ಮದ್ಯದಂಗಡಿಗೆ ಕಟ್ಟಡ ಬಾಡಿಗೆ ಕೊಟ್ಟಿದ್ದಕ್ಕೆ ಕುಟುಂಬಕ್ಕೆ ಬಹಿಷ್ಕಾರ ಹಾಕಿದ ಗ್ರಾಮಸ್ಥರು
ಮದ್ಯದ ಅಂಗಡಿಗೆ ಕಟ್ಟಡ ಬಾಡಿಗೆ ಕೊಟ್ಟಿದಕ್ಕೆ ಗ್ರಾಮಸ್ಥರೆಲ್ಲಾ ಸೇರಿ ಕುಟುಂಬವೊಂದನ್ನು ಬಹಿಷ್ಕಾರ ಹಾಕಿದ ಘಟನೆವೊಂದು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ತಟ್ಟೆಹಳ್ಳಿ ಗ್ರಾಮದಲ್ಲಿ ನಡೆದಿದೆ.
ಬಹಿಷ್ಕಾರ ಹಾಕಿದ ಕುಟುಂಬಸ್ಥರನ್ನು ಮಾತನಾಡಿಸಿದರೆ 5 ಸಾವಿರ ದಂಡ ಕಟ್ಟಬೇಕು ಎಂಬ ನಿಯಮವನ್ನೂ ಗ್ರಾಮದಲ್ಲಿ ಜಾರಿಗೆ ತರಲಾಗಿದೆ.
ಹೌದು, ಭದ್ರಾವತಿ ತಾಲೂಕಿನ ತಟ್ಟೆಹಳ್ಳಿ ಗ್ರಾಮದ ಮಂಜೋಜಿರಾವ್ ಎಂಬುವರಿಗೆ ಸೇರಿದ ಜಾಗವನ್ನು ಖಾಸಗಿ ವ್ಯಕ್ತಿಯೊಬ್ಬರು 27 ವರ್ಷಕ್ಕೆ ಜಾಗ ಲೀಜ್ ಪಡೆದು ಮದ್ಯದ ಅಂಗಡಿ ತೆರೆದಿದ್ದಾರೆ. ಇದಕ್ಕೆ ವಿರೋಧ ವ್ಯಕ್ತಪಡಿಸಿ ಊರಿನ ಮುಖಂಡರು ಮಂಜೋಜಿರಾವ್ ಕುಟುಂಬಕ್ಕೆ ಊರಿಂದ ಬಹಿಷ್ಕಾರ ಹಾಕಿದ್ದಲ್ಲದೇ ಅವರ ಕುಟುಂಬದವರ ಜೊತೆ ಯಾರಾದರೂ ಮಾತನಾಡಿದರೆ ಅವರಿಗೆ 5 ಸಾವಿರ ದಂಡ ವಿಧಿಸಿದ್ದಾರೆ. ಇದೀಗ ನಮಗೆ ನ್ಯಾಯ ಕೊಡಿಸಿ, ಕುಟುಂಬಕ್ಕೆ ಆದ ಬಹಿಷ್ಕಾರಕ್ಕೆ ಮುಕ್ತಿ ಕೊಡಿಸಿ ಎಂದು ಮಂಜೋಜಿರಾವ್ ಜಿಲ್ಲಾಧಿಕಾರಿಗೆ ಮುಂದೆಯೂ ಆಳಲು ತೋಡಿಕೊಂಡಿದ್ದಾರೆ.
ಮಂಜೋಜಿರಾಮ್ ಅವರದ್ದೇ ಸಮುದಾಯದ ಐದಾರು ಮುಖಂಡರು ಬಹಿಷ್ಕಾರ ಹಾಕಿದ್ದಾರೆ. ಈ ಕುಟುಂಬ ತಮ್ಮ ಸಮುದಾಯವರ ಮನೆಗಳಿಗೆ ಹೋಗುವ ಹಾಗಿಲ್ಲ. ಶುಭ ಸಮಾರಂಭಕ್ಕೆ ಬರುವ ಹಾಗಿಲ್ಲ, ದೇವಸ್ಥಾನಕ್ಕೂ ಎಂಟ್ರಿ ಇಲ್ಲ, ಪೂಜೆಗೆ ಹೋದರೆ ಪೂಜಾರಿ ಪೂಜೆ ಮಾಡುವುದಿಲ್ಲ ಎಂದು ಮಂಜೋಜಿರಾವ್ ಅಳಲು ತೋಡಿಕೊಂಡಿದ್ದಾರೆ.
ಮಗನ ಪರಿಸ್ಥಿತಿ ಕಂಡು ಮಂಜೋಜಿರಾವ್ ತಾಯಿ ಕಣ್ಣೀರಿಡುತ್ತಿದ್ದಾರೆ. ಈ ಕುಟುಂಬವನ್ನು ಮಾತನಾಡಿಸಿದಕ್ಕೆ ವ್ಯಕ್ತಿಯೊಬ್ಬರಿಗೆ ಈಗಾಗಲೇ ಐದು ಸಾವಿರ ದಂಡ ಹಾಕಿದ್ದಾರೆ.
ಇದನ್ನೆಲ್ಲ ನಡೆಸಬಾರದು ಕೂಡಲೇ ಆ ಕುಟುಂಬಕ್ಕೆ ನ್ಯಾಯ ಕೊಡಿಸಿ ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಸಾಗರದ ಇಂದಿರಗಾಂಧಿ ಕಾಲೇಜಿನ ಸೀಮಾ ಕೌಸರ್ ಗೆ ಪಿಎಚ್.ಡಿ ಪದವಿ Seema Kausar, Head and Associate Professor of…
ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಪಿಯು ಕಾಲೇಜು ಪ್ರಾಂಶುಪಾಲರ ವಿರುದ್ಧ ಪೋಕ್ಸೋ, ಅಟ್ರಾಸಿಟಿ ಪ್ರಕರಣ Shivamogga police have registered…
ಕಾರ್ಮಿಕರ ಕಾರ್ಡ್ ಹೆಸರಿನಲ್ಲಿ ವಂಚನೆ ಆರೋಪ: ರಿಪ್ಪನ್ಪೇಟೆಯಲ್ಲಿ ಕಾರ್ಮಿಕರ ಆಕ್ರೋಶ Workers in Ripponpete allege money was collected…
ಹುಂಚದ ಶವಾಗಾರಕ್ಕೆ 6 ವರ್ಷವಾದರೂ ಉದ್ಘಾಟನೆ ಭಾಗ್ಯ ಇಲ್ಲ – ಮುಹೂರ್ತ ಸಿಕ್ಕಿಲ್ಲವೋ, ಅಥವಾ ಸತ್ತವರೇ ಎದ್ದು ಬಂದು ರಿಬ್ಬನ್…
ಈದ್ ಮಿಲಾದ್ ಹಬ್ಬ: ಸೌಹಾರ್ದತೆ ಕಾಪಾಡಲು ಪಿಎಸ್ಐ ರಾಜುರೆಡ್ಡಿ ಕರೆ Ripponpete PSI Rajureddy appeals for peaceful and…
13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೈಕ್ ಕಳ್ಳ ಕೊನೆಗೂ ಪೊಲೀಸರ ಬಲೆಗೆ Bhadravati New Town Police have arrested a…