಿಸಿದ್ದ ವಿದ್ಯಾರ್ಥಿ ಚಿಕಿತ್ಸೆ ಫಲಿಸದೇ ಸಾವು

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಬಳಿಕ ಮನನೊಂದು ವಿಷ ಸೇವಿಸಿದ್ದ ವಿದ್ಯಾರ್ಥಿ ಚಿಕಿತ್ಸೆ ಫಲಿಸದೇ ಸಾವು A NEET aspirant…

17 hours ago

ಆಗುಂಬೆಯಿಂದ ರಿಪ್ಪನ್‌ಪೇಟೆವರೆಗೆ ಪೊಲೀಸರ ಚೇಸಿಂಗ್ ಪ್ರಕರಣ : ಕಾರು ಬಿಟ್ಟು ಕಾಡಿಗೆ ಪರಾರಿಯಾಗಿದ್ದ ಆರೋಪಿಯ ಬಂಧನ

ಆಗುಂಬೆಯಿಂದ ರಿಪ್ಪನ್‌ಪೇಟೆವರೆಗೆ ಪೊಲೀಸರ ಚೇಸಿಂಗ್ ಪ್ರಕರಣ : ಕಾರು ಬಿಟ್ಟು ಕಾಡಿಗೆ ಪರಾರಿಯಾಗಿದ್ದ ಆರೋಪಿಯ ಬಂಧನ Agumbe Police arrested…

19 hours ago

ಎಂಟು ಕಾಲು, ಮೂರು ಕಿವಿ, ಎರಡು ಬಾಲ, ಎರಡು ನಾಲಿಗೆ ಇರುವ ಕುರಿ ಜನನ – ಗ್ರಾಮಸ್ಥರಲ್ಲಿ ಅಚ್ಚರಿ

ಎಂಟು ಕಾಲು, ಮೂರು ಕಿವಿ, ಎರಡು ಬಾಲ, ಎರಡು ನಾಲಿಗೆ ಇರುವ ಕುರಿ ಜನನ - ಗ್ರಾಮಸ್ಥರಲ್ಲಿ ಅಚ್ಚರಿ A…

19 hours ago

ಆನಂದಪುರ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ : ಬಂಗಾರದ ನಾಣ್ಯಗಳ ನೀಡಿ ₹9.60 ಲಕ್ಷ ವಂಚನೆ – ನಗದು ಸಹಿತ ಆರೋಪಿ ವಶಕ್ಕೆ

ಆನಂದಪುರ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ : ಬಂಗಾರದ ನಾಣ್ಯಗಳ ನೀಡಿ ₹9.60 ಲಕ್ಷ ವಂಚನೆ - ನಗದು ಸಹಿತ ಆರೋಪಿ…

2 days ago

ಸಾಗರ ಬಸ್‌ ಪ್ರಯಾಣದಲ್ಲಿ ಮಹಿಳೆಗೆ ಶಾಕ್: ಗಾಢ ನಿದ್ರೆಯಲ್ಲಿದ್ದ ವೇಳೆ ₹17.55 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ

ಸಾಗರ ಬಸ್‌ ಪ್ರಯಾಣದಲ್ಲಿ ಮಹಿಳೆಗೆ ಶಾಕ್: ಗಾಢ ನಿದ್ರೆಯಲ್ಲಿದ್ದ ವೇಳೆ ₹17.55 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ A…

2 days ago