RIPPONPETE | ವಿನಾಯಕ ಸರ್ಕಲ್ ನ್ನು ಸ್ಮಾರ್ಟ್ ಅಂಡ್ ಹೈಟೆಕ್ ಆಗಿ ಅಭಿವೃದ್ದಿಪಡಿಸಲಾಗುವುದು – ಶಾಸಕ ಬೇಳೂರು ಗೋಪಾಲಕೃಷ್ಣ

RIPPONPETE | ವಿನಾಯಕ ಸರ್ಕಲ್ ನ್ನು ಸ್ಮಾರ್ಟ್ ಅಂಡ್ ಹೈಟೆಕ್ ಆಗಿ ಅಭಿವೃದ್ದಿಪಡಿಸಲಾಗುವುದು – ಶಾಸಕ ಬೇಳೂರು ಗೋಪಾಲಕೃಷ್ಣ ಭರವಸೆ

ರಿಪ್ಪನ್‌ಪೇಟೆ;-ರಾಜ್ಯದ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಬಿಜೆಟ್‌ನಲ್ಲಿ 4.09 ಲಕ್ಷ ಒಂಬತ್ತು ಸಾವಿರ ಕೋಟಿ ಬಜೆಟ್ ಮಂಡಿಸಿದ್ದು  ಇದರಿಂದ ಆಭಿವೃದ್ದಿಗೆ ಅನುದಾನದ ಹೊಳೆಯೇ ಹರಿದು ಬರಲಿದ್ದು ಶೀಘ್ರದಲ್ಲಿ  ರಿಪ್ಪನ್‌ಪೇಟೆಯ ವಿನಾಯಕ ವೃತ್ತವನ್ನು ಸ್ಮಾರ್ಟ್ ಅಂಡ್ ಹೈಟೆಕ್ ಸರ್ಕಲ್ ಆಗಿ ಪರಿವರ್ತನೆ  ಮಾಡುವುದಾಗಿ ಹೇಳಿದರು.

ಖಾಸಗಿ ಕಾರ್ಯಕ್ರಮದ ನಿಮಿತ್ತ ಇಂದು ರಿಪ್ಪನ್‌ಪೇಟೆಗೆ ಭೇಟಿ ನೀಡಿ ಮಾಧ್ಯಮ ಪ್ರತಿನಿಧಿಯೊಂದಿಗೆ ಮಾತನಾಡಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಕೆರೆಹಳ್ಳಿ ಮತ್ತು ಸಾಗರ ರಸ್ತೆಯಲ್ಲಿ ಸಾರ್ವಜನಿಕರಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗಿದ್ದು ತಕ್ಷಣ ಬೋರ್‌ವೆಲ್ ಕೊರಸುವಂತೆ ಗ್ರಾಪಂ ಅಧ್ಯಕ್ಷ ಮತ್ತು ಸದಸ್ಯರು ಮನವಿ ಮಾಡುತ್ತಿದ್ದಂತೆ ಸ್ಥಳದಲ್ಲಿದ ಪಿಡಿಓ ರಿಗೆ ಎಲ್ಲಲ್ಲಿ ನೀರಿನ ಸಮಸ್ಯೆ ಇದೆ ಎಂಬ ಬಗ್ಗೆ ಮಾಹಿತಿ ನೀಡಿ ತಕ್ಷಣ ಟಾಸ್ಕ್ ಫೋರ್ಸ್ ನಡಿ ರಿಪ್ಪನ್‌ಪೇಟೆಗೆ ಅಗತ್ಯವಿರುವ ಕಡೆಯಲ್ಲಿ ಬೋರ್‌ವೆಲ್ ಕೊರಸುವಂತೆ ಬೋರ್ ಪಾಯಿಂಟ್ ಮಾಡಿಕೊಳ್ಳುವಂತೆ ಶಾಸಕರು ಸೂಚಿಸಿದರು.

ಹೈಟೆಕ್ ವಿನಾಯಕ ಸರ್ಕಲ್ ;

ಅಧಿವೇಶನ ಮುಗಿಯುತ್ತಿದ್ದಂತೆ ಗ್ರಾಮ ಪಂಚಾಯ್ತಿಯಲ್ಲಿ ಆಧಿಕಾರಿಗಳ ಮತ್ತು ಸಾರ್ವಜನಿಕರ ಸಭೆಯನ್ನು ಕರೆದು ವಿನಾಯಕ ವೃತ್ತವನ್ನು  ಆಗಲಿಕರಣಕ್ಕಾಗಿ 1.20 ಕೋಟಿ ರೂ ಅನುದಾನವನ್ನು ಸರ್ಕಾರ ಬಿಡುಗಡೆ ಮಾಡಿದೆ. ವಿನಾಯಕ ವೃತ್ತ 100 ಮೀಟರ್ ಸುತ್ತಳತೆಯ ರಸ್ತೆ   ಮಧ್ಯದಲ್ಲಿ ಆಶೋಕ ಸ್ತಂಭ ನಿರ್ಮಿಸಿ ಹೈಮಾಸ್ಕ್ ದೀಪಾವನ್ನು ಆಳವಡಿಸುವುದು ಮತ್ತು ನಾಲ್ಕು ಸಂಪರ್ಕ ರಸ್ತೆಯಲ್ಲಿ ಪ್ರಯಾಣಿಕರಿಗೆ ತಂಗುದಾಣ (ಶೆಲ್ಟರ್) ನಿರ್ಮಾಣ ಮತ್ತು ಪ್ಯಾಸಂಜರ್ ಆಟೋದವರಿಗೆ ವಾಹನ ನಿಲುಗಡೆಗೆ ಜಾಗ ಮೀಸಲಿಡುವುದು ಮತ್ತು ರಸ್ತೆ ಬದಿಯಲ್ಲಿ ಪಾದಚಾರಿಗಳಿಗೆ ಪುಟ್‌ಪಾತ್‌ಗೆ ಇಂಟರ್ ಲಾಕ್ ಆಳವಡಿಕೆ  ಸೇರಿದಂತೆ ಇನ್ನಿತರ ಅಭಿವೃದ್ದಿ ಕುರಿತು ಚರ್ಚಿಸಿ ನೀಲನಕ್ಷೆ ತಯಾರಿಸಿ ಕಾಮಗಾರಿ ನಡೆಸುವ ಮೂಲಕ ರಿಪ್ಪನ್‌ಪೇಟೆ ವಿನಾಯಕ ವೃತ್ತವನ್ನು ಸ್ಮಾಟ್ ಹೈಟಕ್ (ಮಾದರಿ) ವೃತ್ತವನ್ನಾಗಿ ಪರಿವರ್ತಿಸಲಾಗುವುದೆಂದು ಹೇಳಿದರು.

ಈಗಾಗಲೇ ಪದವಿ ಕಾಲೇಜ್ ಹತ್ತಿರ 20 ಮೀಟರ್ ರಸ್ತೆ ಅಭಿವೃದ್ದಿ ಪಡಿಸಲಾಗುತ್ತಿದ್ದು ಉಳಿದಂತೆ ಸರ್ಕಾರಿ ಪದವಿ ಪೂರ್ವ ಕಾಲೇಜ್‌ಗೆ ರಸ್ತೆ ನಿರ್ಮಾಣ ಕಾಮಗಾರಿ ಅರಂಭಗೊಂಡಿದೆ.ಇನ್ನೂ ವಿನಾಯಕ ವೃತ್ತದಿಂದ ನಾಲ್ಕು ಸಂಪರ್ಕ ರಾಜ್ಯ ಹೆದ್ದಾರಿಯ ಸಾಗರ-ತೀರ್ಥಹಳ್ಳಿ ರಸ್ತೆಯ ತಲಾ ಒಂದೊಂದು ಕಿ.ಮೀ.ರಸ್ತೆ ಆಗಲೀಕರಣ ಕಾಮಗಾರಿಗೆ 4.85 ಕೋಟಿ ಅನುದಾನ ಬಿಡುಗಡೆಯಾಗಿ ಕಾಮಗಾರಿ ಭರದಿಂದ ಸಾಗಿದೆ. ಅತಿ ಶೀಘ್ರದಲ್ಲಿ ಕಾಮಗಾರಿ ಪೂರ್ಣಗೊಳ್ಳಲಿದೆ.ಇನ್ನೂ ಆನಂದಪುರದಿಂದ ರಿಪ್ಪನ್‌ಪೇಟೆಯ ಆರ್.ಎಂ.ಸಿ.ಯಾರ್ಡ್ ಬಳಿಯ 9 ಕಿ.ಮೀ. ರಸ್ತೆ ಆಗಲಿಕರಣ ಮತ್ತು ಡಾಂಬರೀಕರಣ ಕಾಮಗಾರಿಗೆ 20 ಕೋಟಿ ರೂ ಆನುದಾನ ಬಿಡುಗಡೆಯಾಗಿ ಟೆಂಡರ್ ಮುಗಿದು ಕಾಮಗಾರಿ  ಭರದಿಂದ ಸಾಗಿದ್ದು ಏಪ್ರಿಲ್  ಅಂತ್ಯದೊಳಗೆ ಕಾಮಗಾರಿ ಪೂರ್ಣಗೊಳ್ಳುವುದೆಂದು ವಿವರಿಸಿದರು.

ಈ ಸಂದರ್ಭದಲ್ಲಿ ಗ್ರಾಮಾಧ್ಯಕ್ಷೆ ಧನಲಕ್ಷಿ, ಸದಸ್ಯರಾದ ಡಿ.ಈ.ಮಧುಸೂದನ್, ಗಣಪತಿ ಗವಟೂರು, ಆಶೀಫ್‌ ಭಾಷಾ, ಪ್ರಕಾಶ್ ಪಾಲೇಕರ್,ಮುಖಂಡರಾದ ರವೀಂದ್ರಕೆರೆಹಳ್ಳಿ, ರಮೇಶ, ಮೋಹಿದ್ದೀನ್, ಖಲೀಲ್‌ಷರೀಪ್, ಕೆ.ದೇವರಾಜ್, ಲೇಖನ ಚಂದ್ರಶೇಖರ್, ಸೀತಾರಾಜಪ್ಪ, ಕೆ.ಸುಶೀಲ ಮೂಡಾಗ್ರೆ, ಗಣೇಶರಾವ್, ನರಸಿಂಹ,ಪಿಡಿಓ ನಾಗರಾಜ್, ಸಿಬ್ಬಂದಿ ನಾಗೇಶ್ ಮೋರೆ ಇನ್ನಿತರ ಹಲವರು ಹಾಜರಿದ್ದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ರೈಲು ಪ್ರಯಾಣಿಕರಿಗೆ ಗುಡ್‌ನ್ಯೂಸ್: ಅರಸಾಳು, ಕುಂಸಿ ನಿಲುಗಡೆ ಅವಧಿ ಸೆ.23ರವರೆಗೆ ವಿಸ್ತರಣೆ

ರೈಲು ಪ್ರಯಾಣಿಕರಿಗೆ ಗುಡ್‌ನ್ಯೂಸ್: ಅರಸಾಳು, ಕುಂಸಿ ನಿಲುಗಡೆ ಅವಧಿ ಸೆ.23ರವರೆಗೆ ವಿಸ್ತರಣೆ South Western Railway extends temporary stoppages…

42 minutes ago

ಪ್ರವಾಸಿ ಬಸ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಅಪಘಾತ

ಪ್ರವಾಸಿ ಬಸ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಅಪಘಾತ Tourist bus and fish transport goods vehicle…

1 hour ago

ಬೈಕ್ ಸವಾರನ ಮೇಲೆ ಮುಸಿಯ ದಾಳಿ; ಗಂಭೀರ ಗಾಯ

ಬೈಕ್ ಸವಾರನ ಮೇಲೆ ಮುಸಿಯ ದಾಳಿ; ಗಂಭೀರ ಗಾಯ A bike rider was seriously injured after a…

1 hour ago

ಹೊಸನಗರ ತಾಲೂಕಿನ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಉತ್ತಮ ಶಿಕ್ಷಕಿ ಪ್ರಶಸ್ತಿ | ಶಿಕ್ಷಣ ಸಚಿವರಿಂದ ಅಭಿನಂದನೆ

ಹೊಸನಗರ ತಾಲೂಕಿನ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಉತ್ತಮ ಶಿಕ್ಷಕಿ ಪ್ರಶಸ್ತಿ | ಶಿಕ್ಷಣ ಸಚಿವರಿಂದ ಅಭಿನಂದನೆ Rural teacher Ratnakumari…

9 hours ago

ಬೇಟೆಗೆ ಹೊರಟಿದ್ದ ನಾಲ್ವರ ಬಂಧನ; ಎರಡು ನಾಡ ಬಂದೂಕು ಸೇರಿ ಹಲವು ವಸ್ತು ವಶ

ಬೇಟೆಗೆ ಹೊರಟಿದ್ದ ನಾಲ್ವರ ಬಂಧನ; ಎರಡು ನಾಡ ಬಂದೂಕು ಸೇರಿ ಹಲವು ವಸ್ತು ವಶಕ್ಕೆ ! Four people were…

22 hours ago

ಪ್ರವಾಸಿ ಬಸ್ ಪಲ್ಟಿ: ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಸಾವು, 20 ಮಂದಿಗೆ ಗಾಯ

ಪ್ರವಾಸಿ ಬಸ್ ಪಲ್ಟಿ: ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಸಾವು, 20 ಮಂದಿಗೆ ಗಾಯ nursing students died and 20…

24 hours ago