ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಗೆ ಶಿವಮೊಗ್ಗ ಪ್ರವೇಶಕ್ಕೆ ನಿರ್ಬಂಧ
ಶಿವಮೊಗ್ಗ : ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಅವರಿಗೆ ಶಿವಮೊಗ್ಗ ಪ್ರವೇಶಕ್ಕೆ ಅನುಮತಿ ನಿರಾಕಾರಿಸಲಾಗಿದೆ.ಅವರನ್ನು ಶಿವಮೊಗ್ಗ ಪ್ರವೇಶಿಸಿದಂತೆ ತಡೆದು ವಾಪಸ್ ಕಳುಹಿಸಿದ ಘಟನೆ ಶುಕ್ರವಾರ ರಾತ್ರಿ ನಡೆದಿದೆ.
ಶಿವಮೊಗ್ಗದಲ್ಲಿ ಇವತ್ತು ಪುಸ್ತಕ ಬಿಡುಗಡೆ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಇದಕ್ಕಾಗಿ ಪ್ರಮೋದ್ ಮುತಾಲಿಕ್ ಶಿವಮೊಗ್ಗಕ್ಕೆ ಆಗಮಿಸುತ್ತಿದ್ದರು.
ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ ಅವರನ್ನು ಶಿವಮೊಗ್ಗ ಹೊರವಲಯದ ರಾಗಿಗುಡ್ಡದ ಬಳಿ ತಡೆದು ವಾಪಸ್ ಕಳುಹಿಸಲಾಗಿದೆ. ಫೆಬ್ರವರಿ 28 ರಿಂದ 7 ದಿನಗಳ ಕಾಲ ಪ್ರಮೋದ್ ಮುತಾಲಿಕ್ ಶಿವಮೊಗ್ಗ ಜಿಲ್ಲೆ ಪ್ರವೇಶಿಸದಂತೆ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.
ಶ್ರೀರಾಮ ಸೇನೆ ವತಿಯಿಂದ ಪ್ರಕಟಿಸಲಾದ ಲವ್ ಜಿಹಾದ್ ಪುಸ್ತಕ ಬಿಡುಗಡೆಗಾಗಿ ಪ್ರಮೋದ್ ಮುತಾಲಿಕ್ ಆಗಮಿಸಿದ್ದರು. ಇದಕ್ಕೂ ಮುನ್ನ ಅವರು ಪತ್ರಿಕಾಗೋಷ್ಠಿ ಕರೆದಿದ್ದರು. ನಂತರ ಭದ್ರಾವತಿಯಲ್ಲಿ ನಡೆಯಲಿದ್ದ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಬೇಕಿತ್ತು. ಆದರೆ, ಪ್ರಮೋದ್ ಮುತಾಲಿಕ್ ಶಿವಮೊಗ್ಗ ಪ್ರವೇಶ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ ಹಿನ್ನೆಲೆಯಲ್ಲಿ ಶಿವಮೊಗ್ಗ -ಹೊನ್ನಾಳಿ ರಸ್ತೆಯ ರಾಗಿಗುಡ್ಡ ಕ್ರಾಸ್ ನಲ್ಲಿ ಪ್ರಮೋದ್ ಮುತಾಲಿಕ್ ಅವರ ಕಾರ್ ತಡೆದ ಪೊಲೀಸರು ಆದೇಶ ಪ್ರತಿ ತೋರಿಸಿ ಶಿವಮೊಗ್ಗ ಪ್ರವೇಶಿಸದಂತೆ ಹೇಳಿದ್ದಾರೆ.
ಇದ್ರಿಂದ ಕುಪಿತಗೊಂಡ ಪ್ರಮೋದ್ ಮುತಾಲಿಕ್ , ಕಾಂಗ್ರೆಸ್ ಸರ್ಕಾರದಲ್ಲಿ ಹಿಂದೂಗಳಿಗೆ ರಕ್ಷಣೆ ಇಲ್ಲ. ಹಿಂದುಗಳ ಸ್ವಾತಂತ್ರ್ಯ ಕಸಿದುಕೊಳ್ಳಲಾಗುತ್ತಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಕಿಡಿಕಾರಿದ್ದಾರೆ.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್
Leave a Reply
Cancel reply