RIPPONPETE | ಮದ್ಯದಂಗಡಿ ತೆರವಿಗೆ ಗ್ರಾಮಸ್ಥರ ಪ್ರತಿಭಟನೆ

RIPPONPETE | ಮದ್ಯದಂಗಡಿ ತೆರವಿಗೆ ಗ್ರಾಮಸ್ಥರ ಪ್ರತಿಭಟನೆ

ಹೊಸನಗರ ತಾಲ್ಲೂಕಿನ ರಿಪ್ಪನ್ ಪೇಟೆಯ ಶಿವಮೊಗ್ಗ ರಸ್ತೆಯ ಕೆರೆಹಳ್ಳಿಯಲ್ಲಿರುವ ಎಂಎಸ್‌ಐಎಲ್‌ ಮದ್ಯದಂಗಡಿಯನ್ನು ಕೂಡಲೇ ತೆರವುಗೊಳಿಸುವಂತೆ ಆಗ್ರಹಿಸಿ ಗ್ರಾಮದ ಮಹಿಳೆಯರು ಹಾಗೂ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.

MSIL ಅಂಗಡಿಯ ಮುಂಭಾಗ ಪ್ರತಿಭಟನೆ ನಡೆಸಿದ ಗ್ರಾಮಸ್ಥರು ಗ್ರಾಮದ ಸ್ವಾಸ್ಥ್ಯ ಹದಗೆಡಿಸುತ್ತಿರುವ ಮದ್ಯದಂಗಡಿಯನ್ನು ಕೂಡಲೇ ತೆರವುಗೊಳಿಸುವಂತೆ ಪಟ್ಟು ಹಿಡಿದು ಕುಳಿತಿದ್ದರು.

ಈ ಸಂಧರ್ಭದಲ್ಲಿ ಸ್ಥಳಕ್ಕಾಗಮಿಸಿದ ಪಿಎಸೈ ಪ್ರವೀಣ್ ಎಸ್ ಪಿ ಹಾಗೂ ಅಬಕಾರಿ ಇಲಾಖೆಯ ಅಧಿಕಾರಿ ನಾಗರಾಜ್ ಪ್ರತಿಭಟನಾ ನಿರತರ ಮನವಿಯನ್ನು ಆಲಿಸಿದರು.

ಈ ಸಂಧರ್ಭದಲ್ಲಿ ಮಾತನಾಡಿದ ಸ್ಥಳೀಯರು ಈ ಗ್ರಾಮಕ್ಕೆ ಒಂದೇ ರಸ್ತೆ ಇದ್ದಿ ಗ್ರಾಮಸ್ಥರು ಈ ರಸ್ತೆಯ ಮೂಲಕವೇ ನಡೆದು ಹೋಗಬೇಕಿದೆ. ಮಹಿಳೆಯರು, ಯುವತಿಯರು, ಮಕ್ಕಳಿಗೆ ಮದ್ಯದಂಗಡಿಗೆ ಬರುವ ಕೆಲ ಕಿಡಿಗೇಡಿಗಳಿಂದ ಕಿರಿಕಿರಿಯಾಗುತ್ತಿದೆ. ಕೆಲವರು ರೇಗಿಸಿದ್ದುಂಟು. ತುಂಬಾ ತೊಂದರೆ ಆಗುತ್ತಿದ್ದು, ಕೂಡಲೇ ಮದ್ಯದಂಗಡಿಯನ್ನು ತೆರವುಗೊಳಿಸಬೇಕು’ ಎಂದು ಒತ್ತಾಯಿಸಿದರು.

ಇಲ್ಲಿ ಮದ್ಯ ಖರೀದಿಸಿದ ಮದ್ಯಪ್ರಿಯರು ನಮ್ಮ ಜಮೀನಿನಲ್ಲಿ ಹಾಗೂ ಮನೆಯ ಹಿಂಭಾಗದಲಿ ಬಂದು ಮದ್ಯ ಸೇವನೆ ಮಾಡಿ ಬಾಟಲಿಗಳನ್ನು ಮನಸೋಇಚ್ಚೆ ಪುಡಿ ಮಾಡಿ ಗ್ರಾಮದ ಸ್ವಾಸ್ಥ್ಯವನ್ನು ಹಾಳು ಮಾಡುತಿದ್ದು ಸಂಜೆ 6 ಗಂಟೆಯ ಮೇಲೆ ಮಹಿಳೆಯರು ಮತ್ತು ಮಕ್ಕಳು ಮನೆಯಿಂದ ಹೊರಬರಲು ಆಗದಂತಹ ಸನ್ನಿವೇಶವುಂಟಾಗಿದೆ ಎಂದು ಅಲವತ್ತುಕೊಂಡರು..

ನಂತರ ಮಾತನಾಡಿದ ಅಬಕಾರಿ ಅಧಿಕಾರಿ ನಾಗರಾಜ್ ಈ ಸಮಸ್ಯೆಯ ಬಗ್ಗೆ ಮೇಲಾಧಿಕಾರಿಗಳ ಗಮನಕ್ಕೆ ತಂದು ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿ ಪ್ರತಿ ನಿತ್ಯ ಈ ಭಾಗದಲ್ಲಿ ಅಬಕಾರಿ ಇಲಾಖೆಯಿಂದ ಬೀಟ್ ವ್ಯವಸ್ಥೆ ಕಲಿಸಿಕೊಡಲಾಗುವುದು ಎಂದರು.

ಪಿಎಸ್ ಐ ಪ್ರವೀಣ್ ಎಸ್ ಪಿ ಮಾತನಾಡಿ ಇಲ್ಲಿನ ಸಮಸ್ಯೆಗಳ ಬಗ್ಗೆ ವರದಿಯನ್ನು ಮೇಲಾಧಿಕಾರಿಗೆ ಕಳುಹಿಸಿಕೊಟ್ಟು ಕ್ರಮಕೈಗೊಳ್ಳಲಾಗುವುದು ಹಾಗೂ ಅಸಭ್ಯವಾಗಿ ವರ್ತಿಸುವವರ ಬಗ್ಗೆ ಮಾಹಿತಿ ನೀಡಿದರೇ ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

ಇದೇ ಸಂಧರ್ಭದಲ್ಲಿ ತಹಶೀಲ್ದಾರ್ ರಶ್ಮಿ ಹಾಲೇಶ್ ಪರವಾಗಿ ಗ್ರಾಮ ಲೆಕ್ಕಾಧಿಕಾರಿ ಶೋಭಾ ಗ್ರಾಮಸ್ಥರಿಂದ ಮನವಿ ಸ್ವೀಕರಿಸಿದರು.ನಂತರ ಗ್ರಾಮಸ್ಥರೆಲ್ಲಾ ತೆರಳಿ ಗ್ರಾಪಂ ಅಧ್ಯಕ್ಷರು ಹಾಗೂ ಪಿಡಿಓ ಗೆ ಮನವಿ ಸಲ್ಲಿಸಿದರು.

ಈ ಸಂಧರ್ಭದಲ್ಲಿ ಪ್ರಮುಖರಾದ ರವೀಂದ್ರ ಕೆರೆಹಳ್ಳಿ , ಟೀಕಪ್ಪ ಗೌಡ ,ಶಾಂತಮ್ಮ , ಜಯಮ್ಮ , ಹೇಮಾವತಿ , ವನಿತಾ , ಮುರುಳಿ ಕೆರೆಹಳ್ಳಿ , ಮಂಜುನಾಥ್ ಗೌಡ , ಸಂತೋಷ್ , ಸಚಿನ್ ಗೌಡ , ಅವಿನಾಶ್ , ಗಣೇಶ್ ,  ಹಾಗೂ ಇನ್ನಿತರರಿದ್ದರು

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ನೀರಿನಲ್ಲಿ ಅಡಗಿ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಲು ಯತ್ನ ; ಸಿನಿಮೀಯ ರೀತಿಯಲ್ಲಿ ರೌಡಿಶೀಟರ್‌ನನ್ನು ಬಂಧಿಸಿದ ಪೊಲೀಸರು

ನೀರಿನಲ್ಲಿ ಅಡಗಿ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಲು ಯತ್ನ ; ಸಿನಿಮೀಯ ರೀತಿಯಲ್ಲಿ ರೌಡಿಶೀಟರ್‌ನನ್ನು ಬಂಧಿಸಿದ ಪೊಲೀಸರು Bhadravathi police dramatically…

10 hours ago

ಅಜಾಗರೂಕ ಚಾಲನೆಯಿಂದ ಕೆರೆಗೆ ನುಗ್ಗಿದ ಲಾರಿ! ತಪ್ಪಿದ ಭಾರಿ ದುರಂತ

ಅಜಾಗರೂಕ ಚಾಲನೆಯಿಂದ ಕೆರೆಗೆ ನುಗ್ಗಿದ ಲಾರಿ! ತಪ್ಪಿದ ಭಾರಿ ದುರಂತ A container lorry allegedly driven recklessly under…

10 hours ago

ರಿಪ್ಪನ್‌ಪೇಟೆ ಶಾಲಾ ಮಕ್ಕಳ ಕ್ರೀಡಾಕೂಟದಲ್ಲಿ ಅನಾಹುತ; ಡಿಸ್ಕಸ್ ತಲೆಗೆ ಬಿದ್ದು ಶಿಕ್ಷಕ ಗಂಭೀರ ಗಾಯ

ರಿಪ್ಪನ್‌ಪೇಟೆ ಶಾಲಾ ಮಕ್ಕಳ ಕ್ರೀಡಾಕೂಟದಲ್ಲಿ ಅನಾಹುತ; ಡಿಸ್ಕಸ್ ತಲೆಗೆ ಬಿದ್ದು ಶಿಕ್ಷಕ ಗಂಭೀರ ಗಾಯ A physical education teacher…

15 hours ago

ನೆಲ್ಲಿಬೀಡು ಟಿಪ್ಪರ್ – ಬೈಕ್ ಅಪಘಾತ: ಮಗಳ ಸಾವಿನ ಬಳಿಕ ಚಿಕಿತ್ಸೆ ಫಲಿಸದೆ ತಂದೆಯೂ ಮೃತ್ಯು

ನೆಲ್ಲಿಬೀಡು ಟಿಪ್ಪರ್ – ಬೈಕ್ ಅಪಘಾತ: ಮಗಳ ಸಾವಿನ ಬಳಿಕ ಚಿಕಿತ್ಸೆ ಫಲಿಸದೆ ತಂದೆಯೂ ಮೃತ್ಯು A tragic tipper-bike…

18 hours ago

ಬಾಲಕ ಓಡಿಸಿದ ಬೊಲೆರೊ, ದಂಡ ಕಟ್ಟಿದ ತಂದೆ! ₹26,500 ಫೈನ್

ಬಾಲಕ ಓಡಿಸಿದ ಬೊಲೆರೊ, ದಂಡ ಕಟ್ಟಿದ ತಂದೆ! ₹26,500 ಫೈನ್ A Shivamogga court fined a father ₹26,500…

18 hours ago

ಸಾಗರ ಗ್ರಾಮಾಂತರ ಠಾಣೆಯ ನೂತನ ಪಿಎಸ್‌ಐ ಆಗಿ ಶಂಕರ್ ಗೌಡ ಪಾಟೀಲ್ ನೇಮಕ

ಸಾಗರ ಗ್ರಾಮಾಂತರ ಠಾಣೆಯ ನೂತನ ಪಿಎಸ್‌ಐ ಆಗಿ ಶಂಕರ್ ಗೌಡ ಪಾಟೀಲ್ ನೇಮಕ PSI Shankar Gowda Patil has…

2 days ago