ಶಿವಮೊಗ್ಗ: ಹೊಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯ ಮಂಗೋಟೆ ಗ್ರಾಮದಲ್ಲಿ ಹಾಸನದ ವ್ಯಕ್ತಿಯೊಬ್ಬರಿಗೆ ನಕಲಿ ಚಿನ್ನದ ನಾಣ್ಯ ಕೊಟ್ಟು 7 ಲಕ್ಷ ರೂ. ವಂಚಿಸಿದ ಪ್ರಕರಣ 24 ಗಂಟೆಯ ಒಳಗಾಗಿ ಇತ್ಯರ್ಥ ಕಂಡಿದೆ.
ಪ್ರಕರಣದಲ್ಲಿ ಚನ್ನಗಿರಿ ತಾಲ್ಲೂಕಿನ ಚಿಕ್ಕಬ್ಬಿಕೆರೆ ಗ್ರಾಮದ ಸುನೀಲ್ (34) ಹಾಗೂ ನಾಗಪ್ಪ (50) ಎಂಬವರನ್ನು ಹೊಳೆಹೊನ್ನೂರು ಠಾಣೆಯ ಪೊಲೀಸರು ಬಂಧನ ಮಾಡಿದ್ದಾರೆ.
ಹಾಸನ ಅಮುಲ್ ಡೈರಿಯಲ್ಲಿ ಕೆಲಸ ಮಾಡ್ತಿದ್ದ ಗಿರಿಗೌಡ ಎಂಬ ವ್ಯಕ್ತಿಗೆ ಚನ್ನಗಿರಿ ತಾಲೂಕಿನ ಚಿಕ್ಕಬ್ಬಿಗೆರೆ ಗ್ರಾಮದ ಸುರೇಶ್ ಎಂಬ ಭದ್ರಾವತಿ ತಾಲೂಕಿನ ಮಂಗೋಟೆ ಗ್ರಾಮದಲ್ಲಿ ನಕಲಿ ಚಿನ್ನದ ನಾಣ್ಯ ನೀಡಿ ತಮ್ಮ ಬಳಿ ಇನ್ನಷ್ಟು ನಾಣ್ಯ ಇರುವುದಾಗಿ ಹೇಳಿದ್ದರು. ಅದನ್ನು ನಂಬಿ ಗಿರಿಗೌಡರು ಏಳು ಲಕ್ಷ ರೂಪಾಯಿ ನೀಡಿದ್ದರು. ಅವರಿಗೆ ಆರೋಪಿಗಳು ನಕಲಿ ನಾಣ್ಯ ಕೊಟ್ಟು ವಂಚಿಸಿದ್ದರು. ಈ ಸಂಬಂಧ ಕಳೆದ 23ರಂದು ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ಆಗಿತ್ತು.
ಸಿಪಿಐ ಲಕ್ಷ್ಮಿಪತಿ, ಪಿಎಸ್ಐಗಳಾದ ರಮೇಶ್, ಮಂಜುನಾಥ್ ಎಸ್ ಕುರಿ, ಕೃಷ್ಣನಾಯ್ಕ್, ಸಿಬ್ಬಂದಿ ವಿಶ್ವನಾಥ್, ಅಣ್ಣಪ್ಪ, ಪ್ರಕಾಶ್, ಕುಬೇರ, ಪ್ರಶಾಂತ್ ತಂಡ ಆರೋಪಿಗಳನ್ನು ಬಂಧಿಸಿದ್ದಾರೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್