ಬಿದರಹಳ್ಳಿಯಲ್ಲಿ ಮನೆಗಳ್ಳತನ ಮಾಡಿದ್ದ ಮೂವರು ಆರೋಪಿಗಳ ಮಾಲು ಸಮೇತ ಬಂಧನ
ರಿಪ್ಪನ್ ಪೇಟೆ : ಇಲ್ಲಿನ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ಬಿದರಹಳ್ಳಿ ಗ್ರಾಮದಲ್ಲಿ ಪೆಬ್ರವರಿ ತಿಂಗಳಿನಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣದ ಆರೋಪಿಗಳನ್ನು ಪಿಎಸೈ ಪ್ರವೀಣ್ ಎಸ್ ಪಿ ನೇತ್ರತ್ವದ ಸಿಬ್ಬಂದಿಗಳು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಿದರಹಳ್ಳಿ ಸಮೀಪದ ಮಂಡ್ಲಿ ಗ್ರಾಮದ ಪುರೋಹಿತ ವೃತ್ತಿ ಮಾಡುವ ಸ್ವಾಮಿ ಹಾಗೂ ಕುಟುಂಬಸ್ಥರು ಫೆಬ್ರವರಿ 15 ರಂದು ಹಾವೇರಿ ಜಿಲ್ಲೆಯ ದೇವಸ್ಥಾನಕ್ಕೆ ತೆರಳಿ ವಾಪಾಸು ಹಿಂದಿರುಗಿದಾಗ ಮನೆಯ ಹಿಂಬದಿಯ ಬಾಗಿಲು ಮುರಿದು ಬೆಡ್ ರೂಮ್ ನಲ್ಲಿದ್ದ ಗಾಡ್ರೇಜ್ ಮುರಿದು 105000 (ಒಂದು ಲಕ್ಷದ ಐದು ಸಾವಿರ) ಮೌಲ್ಯದ ಚಿನ್ನಾಭರಣ ಹಾಗೂ ನಗದನ್ನು ಕಳ್ಳತನ ಮಾಡಲಾಗಿತ್ತು, ಈ ಬಗ್ಗೆ ರಿಪ್ಪನ್ ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಈ ಬಗ್ಗೆ ತನಿಖೆ ಕೈಗೊಂಡ ರಿಪ್ಪನ್ ಪೇಟೆ ಪೊಲೀಸರು ಶಿವಮೊಗ್ಗ ನಿವಾಸಿಯಾದ ಅಬ್ದುಲ್ ಶಫೀಕ್ ,ಖಲೀಲ್ ಖಾನ್ ,ಸೈಯದ್ ಜಾವೀದ್ ರವರನ್ನು ಬಂಧಿಸಿ ಕಳವು ಮಾಡಿದ್ದ ಚಿನ್ನವನ್ನು ವಶಕ್ಕೆ ಪಡೆದಿದ್ದಾರೆ.
ಕಾರ್ಯಾಚರಣೆಯಲ್ಲಿ ಉಮೇಶ್ , ಸಂತೋಷ್ ಕೊರವರ , ರಾಮಚಂದ್ರ ಹಾಗೂ ಮಧುಸೂಧನ್ ಇದ್ದರು.
ಸಾಗರದ ಇಂದಿರಗಾಂಧಿ ಕಾಲೇಜಿನ ಸೀಮಾ ಕೌಸರ್ ಗೆ ಪಿಎಚ್.ಡಿ ಪದವಿ Seema Kausar, Head and Associate Professor of…
ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಪಿಯು ಕಾಲೇಜು ಪ್ರಾಂಶುಪಾಲರ ವಿರುದ್ಧ ಪೋಕ್ಸೋ, ಅಟ್ರಾಸಿಟಿ ಪ್ರಕರಣ Shivamogga police have registered…
ಕಾರ್ಮಿಕರ ಕಾರ್ಡ್ ಹೆಸರಿನಲ್ಲಿ ವಂಚನೆ ಆರೋಪ: ರಿಪ್ಪನ್ಪೇಟೆಯಲ್ಲಿ ಕಾರ್ಮಿಕರ ಆಕ್ರೋಶ Workers in Ripponpete allege money was collected…
ಹುಂಚದ ಶವಾಗಾರಕ್ಕೆ 6 ವರ್ಷವಾದರೂ ಉದ್ಘಾಟನೆ ಭಾಗ್ಯ ಇಲ್ಲ – ಮುಹೂರ್ತ ಸಿಕ್ಕಿಲ್ಲವೋ, ಅಥವಾ ಸತ್ತವರೇ ಎದ್ದು ಬಂದು ರಿಬ್ಬನ್…
ಈದ್ ಮಿಲಾದ್ ಹಬ್ಬ: ಸೌಹಾರ್ದತೆ ಕಾಪಾಡಲು ಪಿಎಸ್ಐ ರಾಜುರೆಡ್ಡಿ ಕರೆ Ripponpete PSI Rajureddy appeals for peaceful and…
13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೈಕ್ ಕಳ್ಳ ಕೊನೆಗೂ ಪೊಲೀಸರ ಬಲೆಗೆ Bhadravati New Town Police have arrested a…