ಹೆದ್ದಾರಿಯಲ್ಲಿದ್ದ ‘ಪೊಲೀಸ್ ಕಟೌಟ್’ ಹೊತ್ತೊಯ್ದ ಐನಾತಿ ಕಳ್ಳರು

ಹೆದ್ದಾರಿಯಲ್ಲಿದ್ದ ‘ಪೊಲೀಸ್ ಕಟೌಟ್’ ಹೊತ್ತೊಯ್ದ ಐನಾತಿ ಕಳ್ಳರು

ಶಿವಮೊಗ್ಗ  : ವಾಹನಗಳ ವೇಗ ನಿಯಂತ್ರಣಕ್ಕೆಂದು ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್ ಪೊಲೀಸರು ಅಳವಡಿಸಿದ್ದ ರಿಫ್ಲೆಕ್ಟರ್ ಕಟೌಟ್ ವೊಂದನ್ನು, ಐನಾತಿ ಕಳ್ಳರ ತಂಡವೊಂದು ಕಾರಿನಲ್ಲಿ ಆಗಮಿಸಿ ಹೊತ್ತೊಯ್ದ ಕುತೂಹಲಕಾರಿ ಘಟನೆ ಶಿವಮೊಗ್ಗ ನಗರದಲ್ಲಿ ನಡೆದಿದೆ.

ಕಟೌಟ್ ಕಳವು ಮಾಡಿ ಕೊಂಡೊಯ್ಯುತ್ತಿರುವ ದೃಶ್ಯವು, ಕಟ್ಟಡವೊಂದರ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಇದರ ಆಧಾರದ ಮೇಲೆ ಪಶ್ಚಿಮ ಟ್ರಾಫಿಕ್ ಠಾಣೆ ಸಬ್ ಇನ್ಸ್’ಪೆಕ್ಟರ್ ತಿರುಮಲೇಶ್ ಅವರು, ವಿನೋಬನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಎಫ್ಐಆರ್ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಅಪಘಾತಗಳ ತಡೆ ಹಾಗೂ ಮಿತಿಮೀರಿದ ವೇಗದಲ್ಲಿ ಆಗಮಿಸುವ ವಾಹನಗಳ ಸಂಚಾರ ನಿಯಂತ್ರಣಕ್ಕಾಗಿ, ಪಶ್ಚಿಮ ಸಂಚಾರಿ ಠಾಣೆ ಸಬ್ ಇನ್ಸ್’ಪೆಕ್ಟರ್ ತಿರುಮಲೇಶ್ ಅವರು ಕಳೆದ ಕೆಲ ತಿಂಗಳುಗಳ ಹಿಂದೆ, ತಮ್ಮ ಠಾಣಾ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿಗಳ ಅಪಘಾತ ವಲಯ ಪ್ರದೇಶಗಳಲ್ಲಿ, ಟ್ರಾಫಿಕ್ ಪೊಲೀಸ್ ಚಿತ್ರವಿದ್ದ ಹಾಗೂ ಗೋ ಸ್ಲೋ (ನಿಧಾನವಾಗಿ ಚಲಿಸಿ) ಎಂಬ ಸಂದೇಶವಿರುವ ರಿಫ್ಲೆಕ್ಟರ್ ಕಟೌಟ್ ಗಳನ್ನು ಅಳವಡಿಸಿದ್ದರು.

ಅದರಂತೆ ಗಾಡಿಕೊಪ್ಪದ ಮಹೇಂದ್ರ ಶೋ ರೂಂ ಬಳಿಯ ರಾಷ್ಟ್ರೀಯ ಹೆದ್ದಾರಿ ತಿರುವಿನಲ್ಲಿಯೂ ಕಟೌಟ್ ಹಾಕಿದ್ದರು. ಇತ್ತೀಚೆಗೆ ತಿರುಮಲೇಶ್ ಅವರು ಸದರಿ ಹೆದ್ದಾರಿಯಲ್ಲಿ ಗಸ್ತು ಕಾರ್ಯ ನಡೆಸುತ್ತಿದ್ದ ವೇಳೆ, ಕಟೌಟ್ ನಾಪತ್ತೆಯಾಗಿರುವುದು ಕಂಡುಬಂದಿತ್ತು.

ತಕ್ಷಣವೇ ಸಮೀಪದ ಕಟ್ಟಡಗಳಲ್ಲಿನ ಸಿಸಿ ಕ್ಯಾಮರಾ ದೃಶ್ಯಾವಳಿಗಳನ್ನು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ 16/3/2025 ರ ರಾತ್ರಿ 2.20 ಗಂಟೆ ಸುಮಾರಿಗೆ, ಕಾರೊಂದರಲ್ಲಿ ಆಗಮಿಸಿದ ನಾಲ್ವರು ಅಪರಿಚಿತರು, ಕಟೌಟ್ ಮುರಿದು ಕಾರಿನಲ್ಲಿ ಕೊಂಡೊಯ್ದಿರುವುದು ಕಟ್ಟಡವೊಂದರ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿರುವುದು ಪತ್ತೆಯಾಗಿತ್ತು.

ಇದರ ಆಧಾರದ ಮೇಲೆ ಪಿಎಸ್ಐ ತಿರುಮಲೇಶ್ ಅವರು ಮಾರ್ಚ್ 20 ರಂದು ವಿನೋಬನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೊಲೀಸ್ ಇಲಾಖೆಗೆ ಸೇರಿದ ವಸ್ತು ಕಳವು ಮಾಡಿದ ಐನಾತಿ ಆರೋಪಿಗಳು ಯಾರೆಂಬುವುದು ಇನ್ನಷ್ಟೆ ಸ್ಪಷ್ಟವಾಗಬೇಕಾಗಿದೆ.

ನಿಧಾನವಾಗಿ ಚಲಿಸಿ (ಗೋ ಸ್ಲೋ) ಎಂಬ ಘೋಷ ವಾಕ್ಯ ತೋರ್ಪಡಿಸುವ ಆಳೆತ್ತರದ ‘ಟ್ರಾಫಿಕ್ ಪೊಲೀಸ್ ರಿಫ್ಲೆಕ್ಟ್ ಕಟೌಟ್’ ಗಳು ದೂರದಿಂದ ನೋಡಿದರೆ, ಟ್ರಾಫಿಕ್ ಪೊಲೀಸ್ ಸಿಬ್ಬಂದಿಯಂತೆ ಗೋಚರಿಸುತ್ತದೆ. ಸದರಿ ಕಟೌಟ್ ಗಳು ರಿಫ್ಲೆಕ್ಟ್ (ಪ್ರತಿಫಲನ) ಆಗುವುದರಿಂದ, ಸಂಜೆ ಹಾಗೂ ರಾತ್ರಿಯ ವೇಳೆ ವಾಹನದ ಹೆಡ್ ಲೈಟ್ ಬೆಳಕಿಗೆ ಗೋಚರಿಸುತ್ತವೆ. ಶಿವಮೊಗ್ಗ ಪಶ್ಚಿಮ ಟ್ರಾಫಿಕ್ ಠಾಣೆ ಸಬ್ ಇನ್ಸ್’ಪೆಕ್ಟರ್ ತಿರುಮಲೇಶ್ ಅವರು, ವಾಹನ ದಟ್ಟಣೆ ಹೆಚ್ಚಿರುವ ಮತ್ತು ಅಪಘಾತ ವಲಯ ಸರ್ಕಲ್ ಹಾಗೂ ರಸ್ತೆಗಳಲ್ಲಿ ‘ಟ್ರಾಫಿಕ್ ಪೊಲೀಸ್ ಕಟೌಟ್’ ಗಳನ್ನು ನಿಲ್ಲಿಸಿದ್ದರು. ಈ ಮೂಲಕ ವಾಹನ ಚಾಲಕರ ಗಮನ ಸೆಳೆಯುವ ವಿನೂತನ ಕ್ರಮಕ್ಕೆ ಮುಂದಾಗಿದ್ದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !?

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…

5 hours ago

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…

7 hours ago

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…

24 hours ago

ಪೊಲೀಸರ ದಿಢೀರ್ ದಾಳಿ –  ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು

ಪೊಲೀಸರ ದಿಢೀರ್ ದಾಳಿ –  ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…

1 day ago

ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ

ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…

1 day ago

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…

2 days ago