ವೇಶ್ಯೆಯರೊಂದಿಗೆ ಸರಸ ಸಲ್ಲಾಪಕ್ಕೆ ಕಳ್ಳತನಕ್ಕಿಳಿದ ಕಿರಾತಕ – ಬಲೆಗೆ ಬಿದ್ದ ಜಾಲಿ ಜಾಲಿ ಕಿಲಾಡಿಯ ಕಥೆ ಕೇಳಿ ಪೊಲೀಸರೇ ಶಾಕ್!
ಹಾವೇರಿ : ಜೀವನ ನಡೆಸೋಕೆ ಕೆಲವರು ಕಳ್ಳತನದ ಕೆಟ್ಟ ದಾರಿ ತುಳಿದಿರೋದನ್ನ ನೋಡಿರುತ್ತೇವೆ. ಆದ್ರೆ ಇಲ್ಲೊಬ್ಬ ಕಳ್ಳ, ವೇಶ್ಯೆಯರೊಂದಿಗೆ ಸರಸ ಸಲ್ಲಾಪ ನಡೆಸಲು ದುಡ್ಡು ಬೇಕು ಅಂತ ಕಳ್ಳತನದ ಹಾದಿ ತುಳಿದಿರುವ ವಿಚಿತ್ರ ಘಟನೆ ನಡೆದಿದೆ. ಸಧ್ಯ ಈ ಕಿಲಾಡಿ ಕಳ್ಳ ಪೊಲೀಸರ ಕೈಗೆ ತಗಲಾಕೊಂಡಿದ್ದಾರೆ.
ಹೌದು, ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಕಾಗಿನೇಲೆ ನಿವಾಸಿ ಆರೋಪಿ ಚಾಂದಬಾಷ್ ಬಂಧಿತ ಆರೋಪಿ. ಈ ಕಳ್ಳತನ ಆರೋಪಿಯನ್ನು ಹಾವೇರಿ ನಗರ ಪೊಲೀಸರು ಬಂಧಿಸಿದ್ದಾರೆ. ಪೊಲೀಸರ ವಿಚಾರಣೆಯಲ್ಲಿ ಕಳ್ಳತನದ ಉದ್ದೇಶವನ್ನು ಬಾಯಿಬಿಟ್ಟಿದ್ದಾನೆ. ಆತನ ಮಾತು ಕೇಳಿ ಸ್ವತಃ ಪೊಲೀಸರೂ ಶಾಕ್ ಆಗಿದ್ದಾರೆ.
ವೇಶ್ಯೆಯರ ಜತೆ ಸರಸ ಸಲ್ಲಾಪಕ್ಕಾಗಿ ಚಾಂದಬಾಷ್ ಬೈಕ್ ಗಳನ್ನೇ ಟಾರ್ಗೆಟ್ ಮಾಡಿದ್ದನು. ಅದರಿಂದ ಬಂದ ಹಣದಲ್ಲೇ ವೇಶ್ಯೆಯರ ಜೊತೆ ಸರಸಸಲ್ಲಾಪ ನಡೆಸುತ್ತಿದ್ದನಂತೆ! ಈಗಾಗಲೇ ಈತ ಒಟ್ಟು 1 ಲಕ್ಷ 40 ಸಾವಿರ ಮೌಲ್ಯದ 6 ಬೈಕ್ ಕದ್ದು ಮಾರಾಟ ಮಾಡಿದ್ದಾನಂತೆ.
ಪೊಲೀಸರ ವಿಚಾರಣೆ ವೇಳೆ ಎಲ್ಲ ವಿಚಾರವನ್ನು ಬಾಯಿಬಿಟ್ಟ ಬಳಿಕ ಪೊಲೀಸರು ಮಾರಾಟವಾಗಿದ್ದ 6 ಬೈಕ್ ಗಳನ್ನು ವಶಕ್ಕೆ ಪಡೆದಿದ್ದಾರೆ. ಸದ್ಯ ಆರೋಪಿಯನ್ನ ಬಂಧಿಸಿ ನ್ಯಾಯಾಂಗಕ್ಕೆ ಒಪ್ಪಿಸಿದ್ದಾರೆ.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್
Leave a Reply